ಉಳ್ಳಾಲ: ಸಾಮಾಜಿಕ ಸೇವೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಯು.ಟಿ.ಎಂ. ಚಾರಿಟೇಬಲ್ ಟ್ರಸ್ಟ್ ವತಿಯಿಂದ ಅರ್ಹ ಬಡ ಕುಟುಂಬಗಳಿಗೆ ರಮಳಾನ್ ಪ್ರಯುಕ್ತ ಆಹಾರ ಕಿಟ್ ವಿತರಣಾ ಕಾರ್ಯಕ್ರಮವು ಫೆಬ್ರವರಿ 25 ರಂದು ಮಂಜನಾಡಿ ಅಲ್ ಮದೀನದ ಶರಪುಲ್ ಉಲಮಾ ಆಡಿಟೋರಿಯಂ ನಲ್ಲಿ ನಡೆಯಿತು.
ಅಲ್ ಮದೀನ ದಅವಾ ಕಾಲೇಜ್ ಪ್ರಾಂಶುಪಾಲರಾದ ಸಯ್ಯಿದ್ ಉವೈಸ್ ತಂಗಳ್ ದುಆ ನೆರವೇರಿಸಿದರು. ಅಲ್ ಮದೀನಾ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಖಾದರ್ ಸಖಾಫಿ ಉದ್ಘಾಟಿಸಿದರು. ಯುಟಿಎಂ ಅಧ್ಯಕ್ಷ ಹಾಜಿ ಫಾರೂಕ್ ಅಬ್ಬಾಸ್ ಅಧ್ಯಕ್ಷತೆ ವಹಿಸಿದರು.
ಈ ಸಂದರ್ಭದಲ್ಲಿ ಮಾತಾನಾಡಿದ ಅವರು; ಯುಟಿಎಂ ಟ್ರಸ್ಟ್ ವತಿಯಿಂದ ರೋಗಿಗಳಿಗೆ ಚಿಕಿತ್ಸಾ ನೆರವು, ಬಡ ಕುಟುಂಬಗಳಿಗೆ ಮಾಸಿಕ ಆಹಾರ ಕಿಟ್ ವಿತರಣೆ ಹಾಗೂ ಅಪಘಾತ, ರೋಗ ಇತ್ಯಾದಿಗಳಿಂದ ಚಿಕಿತ್ಸೆ ಪಡೆದು ಚೇತರಿಸಿಕೊಂಡ ಅಸಹಾಯಕರಿಗೆ ವ್ಯಾಪಾರ ಮಾಡಿ ಜೀವಿಸಲು ಆರ್ಥಿಕ ಸಹಾಯ ಮಾಡುತ್ತ ಬರುತ್ತಿದೆ ಎಂದರು. ಟ್ರಸ್ಟ್ ಕಾರ್ಯದರ್ಶಿ ಮೊಯ್ದಿನ್ ಹಾಜಿ ಮಲಾಝ್ ಸ್ವಾಗತಿಸಿದರು. ಖಜಾಂಜಿ ಅಬ್ದಲ್ ಬಶೀರ್ ಉಳ್ಳಾಲ , ಇಬ್ರಾಹೀಮ್ ಹಮ್ಮಬ್ಬ ಉಳ್ಳಾಲ ಉಪಸ್ಥಿತರಿದ್ದರು. ಅಬ್ದುಲ್ ರಜಾಕ್ ಮಾಸ್ಟರ್ ನಾವೂರು ಕಾರ್ಯಕ್ರಮ ನಿರೂಪಿಸಿದರು.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ