ಸ್ಟಾಕ್ ಹಾಮ್: 2023ರಲ್ಲಿ ಸ್ವೀಡನ್ನಲ್ಲಿ ಇಸ್ಲಾಂ ಪವಿತ್ರಗ್ರಂಥವಾದ ಖುರ್ಆನ್ ಅನ್ನು ಸುಡುವ ಮೂಲಕ ಸ್ವೀಡನ್ ಮಾತ್ರವಲ್ಲದೆ, ವಿಶ್ವಾದ್ಯಾಂತ ಮುಸ್ಲಿಂ ರಾಷ್ಟ್ರಗಳು ಸಹಿತ ಮಸ್ಲಿಮ್ ಸಮುದಾಯದ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದ್ದ ಸಲ್ವಾನ್ ಮೋಮಿಕಾನನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಎಂದು ವರದಿಯಾಗಿದೆ.
ಖುರ್ಆನ್ ಅನ್ನು ಸುಡುವ ಮೂಲಕ ಭಾರಿ ಪ್ರತಿಭಟನೆಗೆ ಕಾರಣವಾಗಿದ್ದ ಕ್ರಿಶ್ಚಿಯನ್ ಸಮುದಾಯದ ಸಲ್ವಾನ್ ಮೋಮಿಕಾ ಜನಾಂಗೀಯ ಹಿಂಸಾಚಾರ ಪ್ರಚೋದನೆಯಲ್ಲಿ ದೋಷಿಯೇ ಎಂಬ ಕುರಿತು ಗುರುವಾರ ಸ್ಟಾಕ್ ಹಾಮ್ ನ್ಯಾಯಾಲಯವೊಂದು ತೀರ್ಪು ನೀಡುವುದಿತ್ತು.ಆದರೆ, “ಸಲ್ವಾನ್ ಮೋಮಿಕಾ ಮೃತಪಟ್ಟಿರುವುದರಿಂದ, ತೀರ್ಪು ನೀಡಲು ಇನ್ನೂ ಸಾಕಷ್ಟು ಸಮಯಾವಕಾಶ ಬೇಕಿರುವುದರಿಂದ, ತೀರ್ಪನ್ನು ಫೆಬ್ರವರಿ 3ರವರೆಗೆ ಮುಂದೂಡಲಾಗಿದೆ” ಎಂದು ನ್ಯಾಯಾಲಯ ಹೇಳಿದೆ.
ಮೋಮಿಕಾ ವಾಸಿಸುತ್ತಿದ್ದ ಸೊಡರ್ ತಾಳ್ಮೆ ನಗರದಲ್ಲಿ ಗುಂಡಿನ ದಾಳಿ ನಡೆದಿದೆ ಎಂಬ ಮಾಹಿತಿಯನ್ನು ನಾವು ಸ್ವೀಕರಿಸಿದೆವು ಎಂದು ಪ್ರಕಟನೆಯಲ್ಲಿ ಪೊಲೀಸರು ತಿಳಿಸಿದ್ದಾರೆ.
“ಮನೆಯೊಳಗೆ ಗುಂಡಿನ ದಾಳಿ ನಡೆದಿದ್ದು, ಸುದ್ದಿ ತಿಳಿದು ಘಟನಾ ಸ್ಥಳಕ್ಕೆ ಧಾವಿಸಿದ ಪೊಲೀಸರಿಗೆ ಗುಂಡೇಟಿಗೆ ಗುರಿಯಾಗಿರುವ ವ್ಯಕ್ತಿಯೊಬ್ಬ ಕಂಡು ಬಂದಿದ್ದಾನೆ. ಆತನನ್ನು ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲಾಯಿತು” ಎಂದು ಪೊಲೀಸ್ ಪ್ರಕಟನೆಯಲ್ಲಿ ಹೇಳಲಾಗಿದೆ.
ಸಲ್ವಾನ್ ಮೊಮಿಕಾ ಯಾರು?
38 ವರ್ಷದ ಸಲ್ವಾನ್ ಮೊಮಿಕಾ ಇರಾಕ್ ಮೂಲದ ನಿರಾಶ್ರಿತನಾಗಿದ್ದು, ಸ್ವೀಡನ್ನಲ್ಲಿ ಹಲವಾರು ಬಾರಿ ಇಸ್ಲಾಂನ ಪವಿತ್ರ ಗ್ರಂಥವನ್ನು ಸುಟ್ಟುಹಾಕಿ ಅಪವಿತ್ರಗೊಳಿಸಿದ ಆರೋಪ ಈತನ ಮೇಲಿದೆ. ಇದಾದ ನಂತರ ಜನಾಂಗೀಯ ಸಮುದಾಯಗಳ ವಿರುದ್ಧ ಪ್ರಚೋದನೆ ಮಾಡಿದ ಆರೋಪದ ಮೇಲೆ ಸ್ವೀಡಿಷ್ ಅಧಿಕಾರಿಗಳಿಂದ ಸಲ್ವಾನ್ ಮೊಮಿಕಾ ತನಿಖೆಗೆ ಒಳಗಾಗಿದ್ದ.
















ಇನ್ನಷ್ಟು ಸುದ್ದಿಗಳು
ಮಾದಕ ವಸ್ತು ‘ಖಾತ್’ ಮಾರಾಟ: ಭಾರತೀಯ ಪ್ರಜೆ ಸೌದಿಯಲ್ಲಿ ಬಂಧನ
ಅನಿವಾಸಿಗಳಿಗೆ ಶುಭ ಸುದ್ದಿ: ಕುವೈತ್ನಿಂದ ಭಾರತೀಯ ವಿಮಾನ ಸೇವೆಗಳು ಪುನರಾರಂಭ
ಟೋಲ್ ಪ್ಲಾಜಾ ಸಮೀಪದ ನಿವಾಸಿಗಳಿಗೆ ಗುಡ್ ನ್ಯೂಸ್: 20 ಕಿ.ಮೀ ವ್ಯಾಪ್ತಿಯವರಿಗೆ ಡಿಜಿಟಲ್ ಪಾಸ್ ಸೌಲಭ್ಯ!
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ಗೆ ಭರ್ಜರಿ ಗೆಲುವು- ಆಡಳಿತದ ಹಾದಿಗೆ ಸಿಕ್ಕ ಮುದ್ರೆ ಎಂದ ಸಿಎಂ ಡಿ.ಕೆ. ಶಿವಕುಮಾರ್
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ
‘ಗಲ್ಫ್ ಪ್ರದೇಶದ ಸಂಘರ್ಷಗಳನ್ನು ಭಾರತಕ್ಕೆ ನಿರ್ಲಕ್ಷಿಸಲು ಸಾಧ್ಯವಿಲ್ಲ’ – ಭಾರತೀಯ ರಾಯಭಾರಿ ಡಾ. ಸುಹೈಲ್ ಅಜಾಝ್ ಖಾನ್
ಕೆಸಿಎಫ್ ಅಂತಾರಾಷ್ಟ್ರೀಯ ಸಮಿತಿ: ‘E-GEN ಸ್ಕಾಲರ್ಶಿಪ್’ ಗೆ ಅಧಿಕೃತ ಚಾಲನೆ
ಇರಾನ್ ಒಪ್ಪಂದ ಪಾಲಿಸದಿದ್ದರೆ ನೆತ್ತಿ ಮೇಲೆ ಬಾಂಬ್ ವರ್ಷಣ- ಡೊನಾಲ್ಡ್ ಟ್ರಂಪ್ ಖಡಕ್ ಎಚ್ಚರಿಕೆ!
SIR ಪ್ರಕ್ರಿಯೆ: ಮತದಾರರ ಹಕ್ಕು ರಕ್ಷಣೆಗೆ ಸಿಪಿಐ(ಎಂ) ಆಗ್ರಹ- ಮುಖ್ಯಮಂತ್ರಿಗಳಿಗೆ ಮನವಿ