ಮಂಗಳೂರು: ಕೇಂದ್ರ ಸರಕಾರದ ವಿವಾದಿತ ವಕ್ಫ್ ತಿದ್ದುಪಡಿ ಮಸೂದೆಯ ವಿರುದ್ಧ ನಗರದಲ್ಲಿ ರವಿವಾರ ಮುಸ್ಲಿಮ್ ಧಾರ್ಮಿಕ ವಿದ್ವಾಂಸರ ನೇತೃತ್ವದಲ್ಲಿ ಬೃಹತ್ ಕಾಲ್ನಡಿಗೆ ಜಾಥಾ ಹಾಗೂ ಪ್ರತಿಭಟನೆ ಸಮಾರಂಭ ನಡೆಯಿತು. ರಂಜಾನಿನ ಕಡ್ಡಾಯ ವೃತವನ್ನಾಚರಿಸಿ, ಸುಡುಬಿಸಿಲಿನ ಬೇಗೆಯನ್ನು ಲೆಕ್ಕಿಸದೆ ವಖ್ಫ್ ಭೂಮಿಯ ಸಂರಕ್ಷಣೆಗಾಗಿ ಉಲಮಾಗಳು ಬೀದಿಗಿಳಿದು ಹೋರಾಟ ನಡೆಸಿದರು.


ಸಂವಿಧಾನ ಬದ್ಧವಾಗಿ ಮಸ್ಲಿಮರಿಗೆ ಸೇರಬೇಕಾದ ವಖ್ಫ್ ಎಂಬ ಹಕ್ಕನ್ನು ಕೇಳಲು ಸಾವು ಸೇರಿದ್ದೇವೆ. ಈ ಹೋರಾಟ ಯಾರ ವಿರುದ್ಧವೂ ಅಲ್ಲ. ಶರೀಅತ್ ನ ಹಕ್ಕಿಗಾಗಿನ ನಮ್ಮ ಹೋರಾಟವನ್ನು ಹತ್ತಿಕ್ಕಲು ಯಾರಿಂದಲೂ ಸಾಧ್ಯವಿಲ್ಲ ಎಂದು ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಉಲಮಾ ಕೋ ಆರ್ಡಿನೇಷನ್ ಕರ್ನಾಟಕ ಇದರ ಕೋಶಾಧಿಕಾರಿ ಶಾಫಿ ಸಅದಿ ಬೆಂಗಳೂರು ಹೇಳಿದ್ದಾರೆ.
ನಗರದ ಮಿಲಾಗ್ರಿಸ್ನಿಂದ ಕ್ಲಾಕ್ ಟವರ್ ತನಕ ನಡೆದ ಜಾಥಾದ ಬಳಿಕ ನಡೆದ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಶಾಫಿ ಸಅದಿ, ನಮ್ಮ ಪೂರ್ವಿಕರು ನಮಗೆ ಕೊಟ್ಟಿರುವ ಆಸ್ತಿಯ ಮೇಲೆ ನೀವು ಯಾಕೆ ಕಣ್ಣು ಹಾಕಿರುವಿರಿ? ಸರಕಾರದ ಕೆಲಸ ಅಭಿವೃದ್ಧಿ ಕಾರ್ಯ ಮಾಡುವುದು, ಕೆಲಸವಿಲ್ಲದವರಿಗೆ ಕೆಲಸ ಕಲ್ಪಿಸುವುದು, ಎಲ್ಲರ ನಡುವೆ ಸೌಹಾರ್ದ ಮೂಡಿಸುವುದು ಆಗಿದೆ. ಅದನ್ನು ಬಿಟ್ಟು ಹಿಜಾಬ್, ವಕ್ಫ್ , ಸಿಎಎ, ಎನ್.ಆರ್.ಸಿ. ಮುಂತಾವುಗಳಿಂದ ವಿವಾದವನ್ನುಂಟು ಮಾಡುತ್ತಿದೆ. ಇದರಿಂದ ದೇಶಕ್ಕೆ ಏನು ಪ್ರಯೋಜನ ಎಂದು ಅವರು ಪ್ರಶ್ನಿಸಿದರು.

ಉಲಮಾ ಕೋ ಆರ್ಡಿನೇಷನ್ನ ಕಾರ್ಯದರ್ಶಿ ಯು.ಕೆ.ಅಬ್ದುಲ್ ಅಝೀಝ್ ದಾರಿಮಿ ಚೊಕ್ಕಬೆಟ್ಟು ಮಾತನಾಡಿ, ವಕ್ಫ್ ಅನ್ನು ಅಮಾನ್ಯ ಮಾಡುವುದಕ್ಕಾಗಿ ಮಸೂದೆಗೆ ತಿದ್ದುಪಡಿ ಮಾಡಲಾಗಿದೆ. ವಕ್ಫ್ ನಲ್ಲಿ ಇದೀಗ ಸರಕಾರ ತರುಲು ಉದ್ದೇಶಿಸಿರುವುದು ಸುಧಾರಣೆಯಲ್ಲ. ನಿರ್ಮೂಲನೆ ಎಂದು ಟೀಕಿಸಿದ ಅವರು, ಪದೇ ಪದೇ ಒಂದಲ್ಲ ಒಂದು ಸಮಸ್ಯೆಗಳಲ್ಲಿ ನಮ್ಮನ್ನು ಯಾಕೆ ಸಿಲುಕಿಸುತ್ತೀರಿ ಎಂದು ಸರಕಾರವನ್ನು ಪ್ರಶ್ನಿಸಿದರು.
ವಕ್ಫ್ ತಿದ್ದುಪಡಿ ಮಸೂದೆಯು ದೇಶದ ಮುಸ್ಲಿಮರ ವಿರುದ್ಧ ಹೆಣೆದ ಷಡ್ಯಂತ್ರವಾಗಿದೆ. ಹಿಡನ್ ಅಜೆಂಡಾ ಆಗಿದೆ. ಅಂತರ್ರಾಷ್ಟ್ರೀಯ ವಿಮಾನ ನಿಲ್ದಾಣ, ಬಂದರನ್ನು ಖಾಸಗಿಗೆ ಮಾರಾಟ ಮಾಡಿರುವ ಕೇಂದ್ರ ಸರಕಾರ ಇದೀಗ ವಕ್ಫ್ ಮೇಲೆ ಕಣ್ಣಿಟ್ಟಿದೆ ಎಂದರು. ನಾಲ್ವಡಿ ಕೃಷ್ಣರಾಜ ಒಡೆಯರು ಮಸೀದಿ ಕಟ್ಟಲು ಮತ್ತು ಟಿಪ್ಪು ಸುಲ್ತಾನ್ ದೇವಸ್ಥಾನಕ್ಕಾಗಿ ಭೂಮಿ ಕೊಟ್ಟರು. ಮುಸ್ಲಿಮರು ಈ ದೇಶವನ್ನು ಆಳಿದ ಪೊರ್ಚುಗೀಸರಿಗೆ, ಡಚ್ಚರಿಗೆ, ಬ್ರಿಟಷರಿಗೆ, ಫ್ರೆಂಚರಿಗೆ ಶರಣಾಗಲಿಲ್ಲ ಹೊರತು, ಸ್ವಾತಂತ್ರ್ಯದ ಕೀಯನ್ನು ಕೊಡು ಎಂದು ಕೇಳಿದ ಮಹಮ್ಮದಲಿ ವಂಶದವರು ಎಂದರು.
ಉಲಮಾ ಕೋ ಆರ್ಡಿನೇಷನ್ ಕಾರ್ಯದರ್ಶಿ ಡಾ.ಎಮ್ಮೆಸ್ಸೆಂ ಅಬ್ದುರಶೀದ್ ಝನಿ ಕಾಮಿಲ್ ಸಖಾಫಿ, ಎಸ್ಕೆಎಸ್ಸೆಸ್ಸೆಫ್ ರಾಜ್ಯ ಪ್ರಧಾನ ಕಾರ್ಯದರ್ಶಿ ಅನೀಸ್ ಕೌಸರಿ ಮಾತನಾಡಿದರು. ಸಯ್ಯಿದ್ ಇಸ್ಮಾಯೀಲ್ ತಂಙಳ್ ಉಜಿರೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷರುಗಳಾದ ಯು.ಕೆ.ಮುಹಮ್ಮದ್ ಸಅದಿ ವಳವೂರು, ಪ್ರಧಾನ ಕಾರ್ಯದರ್ಶಿ ಕೆ.ಎಂ.ಉಸ್ಮಾನ್ ಫೈಝಿ ತೊಡಾರ್ ನೇತೃತ್ವ ವಹಿಸಿದ್ದರು.
ವಿದ್ವಾಂಸ ಕೆಎಂ ಅಬಬೂಬಕರ್ ಸಿದ್ದೀಕ್ ಮೋಂಟುಗೋಳಿ ಕೇಂದ್ರ ಮತ್ತು ರಾಜ್ಯ ಸರಕಾರಕ್ಕೆ ಸಲ್ಲಿಸಲಾಗುವ ಮನವಿಯನ್ನು ವಾಚಿಸಿದರು.ಐದು ಸಾವಿರಕ್ಕೂ ಅಧಿಕ ಮಂದಿ ಪ್ರತಿಭಟನಾ ಜಾಥಾದಲ್ಲಿ ಭಾಗವಹಿಸಿದ್ದರು.
















ಇನ್ನಷ್ಟು ಸುದ್ದಿಗಳು
ಟೋಲ್ ಪ್ಲಾಜಾ ಸಮೀಪದ ನಿವಾಸಿಗಳಿಗೆ ಗುಡ್ ನ್ಯೂಸ್: 20 ಕಿ.ಮೀ ವ್ಯಾಪ್ತಿಯವರಿಗೆ ಡಿಜಿಟಲ್ ಪಾಸ್ ಸೌಲಭ್ಯ!
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ಗೆ ಭರ್ಜರಿ ಗೆಲುವು- ಆಡಳಿತದ ಹಾದಿಗೆ ಸಿಕ್ಕ ಮುದ್ರೆ ಎಂದ ಸಿಎಂ ಡಿ.ಕೆ. ಶಿವಕುಮಾರ್
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ
‘ಗಲ್ಫ್ ಪ್ರದೇಶದ ಸಂಘರ್ಷಗಳನ್ನು ಭಾರತಕ್ಕೆ ನಿರ್ಲಕ್ಷಿಸಲು ಸಾಧ್ಯವಿಲ್ಲ’ – ಭಾರತೀಯ ರಾಯಭಾರಿ ಡಾ. ಸುಹೈಲ್ ಅಜಾಝ್ ಖಾನ್
ಕೆಸಿಎಫ್ ಅಂತಾರಾಷ್ಟ್ರೀಯ ಸಮಿತಿ: ‘E-GEN ಸ್ಕಾಲರ್ಶಿಪ್’ ಗೆ ಅಧಿಕೃತ ಚಾಲನೆ
SIR ಪ್ರಕ್ರಿಯೆ: ಮತದಾರರ ಹಕ್ಕು ರಕ್ಷಣೆಗೆ ಸಿಪಿಐ(ಎಂ) ಆಗ್ರಹ- ಮುಖ್ಯಮಂತ್ರಿಗಳಿಗೆ ಮನವಿ
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಕಣ್ಣೂರು: ಕೊನೆಗೂ ನಿಟ್ಟುಸಿರು ಬಿಟ್ಟ ಪ್ರಯಾಣಿಕರು; ಆತಂಕ ಸೃಷ್ಟಿಸಿದ್ದ ಜಿದ್ದಾ ವಿಮಾನ ಸುರಕ್ಷಿತ ಲ್ಯಾಂಡಿಂಗ್
ಕದನ ವಿರಾಮವಲ್ಲ, ಅಮೆರಿಕ ಮತ್ತು ಇಸ್ರೇಲ್ ಸೋಲೊಪ್ಪಿಕೊಂಡ ಕ್ಷಣ: ಯುದ್ಧ ಪ್ರೇಮಿಗಳು ಹಿಂದೆ ಸರಿಯಲು ನಿಜವಾದ ಕಾರಣವೇನು?