ಕಲಬುರಗಿ : ಸಂಘ ಪರಿವಾರದವರು ಕೆಲವು ಕಡೆ ಬುರ್ಖಾ ಹಾಕಿಕೊಂಡು ಗಲಾಟೆ ಮಾಡೋಕೆ ಹೋಗಿ ಬಿಡ್ತಾರೆ. ಇದೇನು ಹೊಸದಲ್ಲ, ನನ್ನ ಬಳಿ ವಿಡಿಯೋ ಇವೆ ಎಂದು ಕಾಂಗ್ರೆಸ್ ನ ಹಿರಿಯ ಮುಖಂಡ ಬಿಕೆ ಹರಿಪ್ರಸಾದ್ ಹೇಳಿದ್ದಾರೆ.
ಕಲಬುರಗಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಆರ್ ಎಸ್ ಎಸ್ ಗೆ ನೂರು ವರ್ಷ ತುಂಬುತ್ತಿದೆ. ಹಾಗಾಗಿ ಅವರೇ ಈ ರೀತಿ ಮಾಡ್ತಾರೆ. ಆರ್ ಎಸ್ ಎಸ್ ವರ ಎಲ್ಲಾ ಚಿಂತನೆಗಳನ್ನು ಅನುಷ್ಟಾನಕ್ಕೆ ತರಲು ಪ್ರಯತ್ನ ಮಾಡ್ತಿದ್ದಾರೆ. ಆದರೆ ಕರ್ನಾಟಕದಲ್ಲಿ ಅದು ಸಾಧ್ಯವಿಲ್ಲ. ನನ್ನ ಹತ್ರ ವಿಡಿಯೋ ಇದೆ. ಶಾಂತಿ ಕದಡುವ ಯತ್ನವನ್ನು ಅವರೇ ಮಾಡ್ತಿದ್ದಾರೆ. ಎಲ್ಲಾ ಕಡೆ ಶಾಂತಿ ಕದಡಿಸಲು ಪ್ರಯತ್ನ ಮಾಡ್ತಿದ್ದಾರೆ. ವಿಜಯಪುರದಲ್ಲಿ ಪಾಕಿಸ್ತಾನದ ಬಾವುಟ ಹಾರಿಸಿದವನು ಸಂಘ ಪರಿವಾರದವನು ಎಂದರು.
‘ ಕರ್ನಾಟಕ ಸರ್ವ ಜನಾಂಗದ ಶಾಂತಿಯ ತೋಟ ಅಂತಾ ಹೇಳಿದ್ದೇವೆ. ಯಾರೇ ಆಗಲಿ ಯಾವುದೇ ಧರ್ಮ ಜಾತಿ ಭಾಷೆ ಹೆಸರಲ್ಲಿ ಶಾಂತಿ ಕದಡಿದ್ರೆ ಕಾನೂನಿನ ಮೂಲಕ ಕಠಿಣ ಕ್ರಮ ತೆಗೆದುಕೊಳ್ಳಬೇಕು. ನಾನು ಗೃಹ ಸಚಿವರಿಗೆ ಹೇಳೋದು ಇಷ್ಟೆ. ಶಾಂತಿ ಕದಡಲು ಬಹಳ ಪ್ರಯತ್ನ ಮಾಡ್ತಿದ್ದಾರೆ. ಬಿಜೆಪಿ ಅಧಿಕಾರ ಇದ್ದಾಗ ಸೃಷ್ಟಿಯಾದ ಅಶಾಂತಿಯ ವಾತಾವರಣ ಶೇ. 90 ರಷ್ಟು ಎರಡೇ ತಿಂಗಳಲ್ಲಿ ಕಮ್ಮಿ ಆಗಿದೆ. ಮೈಸೂರಿನ ಉದಯಗಿರಿ ಗಲಾಟೆ ಬಿಜೆಪಿ ಆರ್ ಎಸ್ ಎಸ್ ಕೃಪಾಪೋಷಿತ ಕೃತ್ಯಗಳು’ ಎಂದು ಆರೋಪಿಸಿದರು.
ಇದೆ ವೇಳೆ ಮಾತನಾಡಿದ ಅವರು, ಕೆಪಿಸಿಸಿ ಅಧ್ಯಕ್ಷರು, ಮಂತ್ರಿಗಳ ಬದಲಾವಣೆ ಎಲ್ಲವೂ ಹೈಕಮಾಂಡ್ ತೀರ್ಮಾನ ಮಾಡುತ್ತೆ. ಹೈಕಮಾಂಡ್ ಈಗ ಕಲಬುರಗಿಯಲ್ಲೆ ಇದೆ. ಅವರು ಬಂದಾಗ ಕೇಳಿ. ಸರ್ಕಾರ ಬಂದಾಗಿನಿಂದಲೂ ಈ ರೀತಿಯ ಎಲ್ಲಾ ಚರ್ಚೆ ಆಗ್ತಿದೆ. ರಾಜಕೀಯದಲ್ಲಿ ಇವೆಲ್ಲಾ ಚರ್ಚೆಗಳು ನಡೆಯುತ್ತಲೆ ಇರುತ್ತೆ. ನನ್ನ ವಿಚಾರದಲ್ಲಿ ಯಾವ ಶ್ರೀಗಳು ಮಾತಾಡಬಾರದು. ಅದರಲ್ಲೂ ರಾಜಕೀಯವಂತೂ ಸ್ವಾಮೀಜಿಗಳು ಮಾತಾಡಲೇಬಾರದು ಎಂದು ಹೇಳಿದರು.
















ಇನ್ನಷ್ಟು ಸುದ್ದಿಗಳು
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ಗೆ ಭರ್ಜರಿ ಗೆಲುವು- ಆಡಳಿತದ ಹಾದಿಗೆ ಸಿಕ್ಕ ಮುದ್ರೆ ಎಂದ ಸಿಎಂ ಡಿ.ಕೆ. ಶಿವಕುಮಾರ್
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ
‘ಗಲ್ಫ್ ಪ್ರದೇಶದ ಸಂಘರ್ಷಗಳನ್ನು ಭಾರತಕ್ಕೆ ನಿರ್ಲಕ್ಷಿಸಲು ಸಾಧ್ಯವಿಲ್ಲ’ – ಭಾರತೀಯ ರಾಯಭಾರಿ ಡಾ. ಸುಹೈಲ್ ಅಜಾಝ್ ಖಾನ್
ಕೆಸಿಎಫ್ ಅಂತಾರಾಷ್ಟ್ರೀಯ ಸಮಿತಿ: ‘E-GEN ಸ್ಕಾಲರ್ಶಿಪ್’ ಗೆ ಅಧಿಕೃತ ಚಾಲನೆ
SIR ಪ್ರಕ್ರಿಯೆ: ಮತದಾರರ ಹಕ್ಕು ರಕ್ಷಣೆಗೆ ಸಿಪಿಐ(ಎಂ) ಆಗ್ರಹ- ಮುಖ್ಯಮಂತ್ರಿಗಳಿಗೆ ಮನವಿ
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಕಣ್ಣೂರು: ಕೊನೆಗೂ ನಿಟ್ಟುಸಿರು ಬಿಟ್ಟ ಪ್ರಯಾಣಿಕರು; ಆತಂಕ ಸೃಷ್ಟಿಸಿದ್ದ ಜಿದ್ದಾ ವಿಮಾನ ಸುರಕ್ಷಿತ ಲ್ಯಾಂಡಿಂಗ್
ಕದನ ವಿರಾಮವಲ್ಲ, ಅಮೆರಿಕ ಮತ್ತು ಇಸ್ರೇಲ್ ಸೋಲೊಪ್ಪಿಕೊಂಡ ಕ್ಷಣ: ಯುದ್ಧ ಪ್ರೇಮಿಗಳು ಹಿಂದೆ ಸರಿಯಲು ನಿಜವಾದ ಕಾರಣವೇನು?
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ