ದಕ್ಷಿಣ ಕರ್ನಾಟಕ ಸುನ್ನಿ ಸೆಂಟರ್ ಮಂಗಳೂರು ಇದರ ದಮ್ಮಾಂ ವಲಯ ಅಧೀನಕ್ಕೊಳಪಟ್ಟ ಅಲ್ ಖೋಬರ್ ಘಟಕದಲ್ಲಿ 30 ನೇ ಗ್ರಾಂಡ್ ಇಫ್ತಾರ್ ಕೂಟ 15, ಮಾರ್ಚ್ 2025 ಶನಿವಾರ ಅಲ್ ಖೋಬರ್ ನಲ್ಲಿ ಬಹಳ ಯಶಸ್ವಿಯಾಗಿ ನೆರವೇರಿತು.
ಡಿಕೆಯಸ್ಸಿ ಅಲ್ ಖೋಬರ್ ಘಟಕದ ನೂತನ ಅಧ್ಯಕ್ಷರಾದ ಇರ್ಶಾದ್ ಅಬ್ದುರ್ರಹ್ಮಾನ್ ಪುತ್ತೂರುರವರ ಘನ ಅಧ್ಯಕ್ಷತೆಯಲ್ಲಿ ಜರಗಿದ ಸಭೆಯಲ್ಲಿ ಉಸ್ತಾದ್ ಯೂಸುಫ್ ಸಅದಿ ಅಯ್ಯಂಗೇರಿ ರವರು ಸಮಾರಂಭಕ್ಕೆ ದುಆ ಮೂಲಕ ಚಾಲನೆ ನೀಡಿ ಬದ್ರ್ ಸಂದೇಶ ನೀಡಿದರು.

ಡಿಕೆಯಸ್ಸಿ ಖಾದಿಂ ಇಸ್ಮಾಯೀಲ್ ಕಾಟಿಪಳ್ಳರವರು ಡಿಕೆಯಸ್ಸಿ ವಿಷನ್ 30 ಯ ಸಾರ್ಥಕ ಸಾಧನೆ ಮತ್ತು ಮುಂದಿನ ಅಭಿವೃಧ್ಧಿಗೋಸ್ಕರ ನಮ್ಮ ಮುಂದಿರುವ ಪ್ರಮುಖ ಕಾರ್ಯಕ್ರಮಗಳ ಬಗ್ಗೆ ವಿವರಿಸಿದರು.
ಈ ಶುಭ ಸಮಾರಂಭದಲ್ಲಿ ಡಿಕೆಯಸ್ಸಿ ವಿಷನ್ 30 ಯ ಬ್ರೋಶರನ್ನು ಬಿಡುಗಡೆ ಗೊಳಿಸಲಾಯಿತು.
ಡಿಕೆಯಸ್ಸಿ ಅಲ್ ಖೋಬರ್ ಘಟಕದ ಡೆವಲಪ್ಮೆಂಟ್ ಚೆಯರ್ಮ್ಯಾನ್ ಮುಹಮ್ಮದ್ ಶರೀಫ್ ಬಜ್ಪೆ, ದಮ್ಮಾಂ ವಲಯ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ರೋಯಲ್ ಮುಕ್ವೆ, ಅಲ್ ಖೋಬರ್ ಮಾಜಿ ಅಧ್ಯಕ್ಷ ಅಶ್ರಫ್ ಚಿಕ್ಕಮಗಳೂರು, ಸದಸ್ಯ ಅಬ್ದುರ್ರಶೀದ್ ಬೆಳಾರೆ ಕಾರ್ಯಕ್ರಮದ ಮುಖ್ಯ ಪಾತ್ರ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ದಮ್ಮಾಂ ಘಟಕದ ಡೆವಲಪ್ಮೆಂಟ್ ಚೆಯರ್ಮ್ಯಾನ್ ಸಯ್ಯಿದ್ ಬಾವ ಬಜ್ಪೆ, ಹಣಕಾಸು ಕಾರ್ಯದರ್ಶಿ ಅಬೂಬಕ್ಕರ್ ಅಜಿಲಮೊಗರು, ಸದಸ್ಯ ಉಮರಬ್ಬ ಮರವೂರು, ತುಖ್ಬ ಘಟಕದ ಅಧ್ಯಕ್ಷ ಮುಹಮ್ಮದ್ ಹಂಡೇಲು, ಪ್ರಧಾನ ಕಾರ್ಯದರ್ಶಿ ಸಲೀಂ ಉಪ್ಪಿನಂಗಡಿ, ಹಣಕಾಸು ಕಾರ್ಯದರ್ಶಿ ಮುಹಮ್ಮದ್ ಹನೀಫ್ ಜೆಪ್ಪು,ಜುಬೈಲ್ ನಿಂದ ಮುಸ್ಥಫಾ ಮೈನಾ, ಸ್ಥಾಪಕ ಸದಸ್ಯರಾದ ಎನ್. ಎಸ್. ಅಬ್ದುಲ್ಲ ಮಂಜನಾಡಿ, ಅಶ್ರಫ್ ಮೈನಾ ಮಕ್ಕಾ ವಲಯ ಆಗಮಿಸಿದ್ದರು.
ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದ ಸಲಹೆಗಾರ ಉಸ್ಮಾನ್ ಹೊಸಂಗಡಿ, ಅಶ್ರಫ್ ನಾವುಂದ, ಮುಹಮ್ಮದ್ ಮಲೆಬೆಟ್ಟು, ಸದಸ್ಯರಾದ ಅಬ್ದುಲ್ ಹಮೀದ್ ಸುಳ್ಯ, ಅಬ್ದುಲ್ ಜಬ್ಬಾರ್ ಪುತ್ತೂರು, ಸಹಕರಿಸಿದ ಹನೀಫ್ ಬಜ್ಪೆ, ಶಮ್ಮಿ ಕಣ್ಣಂಗಾರ್, ಮುಹಮ್ಮದ್ ಹನೀಫ್ ದೇರಳಕಟ್ಟೆ ರವರಿಗೆ
ಕೃತಜ್ಞತೆಗಳನ್ನು ಅರ್ಪಿಸಲಾಯಿತು.ಸಮಾರಂಭದ ಕೊನೆಯಲ್ಲಿ ಡಿಕೆಯಸ್ಸಿ ಅಲ್ ಖೋಬರ್ ಘಟಕ ಪ್ರಧಾನ ಕಾರ್ಯದರ್ಶಿ ಶಾಫಿ ಶುಐಬ್ ಮಂಗಳೂರು ಧನ್ಯವಾದಗೈದರು.
ಇಸ್ಮಾಯೀಲ್ ಕಾಟಿಪಳ್ಳ ಕಾರ್ಯಕ್ರಮ ನಿರೂಪಿಸಿದರು.
















ಇನ್ನಷ್ಟು ಸುದ್ದಿಗಳು
ಇಸ್ಲಾಂ ಧರ್ಮ ಮುಸ್ಲಿಮೇತರರ ವಿರೋಧಿಯಲ್ಲ; ಸಹಬಾಳ್ವೆಯೇ ಅದರ ಮೂಲ ಮಂತ್ರ- ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಕರ್ನಾಟಕ ಜಮ್ಇಯ್ಯತುಲ್ ಉಲಮಾ ಮುಶಾವರಕ್ಕೆ ಶಾಫಿ ಸಅದಿ ನೇಮಕ- ಸುಲ್ತಾನುಲ್ ಉಲಮಾ ಘೋಷಣೆ
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ