ರಿಯಾದ್: ಭಾರತ ಸೇರಿದಂತೆ 14 ದೇಶಗಳಿಗೆ ಮಲ್ಟಿಪಲ್ ಎಂಟ್ರಿ ಫ್ಯಾಮಿಲಿ ವಿಸಿಟ್ ವೀಸಾಗಳನ್ನು ಸೌದಿ ಅರೇಬಿಯಾ ನಿಲ್ಲಿಸಿದೆ ಎಂಬುದಾಗಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟರ್ ಹರಿದಾಡುತ್ತಿದೆ. ಆದರೆ ಜವಾಝಾತ್ ಅಥವಾ ವಿದೇಶಾಂಗ ಸಚಿವಾಲಯದಿಂದ ಅಂತಹ ಯಾವುದೇ ಅಧಿಸೂಚನೆಯನ್ನು ಅಧಿಕೃತವಾಗಿ ಬಿಡುಗಡೆ ಮಾಡಲಾಗಿಲ್ಲ ಎಂದು ತಿಳಿದುಬಂದಿದೆ.
ಮೇಲ್ನೋಟಕ್ಕೆ ಇದು ನಕಲಿ ಸುದ್ದಿ ಎಂಬುದು ಸ್ಪಷ್ಟವಾಗಿದೆ.ಸೌದಿ ಪ್ರೆಸ್ ಏಜೆನ್ಸಿ (SPA), ವಿದೇಶಾಂಗ ವ್ಯವಹಾರಗಳ ಸಚಿವಾಲಯ ಮತ್ತು ಆಂತರಿಕ ಸಚಿವಾಲಯದ ವೆಬ್ಸೈಟ್ಗಳಲ್ಲಿ ಅಂತಹ ರದ್ದತಿ ಸಂಬಂಧಿಸಿದಂತೆ ಯಾವುದೇ ಅಧಿಕೃತ ಹೇಳಿಕೆಯನ್ನು ಇನ್ನೂ ಪ್ರಕಟಿಸಲಾಗಿಲ್ಲ. ಭಾರತ ಮತ್ತು ಪಾಕಿಸ್ತಾನದಂತಹ ದೇಶಗಳ ರಾಯಭಾರ ಕಚೇರಿಗಳು ಸಹ ಇಂತಹ ಬದಲಾವಣೆಯ ಬಗ್ಗೆ ತಿಳಿಸಿಲ್ಲ.
ಅದೇ ಸಮಯದಲ್ಲಿ, ಇಂದು ಸಂಜೆ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವೆಬ್ಸೈಟ್ ಮೂಲಕ ಬಹು ಪ್ರವೇಶ ಕುಟುಂಬ ಭೇಟಿ ವೀಸಾಕ್ಕೆ ಅರ್ಜಿ ಸಲ್ಲಿಸಲು ಸಾಧ್ಯವಾಗಿಲ್ಲ. ಸಿಂಗಲ್ ಎಂಟ್ರಿ ವಿಸಿಟ್ ವೀಸಾ ಅರ್ಜಿಯನ್ನು ಮಾತ್ರ ಸಲ್ಲಿಸಲು ಸಾಧ್ಯವಾಗುತ್ತಿತ್ತು. ಇದು ತಾಂತ್ರಿಕ ಸಮಸ್ಯೆಯೇ ಎಂಬುದು ಸ್ಪಷ್ಟವಾಗಿಲ್ಲ. ಕೆಲವೊಮ್ಮೆ ಇದು ಸಂಭವಿಸುತ್ತಿರುವುದಾಗಿ ಹೇಳಲಾಗಿದೆ. ಈ ಸೇವೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆಯೇ ಎಂಬುದು ಸ್ಪಷ್ಟವಾಗಿಲ್ಲ. ಆದರೆ, ಸೇವೆಯನ್ನು ಸ್ಥಗಿತಗೊಳಿಸುವ ಕುರಿತು ಯಾವುದೇ ಅಧಿಕೃತ ಪ್ರಕಟಣೆ ಹೊರಬಿದ್ದಿಲ್ಲ.
ಇಥಿಯೋಪಿಯಾ, ಜೋರ್ಡಾನ್, ಭಾರತ, ಪಾಕಿಸ್ತಾನ, ಬಾಂಗ್ಲಾದೇಶ, ಅಲ್ಜೀರಿಯಾ, ಸುಡಾನ್, ಇರಾಕ್, ಮೊರಾಕೊ, ಯೆಮೆನ್, ಇಂಡೋನೇಷ್ಯಾ, ಟುನೀಶಿಯಾ, ಈಜಿಪ್ಟ್ ಮತ್ತು ನೈಜೀರಿಯಾದ ವಿದೇಶಿಯರಿಗೆ ಒಂದು ವರ್ಷಕ್ಕೆ ನೀಡಲಾಗುತ್ತಿದ್ದ ಮಲ್ಟಿಪಲ್ ಎಂಟ್ರಿ ಫ್ಯಾಮಿಲಿ ವಿಸಿಟ್ ವೀಸಾವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಪೋಸ್ಟರ್ಗಳು ಹರಿದಾಡುತ್ತಿವೆ. ಮಲಯಾಳಂ ಮತ್ತು ಇಂಗ್ಲಿಷ್ನಲ್ಲಿ ಪ್ರಸಾರವಾಗುವ ಪೋಸ್ಟರ್ನಲ್ಲಿನ ಮಾಹಿತಿಯು ಸತ್ಯವೇ ಎಂದು ಟ್ರಾವೆಲ್ ಏಜೆನ್ಸಿಗಳು ಮತ್ತು ಮಾಧ್ಯಮ ಸಂಸ್ಥೆಗಳನ್ನೂ ಸಂಪರ್ಕಿಸುತ್ತಿದೆ. ಆಂಗ್ಲ ಭಾಷೆಯಲ್ಲಿ ಪೋಸ್ಟರ್ ಹರಿದಾಡುತ್ತಿರುವುದರಿಂದ ಇತರ ದೇಶಗಳ ಜನರೂ ಆತಂಕಗೊಂಡಿದ್ದಾರೆ.
ಬೇಸಿಗೆ ರಜೆಗೆಂದು ಸೌದಿ ಅರೇಬಿಯಾಕ್ಕೆ ಬರುತ್ತಿರುವ ಕುಟುಂಬಗಳು ಫೇಕ್ ನ್ಯೂಸ್ನಿಂದ ಕಂಗಾಲಾಗಿದ್ದಾರೆ. ಆದರೆ ಈವರೆಗೆ ಯಾವುದೇ ಅಧಿಸೂಚನೆ ಹೊರಬಿದ್ದಿಲ್ಲ. ವಿಶ್ವಾಸಾರ್ಹತೆಯೇ ಇಲ್ಲದ ಸಂಸ್ಥೆಯ ಹೆಸರಿನಲ್ಲಿ ಪೋಸ್ಟರ್ ಹರಿದಾಡುತ್ತಿದೆ. ಪೋಸ್ಟರ್ ನಲ್ಲಿ ದಿನಾಂಕ ನಿಗದಿಪಡಿಸಲಾಗಿಲ್ಲ. ಮೇಲಾಗಿ ಯಾವುದೇ ಮಾಧ್ಯಮಗಳಲ್ಲಿ ಇಂತಹ ಸುದ್ದಿ ಬಂದಿಲ್ಲ. ಅನಿವಾಸಿಗಳು ಸುಳ್ಳು ಸುದ್ದಿಗಳಿಗೆ ಆತಂಕಪಡುವ ಅಗತ್ಯವಿಲ್ಲ.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ