ರಿಯಾದ್: ಸೌದಿ ಅರೇಬಿಯಾದಲ್ಲಿ ನಿನ್ನೆ ನಡೆದ ವಾಹನ ಅಪಘಾತದಲ್ಲಿ ಒಂಬತ್ತು ಮಂದಿ ಭಾರತೀಯರು ಸೇರಿದಂತೆ ಕನಿಷ್ಠ 15 ಜನರು ಮೃತಪಟ್ಟಿದ್ದಾರೆ. ಸೌದಿ ಅರೇಬಿಯಾದ ನೈಋತ್ಯ ಪ್ರಾಂತ್ಯದ ಜಿಝಾನ್ನಲ್ಲಿ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಬಸ್ಗೆ ಟ್ರೇಲರ್ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ.
ಈ ಘಟನೆ ಸೋಮವಾರ ಬೆಳಿಗ್ಗೆ ಅರಾಮ್ಕೊ ರಿಫೈನರಿ ರಸ್ತೆಯಲ್ಲಿ ನಡೆದಿದೆ. ಮೃತರಲ್ಲಿ 15 ಮಂದಿಯೂ ಜುಬೈಲ್ ಎಸಿಐಸಿ ಕಂಪನಿಯ ಉದ್ಯೋಗಿಗಳಾಗಿದ್ದರು. ಮೃತಪಟ್ಟವರಲ್ಲಿ ಮೂವರು ನೇಪಾಳಿಗಳು ಮತ್ತು ಮೂವರು ಘಾನಾದವರು ಸೇರಿದ್ದಾರೆ. ಗಂಭೀರವಾಗಿ ಗಾಯಗೊಂಡ 11 ಜನರನ್ನು ಜಿಝಾನ್ ಮತ್ತು ಅಬಹಾ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.
ಅರಾಮ್ಕೊ ಯೋಜನೆಯ ಕೆಲಸದ ಸ್ಥಳಕ್ಕೆ 26 ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಎಸಿಐಸಿ ಸರ್ವಿಸ್ ಕಂಪನಿಗೆ ಸೇರಿದ ಮಿನಿ ಬಸ್ ಅಪಘಾತಕ್ಕೀಡಾಗಿದೆ. ನಾಗರಿಕ ರಕ್ಷಣಾ ದಳದ ನೇತೃತ್ವದಲ್ಲಿ ಸಂಪೂರ್ಣವಾಗಿ ನಾಶವಾದ ಮಿನಿಬಸ್ನಿಂದ ಮೃತದೇಹಗಳು ಮತ್ತು ಗಾಯಾಳುಗಳನ್ನು ಹೊರತೆಗೆಯಲಾಯಿತು. 15 ಜನರು ಸ್ಥಳದಲ್ಲೇ ಮೃತಪಟ್ಟಿದ್ದರು.
ಮೃತರನ್ನು ವಿಷ್ಣು ಪ್ರಸಾದ್ ಪಿಳ್ಳೈ(ಕೇರಳ 31 ವರ್ಷ), ಹೇಶ್ ಚಂದ್ರ, ಮುಝಾಫರ್ ಹುಸೈನ್ ಖಾನ್ ಇಮ್ರಾನ್, ಪುಷ್ಕರ್ ಸಿಂಗ್ ದಾಮಿ, ಸಖಲೈನ್ ಹೈದರ್, ತಾರಿಕ್ ಆಲಂ ಮುಹಮ್ಮದ್ ಝಹೀರ್ (ಬಿಹಾರ, 46 ವರ್ಷ), ಮುಹಮ್ಮದ್ ಮೊಹ್ತಶಂ ರಝಾ (ಬಿಹಾರ, 27 ವರ್ಷ), ದಿನಕರ್ ಬಾಯಿ ಹರಿದೈ ಥಂಡಲ್ ಮತ್ತು ರಮೇಶ್ ಕಪೇಲಿ ( ತೆಲಂಗಾಣ, 32) ಮೃತಪಟ್ಟ ಭಾರತೀಯರು ಎಂದು ಗುರುತಿಸಲಾಗಿದೆ.
















ಇನ್ನಷ್ಟು ಸುದ್ದಿಗಳು
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ