ಮಂಗಳೂರು:(ಜನಧ್ವನಿ ವಾರ್ತೆ) ಅನಿವಾಸಿ ಮುಸ್ಲಿಂ ಕನ್ನಡಿಗರ ಅಂತಾರಾಷ್ಟ್ರೀಯ ಸಂಘಟನೆಯಾದ ಕರ್ನಾಟಕ ಕಲ್ಚರಲ್ ಫೌಂಡೇಶನ್ (ಕೆ.ಸಿ.ಎಫ್.) ಇದರ “ಇಂಟರ್ನಾಷನಲ್ ಸಮ್ಮಿಟ್” ಇಂದು ಪೂರ್ವಾಹ್ನ ಹನ್ನೊಂದುವರೆ ಗಂಟೆಗೆ ಮಂಗಳೂರು ಹಂಪನಕಟ್ಟೆಯ ಸೂರ್ಯ ಕನ್ವೆನ್ಷನ್ ಹಾಲ್ನಲ್ಲಿ ನಡೆಯಲಿದೆ.
ಸೌದಿ ಅರೇಬಿಯಾ, ಯು.ಎ.ಇ., ಬಹರೈನ್, ಕುವೈಟ್, ಖತರ್, ಓಮಾನ್, ಮಲೇಷ್ಯಾ ಹಾಗೂ ಲಂಡನ್ ಗಳಲ್ಲಿ ಘಟಕಗಳನ್ನು ಹೊಂದಿರುವ ಕೆ.ಸಿ.ಎಫ್., ಕನ್ನಡಿಗ ಮುಸ್ಲಿಮರ ಸಾಮಾಜಿಕ, ಸಾಂಸ್ಕೃತಿಕ ವೇದಿಕೆಯಾಗಿ ಕಾರ್ಯಾಚರಿಸುತ್ತಿದೆ.
ಐದು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದಿರುವ ಸಂಘಟನೆಯಲ್ಲಿ ಸದ್ಯ ಹತ್ತು ಸಾವಿರಕ್ಕೂ ಅಧಿಕ ಮಂದಿ ಸದಸ್ಯರಿದ್ದು ಊರಿನ ವಿವಿಧ ಜನಪರ ಕಾರ್ಯಗಳಿಗಾಗಿ ಅವರು ಸಕ್ರಿಯವಾಗಿ ದುಡಿಯುತ್ತಿದ್ದಾರೆ
ಸದರಿ ಸಂಘಟನೆಯ ಅಂತಾರಾಷ್ಟ್ರೀಯ ಸಮಿತಿಯ ಮಹಾಸಭೆಯ ಅಂಗವಾಗಿ ಇಂದು ನಡೆಯುವ ಸಮಾವೇಶದಲ್ಲಿ ರಾಜ್ಯದ ಸುನ್ನೀ ಸಂಘಟನಾ ಪ್ರಮುಖರು ಭಾಗವಹಿಸಲಿದ್ದು ಕರ್ನಾಟಕ ಜಂಇಯ್ಯತುಲ್ ಉಲಮಾ ಅಧ್ಯಕ್ಷ ಖಾಝಿ ಶೈಖುನಾ ಬೇಕಲ್ ಉಸ್ತಾದ್ ಉದ್ಘಾಟನೆ ಮಾಡಲಿದ್ದಾರೆ.
ಊರಿನಲ್ಲಿರುವ ಎಲ್ಲಾ ಕೆಸಿಎಫ್ ಸದಸ್ಯರು ಸಮಾವೇಶದಲ್ಲಿ ಭಾಗವಹಿಸುವಂತೆ ಅಧ್ಯಕ್ಷ ಎಸ್ ಪಿ.ಹಂಝ ಸಖಾಫಿ ಬಂಟ್ವಾಳ ವಿನಂತಿಸಿಕೊಂಡಿದ್ದಾರೆ















ಇನ್ನಷ್ಟು ಸುದ್ದಿಗಳು
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ