ಮಿಯಾಮಿ: ವಿಮಾನ ಟೇಕ್ ಆಫ್ ಆದ ನಂತರ ಪೈಲಟ್ ಪ್ರಜ್ಞೆ ಕಳೆದುಕೊಂಡರು, ಇದರಿಂದಾಗಿ ವಿಮಾನ ತುರ್ತು ಭೂಸ್ಪರ್ಶ ಮಾಡಬೇಕಾಯಿತು. ಮಿಯಾಮಿಯಿಂದ ಫ್ರಾಂಕ್ಫರ್ಟ್ಗೆ ಹೊರಟಿದ್ದ ಜರ್ಮನ್ ವಿಮಾನಯಾನ ಸಂಸ್ಥೆ ಲುಫ್ತಾನ್ಸಾದ ಬೋಯಿಂಗ್ 747 ತುರ್ತು ಭೂಸ್ಪರ್ಶ ಮಾಡಿದೆ.
ಟೇಕ್ ಆಫ್ ಆದ ಬಳಿಕ ಪೈಲಟ್ ಪ್ರಜ್ಞೆ ಕಳೆದುಕೊಂಡ ನಂತರ ಸಹ ಪೈಲಟ್ ವಿಮಾನವನ್ನು ನಿಯಂತ್ರಣಕ್ಕೆ ತೆಗೆದುಕೊಂಡು LH 463 ವಿಮಾನವನ್ನು ಮಾಂಟ್ರಿಯಲ್ಗೆ ತಿರುಗಿಸಲಾಯಿತು. ಈ ಸಮಯದಲ್ಲಿ, ವಿಮಾನ ಸಿಬ್ಬಂದಿ ಪೈಲಟ್ಗೆ ಪ್ರಥಮ ಚಿಕಿತ್ಸೆ ನೀಡಿದರು. ಪೈಲಟ್ನ ಪ್ರಜ್ಞೆ ತಪ್ಪಿದ ಸ್ಥಿತಿ ಮತ್ತು ಹವಾಮಾನ ಹದಗೆಡುತ್ತಿರುವುದನ್ನು ಪರಿಗಣಿಸಿ, 30,000 ಅಡಿ ಎತ್ತರದಲ್ಲಿರುವ ವಿಮಾನವನ್ನು ನೋವಾ ಸ್ಕಾಟಿಯಾಕ್ಕೆ ತಿರುಗಿಸಲು ನಿರ್ಧರಿಸಲಾಯಿತು.ನಂತರ ವಿಮಾನವು ಮಾಂಟ್ರಿಯಲ್ನಲ್ಲಿ ಸುರಕ್ಷಿತವಾಗಿ ಇಳಿಯಿತು. ಇದು ವಿಮಾನದ ಮೂಲ ಗಮ್ಯಸ್ಥಾನದಿಂದ 1,500 ಮೈಲಿ ದೂರದಲ್ಲಿದೆ. ಪ್ರಯಾಣಿಕರಿಗೆ ಉಂಟಾದ ಅನಾನುಕೂಲತೆಗೆ ಲುಫ್ಥಾನ್ಸ ವಿಷಾದ ವ್ಯಕ್ತಪಡಿಸಿದೆ. ಪ್ರಯಾಣಿಕರ ಸುರಕ್ಷತೆಯೇ ತನ್ನ ಪ್ರಮುಖ ಆದ್ಯತೆ ಎಂದು ವಿಮಾನಯಾನ ಸಂಸ್ಥೆ ಹೇಳಿದೆ.
ಪೈಲಟ್ ಪ್ರಜ್ಞೆ ತಪ್ಪಿದ್ದಕ್ಕೆ ಕಾರಣ ಸ್ಪಷ್ಟವಾಗಿಲ್ಲ. ಅವರ ಆರೋಗ್ಯ ಸ್ಥಿತಿಯ ಬಗ್ಗೆ ಯಾವುದೇ ಹೊಸ ಮಾಹಿತಿ ಲಭ್ಯವಿಲ್ಲ. ವಿಮಾನ ಸುರಕ್ಷಿತವಾಗಿ ಇಳಿಯಿತು ಮತ್ತು ಪೈಲಟ್ಗೆ ತುರ್ತು ವೈದ್ಯಕೀಯ ನೆರವು ನೀಡಲಾಯಿತು ಎಂದು ಲುಫ್ಥಾನ್ಸ ವಕ್ತಾರರು ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಟೋಲ್ ಪ್ಲಾಜಾ ಸಮೀಪದ ನಿವಾಸಿಗಳಿಗೆ ಗುಡ್ ನ್ಯೂಸ್: 20 ಕಿ.ಮೀ ವ್ಯಾಪ್ತಿಯವರಿಗೆ ಡಿಜಿಟಲ್ ಪಾಸ್ ಸೌಲಭ್ಯ!
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ಗೆ ಭರ್ಜರಿ ಗೆಲುವು- ಆಡಳಿತದ ಹಾದಿಗೆ ಸಿಕ್ಕ ಮುದ್ರೆ ಎಂದ ಸಿಎಂ ಡಿ.ಕೆ. ಶಿವಕುಮಾರ್
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ
‘ಗಲ್ಫ್ ಪ್ರದೇಶದ ಸಂಘರ್ಷಗಳನ್ನು ಭಾರತಕ್ಕೆ ನಿರ್ಲಕ್ಷಿಸಲು ಸಾಧ್ಯವಿಲ್ಲ’ – ಭಾರತೀಯ ರಾಯಭಾರಿ ಡಾ. ಸುಹೈಲ್ ಅಜಾಝ್ ಖಾನ್
ಕೆಸಿಎಫ್ ಅಂತಾರಾಷ್ಟ್ರೀಯ ಸಮಿತಿ: ‘E-GEN ಸ್ಕಾಲರ್ಶಿಪ್’ ಗೆ ಅಧಿಕೃತ ಚಾಲನೆ
ಇರಾನ್ ಒಪ್ಪಂದ ಪಾಲಿಸದಿದ್ದರೆ ನೆತ್ತಿ ಮೇಲೆ ಬಾಂಬ್ ವರ್ಷಣ- ಡೊನಾಲ್ಡ್ ಟ್ರಂಪ್ ಖಡಕ್ ಎಚ್ಚರಿಕೆ!
SIR ಪ್ರಕ್ರಿಯೆ: ಮತದಾರರ ಹಕ್ಕು ರಕ್ಷಣೆಗೆ ಸಿಪಿಐ(ಎಂ) ಆಗ್ರಹ- ಮುಖ್ಯಮಂತ್ರಿಗಳಿಗೆ ಮನವಿ
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಕಣ್ಣೂರು: ಕೊನೆಗೂ ನಿಟ್ಟುಸಿರು ಬಿಟ್ಟ ಪ್ರಯಾಣಿಕರು; ಆತಂಕ ಸೃಷ್ಟಿಸಿದ್ದ ಜಿದ್ದಾ ವಿಮಾನ ಸುರಕ್ಷಿತ ಲ್ಯಾಂಡಿಂಗ್