ಉಳ್ಳಾಲ: ಸಾಮಾಜಿಕ ಸೇವೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಯು.ಟಿ.ಎಂ. ಚಾರಿಟೇಬಲ್ ಟ್ರಸ್ಟ್ ವತಿಯಿಂದ ಅರ್ಹ ಬಡ ಕುಟುಂಬಗಳಿಗೆ ರಮಳಾನ್ ಪ್ರಯುಕ್ತ ಆಹಾರ ಕಿಟ್ ವಿತರಣಾ ಕಾರ್ಯಕ್ರಮವು ಫೆಬ್ರವರಿ 25 ರಂದು ಮಂಜನಾಡಿ ಅಲ್ ಮದೀನದ ಶರಪುಲ್ ಉಲಮಾ ಆಡಿಟೋರಿಯಂ ನಲ್ಲಿ ನಡೆಯಿತು.
ಅಲ್ ಮದೀನ ದಅವಾ ಕಾಲೇಜ್ ಪ್ರಾಂಶುಪಾಲರಾದ ಸಯ್ಯಿದ್ ಉವೈಸ್ ತಂಗಳ್ ದುಆ ನೆರವೇರಿಸಿದರು. ಅಲ್ ಮದೀನಾ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಖಾದರ್ ಸಖಾಫಿ ಉದ್ಘಾಟಿಸಿದರು. ಯುಟಿಎಂ ಅಧ್ಯಕ್ಷ ಹಾಜಿ ಫಾರೂಕ್ ಅಬ್ಬಾಸ್ ಅಧ್ಯಕ್ಷತೆ ವಹಿಸಿದರು.
ಈ ಸಂದರ್ಭದಲ್ಲಿ ಮಾತಾನಾಡಿದ ಅವರು; ಯುಟಿಎಂ ಟ್ರಸ್ಟ್ ವತಿಯಿಂದ ರೋಗಿಗಳಿಗೆ ಚಿಕಿತ್ಸಾ ನೆರವು, ಬಡ ಕುಟುಂಬಗಳಿಗೆ ಮಾಸಿಕ ಆಹಾರ ಕಿಟ್ ವಿತರಣೆ ಹಾಗೂ ಅಪಘಾತ, ರೋಗ ಇತ್ಯಾದಿಗಳಿಂದ ಚಿಕಿತ್ಸೆ ಪಡೆದು ಚೇತರಿಸಿಕೊಂಡ ಅಸಹಾಯಕರಿಗೆ ವ್ಯಾಪಾರ ಮಾಡಿ ಜೀವಿಸಲು ಆರ್ಥಿಕ ಸಹಾಯ ಮಾಡುತ್ತ ಬರುತ್ತಿದೆ ಎಂದರು. ಟ್ರಸ್ಟ್ ಕಾರ್ಯದರ್ಶಿ ಮೊಯ್ದಿನ್ ಹಾಜಿ ಮಲಾಝ್ ಸ್ವಾಗತಿಸಿದರು. ಖಜಾಂಜಿ ಅಬ್ದಲ್ ಬಶೀರ್ ಉಳ್ಳಾಲ , ಇಬ್ರಾಹೀಮ್ ಹಮ್ಮಬ್ಬ ಉಳ್ಳಾಲ ಉಪಸ್ಥಿತರಿದ್ದರು. ಅಬ್ದುಲ್ ರಜಾಕ್ ಮಾಸ್ಟರ್ ನಾವೂರು ಕಾರ್ಯಕ್ರಮ ನಿರೂಪಿಸಿದರು.
















ಇನ್ನಷ್ಟು ಸುದ್ದಿಗಳು
‘ಗಲ್ಫ್ ಪ್ರದೇಶದ ಸಂಘರ್ಷಗಳನ್ನು ಭಾರತಕ್ಕೆ ನಿರ್ಲಕ್ಷಿಸಲು ಸಾಧ್ಯವಿಲ್ಲ’ – ಭಾರತೀಯ ರಾಯಭಾರಿ ಡಾ. ಸುಹೈಲ್ ಅಜಾಝ್ ಖಾನ್
ಕೆಸಿಎಫ್ ಅಂತಾರಾಷ್ಟ್ರೀಯ ಸಮಿತಿ: ‘E-GEN ಸ್ಕಾಲರ್ಶಿಪ್’ ಗೆ ಅಧಿಕೃತ ಚಾಲನೆ
SIR ಪ್ರಕ್ರಿಯೆ: ಮತದಾರರ ಹಕ್ಕು ರಕ್ಷಣೆಗೆ ಸಿಪಿಐ(ಎಂ) ಆಗ್ರಹ- ಮುಖ್ಯಮಂತ್ರಿಗಳಿಗೆ ಮನವಿ
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಕಣ್ಣೂರು: ಕೊನೆಗೂ ನಿಟ್ಟುಸಿರು ಬಿಟ್ಟ ಪ್ರಯಾಣಿಕರು; ಆತಂಕ ಸೃಷ್ಟಿಸಿದ್ದ ಜಿದ್ದಾ ವಿಮಾನ ಸುರಕ್ಷಿತ ಲ್ಯಾಂಡಿಂಗ್
ಕದನ ವಿರಾಮವಲ್ಲ, ಅಮೆರಿಕ ಮತ್ತು ಇಸ್ರೇಲ್ ಸೋಲೊಪ್ಪಿಕೊಂಡ ಕ್ಷಣ: ಯುದ್ಧ ಪ್ರೇಮಿಗಳು ಹಿಂದೆ ಸರಿಯಲು ನಿಜವಾದ ಕಾರಣವೇನು?
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
SჄS ಬೆಳ್ತಂಗಡಿ ಝೋನ್: ಸಾಂತ್ವನ ಫಂಡ್ ಹಸ್ತಾಂತರ
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಗಳಿಗೆ ಮರು ಅರ್ಜಿ ಕಡ್ಡಾಯ- ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
ಮುಂದಿನ 24 ಗಂಟೆಗಳಲ್ಲಿ ಯು.ಎಸ್-ಇರಾನ್ ಶಾಂತಿ ಒಪ್ಪಂದ ಅಂತಿಮ: ಪಾಕ್ ಪ್ರಧಾನಿ ಶಹಬಾಝ್ ಷರೀಫ್