ಚಂದ್ರಾಪುರ: ಮಹಾರಾಷ್ಟ್ರದ ಚಂದ್ರಾಪುರ ಜಿಲ್ಲೆಯ ಹಲವು ಗ್ರಾಮಗಳಲ್ಲಿ ಹಕ್ಕಿ ಜ್ವರದ ಪ್ರಕರಣಗಳು ಏರಿಕೆಯಾದ ಕಾರಣ ‘ಎಚ್ಚರಿಕೆ ವಲಯ’ ಎಂದೂ ಜಿಲ್ಲಾಡಳಿತ ಘೋಷಣೆ ಮಾಡಿದೆ.
ಮಂಗ್ಲಿ ಗ್ರಾಮ ಸೇರಿ ಸುತ್ತಲಿನ 10 ಕಿ.ಮೀ ಪ್ರದೇಶಗಳನ್ನು ‘ಎಚ್ಚರಿಕೆ ವಲಯ’ ಎಂದು ಗುರುತಿಸಿದೆ.
ಜ.25ರಂದು ಮಂಗ್ಲಿ ಗ್ರಾಮದಲ್ಲಿ ಏಕಾಏಕಿ ಕೋಳಿಗಳ ಸಾವು ಸಂಭವಿಸಿತ್ತು. ಪಶುಸಂಗೋಪನಾ ಇಲಾಖೆಯ ಅಧಿಕಾರಿಗಳು ಮಾದರಿ ಸಂಗ್ರಹಿಸಿ ಪರೀಕ್ಷೆ ನಡೆಸಿದಾಗ ಹಕ್ಕಿ ಜ್ವರ ದೃಢಪಟ್ಟಿತ್ತು. ಹೀಗಾಗಿ ಸೋಂಕು ಹರಡುವುದನ್ನು ತಪ್ಪಿಸಲು ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಅಲ್ಲದೆ, ವೈಜ್ಞಾನಿಕ ವಿಧಾನಗಳಿಂದ ಸೋಂಕಿತ ಕೋಳಿಗಳನ್ನು ಕೊಲ್ಲಲು ಕ್ರಮ ಕೈಗೊಳ್ಳಲಾಗುವುದು. ಸೋಂಕಿತ ಕೋಳಿಗಳು ಸತ್ತರೆ ಮಾರ್ಗಸೂಚಿ ಪ್ರಕಾರ ಅವುಗಳನ್ನು ವಿಲೇವಾರಿ ಮಾಡಲಾಗುವುದು ಎಂದು ಹೇಳಿದ್ದಾರೆ.
ಎಚ್ಚರಿಕೆ ವಲಯದಲ್ಲಿ ವಾಹನ ಓಡಾಟಕ್ಕೆ ನಿರ್ಬಂಧ ಹೇರಲಾಗಿದ್ದು, ಮೃತ ಕೋಳಿ, ಚಿಕನ್, ಹಕ್ಕಿಗಳ ಆಹಾರ, ಮೊಟ್ಟೆಗಳ ಖರೀದಿ ನಿಷೇಧಿಸಲಾಗಿದೆ. ಅಲ್ಲದೆ ಗ್ರಾಮದ ಸುತ್ತಲಿನ 5 ಕಿ.ಮೀ ವ್ಯಾಪ್ತಿಯ ಚಿಕನ್ ಅಂಗಡಿಗಳನ್ನೂ ಮುಚ್ಚಲು ಸೂಚನೆ ನೀಡಲಾಗಿದೆ.
















ಇನ್ನಷ್ಟು ಸುದ್ದಿಗಳು
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್