ಕಲಬುರಗಿ : ಸಂಘ ಪರಿವಾರದವರು ಕೆಲವು ಕಡೆ ಬುರ್ಖಾ ಹಾಕಿಕೊಂಡು ಗಲಾಟೆ ಮಾಡೋಕೆ ಹೋಗಿ ಬಿಡ್ತಾರೆ. ಇದೇನು ಹೊಸದಲ್ಲ, ನನ್ನ ಬಳಿ ವಿಡಿಯೋ ಇವೆ ಎಂದು ಕಾಂಗ್ರೆಸ್ ನ ಹಿರಿಯ ಮುಖಂಡ ಬಿಕೆ ಹರಿಪ್ರಸಾದ್ ಹೇಳಿದ್ದಾರೆ.
ಕಲಬುರಗಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಆರ್ ಎಸ್ ಎಸ್ ಗೆ ನೂರು ವರ್ಷ ತುಂಬುತ್ತಿದೆ. ಹಾಗಾಗಿ ಅವರೇ ಈ ರೀತಿ ಮಾಡ್ತಾರೆ. ಆರ್ ಎಸ್ ಎಸ್ ವರ ಎಲ್ಲಾ ಚಿಂತನೆಗಳನ್ನು ಅನುಷ್ಟಾನಕ್ಕೆ ತರಲು ಪ್ರಯತ್ನ ಮಾಡ್ತಿದ್ದಾರೆ. ಆದರೆ ಕರ್ನಾಟಕದಲ್ಲಿ ಅದು ಸಾಧ್ಯವಿಲ್ಲ. ನನ್ನ ಹತ್ರ ವಿಡಿಯೋ ಇದೆ. ಶಾಂತಿ ಕದಡುವ ಯತ್ನವನ್ನು ಅವರೇ ಮಾಡ್ತಿದ್ದಾರೆ. ಎಲ್ಲಾ ಕಡೆ ಶಾಂತಿ ಕದಡಿಸಲು ಪ್ರಯತ್ನ ಮಾಡ್ತಿದ್ದಾರೆ. ವಿಜಯಪುರದಲ್ಲಿ ಪಾಕಿಸ್ತಾನದ ಬಾವುಟ ಹಾರಿಸಿದವನು ಸಂಘ ಪರಿವಾರದವನು ಎಂದರು.
‘ ಕರ್ನಾಟಕ ಸರ್ವ ಜನಾಂಗದ ಶಾಂತಿಯ ತೋಟ ಅಂತಾ ಹೇಳಿದ್ದೇವೆ. ಯಾರೇ ಆಗಲಿ ಯಾವುದೇ ಧರ್ಮ ಜಾತಿ ಭಾಷೆ ಹೆಸರಲ್ಲಿ ಶಾಂತಿ ಕದಡಿದ್ರೆ ಕಾನೂನಿನ ಮೂಲಕ ಕಠಿಣ ಕ್ರಮ ತೆಗೆದುಕೊಳ್ಳಬೇಕು. ನಾನು ಗೃಹ ಸಚಿವರಿಗೆ ಹೇಳೋದು ಇಷ್ಟೆ. ಶಾಂತಿ ಕದಡಲು ಬಹಳ ಪ್ರಯತ್ನ ಮಾಡ್ತಿದ್ದಾರೆ. ಬಿಜೆಪಿ ಅಧಿಕಾರ ಇದ್ದಾಗ ಸೃಷ್ಟಿಯಾದ ಅಶಾಂತಿಯ ವಾತಾವರಣ ಶೇ. 90 ರಷ್ಟು ಎರಡೇ ತಿಂಗಳಲ್ಲಿ ಕಮ್ಮಿ ಆಗಿದೆ. ಮೈಸೂರಿನ ಉದಯಗಿರಿ ಗಲಾಟೆ ಬಿಜೆಪಿ ಆರ್ ಎಸ್ ಎಸ್ ಕೃಪಾಪೋಷಿತ ಕೃತ್ಯಗಳು’ ಎಂದು ಆರೋಪಿಸಿದರು.
ಇದೆ ವೇಳೆ ಮಾತನಾಡಿದ ಅವರು, ಕೆಪಿಸಿಸಿ ಅಧ್ಯಕ್ಷರು, ಮಂತ್ರಿಗಳ ಬದಲಾವಣೆ ಎಲ್ಲವೂ ಹೈಕಮಾಂಡ್ ತೀರ್ಮಾನ ಮಾಡುತ್ತೆ. ಹೈಕಮಾಂಡ್ ಈಗ ಕಲಬುರಗಿಯಲ್ಲೆ ಇದೆ. ಅವರು ಬಂದಾಗ ಕೇಳಿ. ಸರ್ಕಾರ ಬಂದಾಗಿನಿಂದಲೂ ಈ ರೀತಿಯ ಎಲ್ಲಾ ಚರ್ಚೆ ಆಗ್ತಿದೆ. ರಾಜಕೀಯದಲ್ಲಿ ಇವೆಲ್ಲಾ ಚರ್ಚೆಗಳು ನಡೆಯುತ್ತಲೆ ಇರುತ್ತೆ. ನನ್ನ ವಿಚಾರದಲ್ಲಿ ಯಾವ ಶ್ರೀಗಳು ಮಾತಾಡಬಾರದು. ಅದರಲ್ಲೂ ರಾಜಕೀಯವಂತೂ ಸ್ವಾಮೀಜಿಗಳು ಮಾತಾಡಲೇಬಾರದು ಎಂದು ಹೇಳಿದರು.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ