ಬೆಂಗಳೂರು: ದೂತ ಸಮೀರ್ ಎಂಡಿ ಎಂಬ ಯೂಟ್ಯೂಬರ್ ತಮ್ಮ ಚಾನೆಲ್ನಲ್ಲಿ ಸೌಜನ್ಯ ಅತ್ಯಾಚಾರ ಹಾಗೂ ಹತ್ಯೆ ಪ್ರಕರಣದ ಕುರಿತು ಸವಿವರವಾಗಿ ವಿಡಿಯೋ ಮಾಡಿದ್ದು, ರಾಜ್ಯದಲ್ಲಿ ದೊಡ್ಡ ಸಂಚಲನವನ್ನೇ ಉಂಟು ಮಾಡಿದೆ. ಈ ವೀಡಿಯೋ ಇದೀಗ 14 ಮಿಲಿಯನ್ ವ್ಯೂವ್ಸ್ ಪಡೆದು ವೈರಲ್ ಆಗಿದೆ.
ವೀಕ್ಷಕರೆಲ್ಲರೂ ಸಮೀರ್ ಗೆ ಮೆಚ್ಚುಗೆಯನ್ನು, ಬೆಂಬಲವನ್ನೂ ವ್ಯಕ್ತಪಡಿಸಿದ್ದಾರಲ್ಲದೇ, ಧೈರ್ಯವನ್ನು ತುಂಬಿದ್ದಾರೆ. ವೀಡಿಯೋ ವ್ಯಾಪಕ ಪ್ರಚಾರಗೊಳ್ಳುತ್ತಿದ್ದಂತೆ ಪೊಲೀಸರು ಆಗಮಿಸಿ ಸಮೀರ್ ಬಂಧನಕ್ಕೆ ಮುಂದಾಗಿದ್ದು, ನಂತರ ವಿಚಾರಣೆಗೆ ಸಹಕರಿಸುವುದಾಗಿ ಭರವಸೆ ನೀಡಿದ ಮೇಲೆ ಪೋಲೀಸರು ನೋಟಿಸ್ ನೀಡಿ ಹಿಂದಿರುಗಿದ್ದಾರೆ ಎಂದು ಫೇಸ್ ಬುಕ್ ಲೈವ್ನಲ್ಲಿ ಸಮೀರ್ ಹೇಳಿದ್ದರು. ಅನಂತರ ಗಿರೀಶ್ ಮಟ್ಟಣ್ಣನವರ್ ಅವರ ವಕೀಲರ ತಂಡ ಈ ಕುರಿತು ಹೈಕೋರ್ಟ್ ಮೆಟ್ಟಿಲೇರಿದ್ದರು.
ಕಾನೂನು ಉಲ್ಲಂಘಿಸಿ ಪೊಲೀಸರು ನೋಟಿಸ್ ನೀಡಿದ್ದಾರೆ ಎಂದು ಪೊಲೀಸರನ್ನು ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿದೆ. ಹಾಗಾಗಿ ಈ ಮೂಲಕ ಸಮೀರ್ ಗೆ ಬಿಗ್ ರಿಲೀಫ್ ದೊರಕಿದಂತಾಗಿದೆ. ಅರೆಸ್ಟ್ ಮಾಡುವ ಹಾಗಿಲ್ಲ, ಪೊಲೀಸ್ ಠಾಣೆಗೂ ಕರೆಯುವ ಹಾಗಿಲ್ಲ ಎಂದು ಕೋರ್ಟ್ ಹೇಳಿದೆ ಎಂದು ಗಿರೀಶ್ ಮಟ್ಟಣನವರ್ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.

















ಇನ್ನಷ್ಟು ಸುದ್ದಿಗಳು
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ
ಮಾದರಿ ಮದುವೆ ಅಭಿಯಾನದ ಸಮಾರೋಪ ಪ್ರಚಾರ; ಎ.28, 29 ರಂದು ವಾಹನ ಸಂದೇಶ ಜಾಥಾ
ಮುಂಬೈಯನ್ನು ನಡುಗಿಸಿದ ಘಟನೆ: ಬಿರಿಯಾನಿ ಮತ್ತು ಕಲ್ಲಂಗಡಿ ತಿಂದ ಕುಟುಂಬ ಬೆಳಗಾಗುವಷ್ಟರಲ್ಲಿ ಅಂತ್ಯ