ಕಲಬುರಗಿ : ಸಂಘ ಪರಿವಾರದವರು ಕೆಲವು ಕಡೆ ಬುರ್ಖಾ ಹಾಕಿಕೊಂಡು ಗಲಾಟೆ ಮಾಡೋಕೆ ಹೋಗಿ ಬಿಡ್ತಾರೆ. ಇದೇನು ಹೊಸದಲ್ಲ, ನನ್ನ ಬಳಿ ವಿಡಿಯೋ ಇವೆ ಎಂದು ಕಾಂಗ್ರೆಸ್ ನ ಹಿರಿಯ ಮುಖಂಡ ಬಿಕೆ ಹರಿಪ್ರಸಾದ್ ಹೇಳಿದ್ದಾರೆ.
ಕಲಬುರಗಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಆರ್ ಎಸ್ ಎಸ್ ಗೆ ನೂರು ವರ್ಷ ತುಂಬುತ್ತಿದೆ. ಹಾಗಾಗಿ ಅವರೇ ಈ ರೀತಿ ಮಾಡ್ತಾರೆ. ಆರ್ ಎಸ್ ಎಸ್ ವರ ಎಲ್ಲಾ ಚಿಂತನೆಗಳನ್ನು ಅನುಷ್ಟಾನಕ್ಕೆ ತರಲು ಪ್ರಯತ್ನ ಮಾಡ್ತಿದ್ದಾರೆ. ಆದರೆ ಕರ್ನಾಟಕದಲ್ಲಿ ಅದು ಸಾಧ್ಯವಿಲ್ಲ. ನನ್ನ ಹತ್ರ ವಿಡಿಯೋ ಇದೆ. ಶಾಂತಿ ಕದಡುವ ಯತ್ನವನ್ನು ಅವರೇ ಮಾಡ್ತಿದ್ದಾರೆ. ಎಲ್ಲಾ ಕಡೆ ಶಾಂತಿ ಕದಡಿಸಲು ಪ್ರಯತ್ನ ಮಾಡ್ತಿದ್ದಾರೆ. ವಿಜಯಪುರದಲ್ಲಿ ಪಾಕಿಸ್ತಾನದ ಬಾವುಟ ಹಾರಿಸಿದವನು ಸಂಘ ಪರಿವಾರದವನು ಎಂದರು.
‘ ಕರ್ನಾಟಕ ಸರ್ವ ಜನಾಂಗದ ಶಾಂತಿಯ ತೋಟ ಅಂತಾ ಹೇಳಿದ್ದೇವೆ. ಯಾರೇ ಆಗಲಿ ಯಾವುದೇ ಧರ್ಮ ಜಾತಿ ಭಾಷೆ ಹೆಸರಲ್ಲಿ ಶಾಂತಿ ಕದಡಿದ್ರೆ ಕಾನೂನಿನ ಮೂಲಕ ಕಠಿಣ ಕ್ರಮ ತೆಗೆದುಕೊಳ್ಳಬೇಕು. ನಾನು ಗೃಹ ಸಚಿವರಿಗೆ ಹೇಳೋದು ಇಷ್ಟೆ. ಶಾಂತಿ ಕದಡಲು ಬಹಳ ಪ್ರಯತ್ನ ಮಾಡ್ತಿದ್ದಾರೆ. ಬಿಜೆಪಿ ಅಧಿಕಾರ ಇದ್ದಾಗ ಸೃಷ್ಟಿಯಾದ ಅಶಾಂತಿಯ ವಾತಾವರಣ ಶೇ. 90 ರಷ್ಟು ಎರಡೇ ತಿಂಗಳಲ್ಲಿ ಕಮ್ಮಿ ಆಗಿದೆ. ಮೈಸೂರಿನ ಉದಯಗಿರಿ ಗಲಾಟೆ ಬಿಜೆಪಿ ಆರ್ ಎಸ್ ಎಸ್ ಕೃಪಾಪೋಷಿತ ಕೃತ್ಯಗಳು’ ಎಂದು ಆರೋಪಿಸಿದರು.
ಇದೆ ವೇಳೆ ಮಾತನಾಡಿದ ಅವರು, ಕೆಪಿಸಿಸಿ ಅಧ್ಯಕ್ಷರು, ಮಂತ್ರಿಗಳ ಬದಲಾವಣೆ ಎಲ್ಲವೂ ಹೈಕಮಾಂಡ್ ತೀರ್ಮಾನ ಮಾಡುತ್ತೆ. ಹೈಕಮಾಂಡ್ ಈಗ ಕಲಬುರಗಿಯಲ್ಲೆ ಇದೆ. ಅವರು ಬಂದಾಗ ಕೇಳಿ. ಸರ್ಕಾರ ಬಂದಾಗಿನಿಂದಲೂ ಈ ರೀತಿಯ ಎಲ್ಲಾ ಚರ್ಚೆ ಆಗ್ತಿದೆ. ರಾಜಕೀಯದಲ್ಲಿ ಇವೆಲ್ಲಾ ಚರ್ಚೆಗಳು ನಡೆಯುತ್ತಲೆ ಇರುತ್ತೆ. ನನ್ನ ವಿಚಾರದಲ್ಲಿ ಯಾವ ಶ್ರೀಗಳು ಮಾತಾಡಬಾರದು. ಅದರಲ್ಲೂ ರಾಜಕೀಯವಂತೂ ಸ್ವಾಮೀಜಿಗಳು ಮಾತಾಡಲೇಬಾರದು ಎಂದು ಹೇಳಿದರು.
















ಇನ್ನಷ್ಟು ಸುದ್ದಿಗಳು
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್