ಬೆಂಗಳೂರು: ಗಾಝಾದಲ್ಲಿ ಇಸ್ರೇಲ್ ನಡೆಸುತ್ತಿರುವ ದೌರ್ಜನ್ಯಗಳು ರಾಕ್ಷಸೀಯವಾಗಿದ್ದು, ವಿಶ್ವದ ಜನತೆಯು ಇದರ ವಿರುದ್ಧ ಜಾಗೃತಗೊಳ್ಳಬೇಕು ಎಂದು ಭಾರತೀಯ ಗ್ರ್ಯಾಂಡ್ ಮುಫ್ತಿ ಕಾಂತಪುರಂ ಎ.ಪಿ. ಅಬೂಬಕರ್ ಮುಸ್ಲಿಯಾರ್ ಹೇಳಿದ್ದಾರೆ.

ಒಪ್ಪಂದಗಳನ್ನು ಉಲ್ಲಂಘಿಸಿ ಇಸ್ರೇಲ್ ಮುಂದುವರಿಸುತ್ತಿರುವ ಹಿಂಸಾಚಾರವು ದುರಹಂಕಾರದ ಸಂಕೇತವಾಗಿದ್ದು, ಜಗತ್ತು ಇದನ್ನು ಒಗ್ಗಟ್ಟಾಗಿ ವಿರೋಧಿಸಬೇಕೆಂದು ಕಾಂತಪುರಂ ಹೇಳಿದರು.
ಪ್ರಾರ್ಥನೆಯು ವಿಶ್ವಾಸಿಗಳ ಅತ್ಯಂತ ದೊಡ್ಡ ಆಯುಧವಾಗಿದ್ದು, ಪವಿತ್ರ ಮಾಸದಲ್ಲಿ ನಾವು ವಿಶ್ವ ಶಾಂತಿ ಮತ್ತು ಪ್ಯಾಲೆಸ್ತೀನ್ ವಿಮೋಚನೆಗಾಗಿ ಪ್ರಾರ್ಥಿಸಬೇಕೆಂದು ಎ.ಪಿ ಉಸ್ತಾದರು ಬೆಂಗಳೂರಿನಲ್ಲಿ ನಡೆದ ರೂಹಾನಿ ಇಜ್ತಿಮಾದ ಸಮಾರೋಪ ಸಮಾರಂಭವನ್ನು ಉದ್ಘಾಟಿಸುತ್ತಾ ಹೇಳಿದರು.

ಸಂಜೆ 4 ಗಂಟೆಗೆ ಆರಂಭವಾದ ಕಾರ್ಯಕ್ರಮ ಬೆಳಗಿನ ಜಾವ 4 ಗಂಟೆಗೆ ಮುಕ್ತಾಯವಾಯಿತು. ಸಯ್ಯಿದ್ ಝೈನುದ್ದೀನ್ ತಂಙಳ್ ಕೂರಿಕುಝಿ ದಿಕ್ರ್ ಮಜ್ಲಿಸ್ ಮತ್ತು ಸಮಾರೋಪ ಪ್ರಾರ್ಥನೆಗೆ ನೇತೃತ್ವ ನೀಡಿದರು.
ಡಾ. ಮುಹಮ್ಮದ್ ಅಬ್ದುಲ್ ಹಕೀಮ್ ಅಝ್ಹರಿ, ಡಾ. ಮುಹಮ್ಮದ್ ಅಫ್ಸಲುದ್ದೀನ್ ಜುನೈದ್(ಸಿರಾಜ್ ಬಾಬಾ), ಹಝ್ರತ್ ಮೌಲಾನಾ ಮುಹಮ್ಮದ್ ಹಾರೂನ್, ಸನ್ಮಾನ್ಯ ಸ್ಪೀಕರ್ ಯು.ಟಿ ಖಾದರ್, ಸಿ.ಎಂ. ಇಬ್ರಾಹಿಂ, ಎನ್.ಕೆ.ಎಂ ಶಾಫಿ ಸಅದಿ, ಎಸ್.ಅಬ್ದುಲ್ ರಹ್ಮಾನ್ ಹಾಜಿ ಮತ್ತಿತರರು ಮಾತನಾಡಿದರು.
ಮುಸ್ಲಿಂ ಜಮಾಅತ್ ಅಧ್ಯಕ್ಷ ಶಬೀರಲಿ ಹಝ್ರತ್ ರವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಉಸ್ಮಾನ್ ಶರೀಫ್ ಸ್ವಾಗತಿಸಿ, ಜಲೀಲ್ ಹಾಜಿ ಧನ್ಯವಾದ ಅರ್ಪಿಸಿದರು.
















ಇನ್ನಷ್ಟು ಸುದ್ದಿಗಳು
ತಪ್ಪು ಮುನ್ನೆಚ್ಚರಿಕೆ ಸಂದೇಶ- ತಾಂತ್ರಿಕ ದೋಷಕ್ಕೆ ವಿಷಾದ ವ್ಯಕ್ತಪಡಿಸಿದ ಯುಎಇ
ಆರೋಪ-ಅಪಹಾಸ್ಯಗಳ ನಡುವೆ ಧೀಮಂತ ನಾಯಕತ್ವ: ಶಾಫಿ ಸಅದಿ ಉಸ್ತಾದರ ಮುಕ್ತ ಅನಿಸಿಕೆ
‘ಸಮಸ್ತ’: ಇತಿಹಾಸ ಮತ್ತು ವರ್ತಮಾನದ ನೆನಪುಗಳನ್ನು ಮೆಲುಕು ಹಾಕಿದ ನಾಯಕರು
ಅನಿವಾಸಿಗಳಿಗೆ ಭಾರಿ ಹೊಡೆತ; ಪಾಸ್ಪೋರ್ಟ್ ದರಗಳಲ್ಲಿ ಗಣನೀಯ ಹೆಚ್ಚಳ- ಪರಿಷ್ಕೃತ ಶುಲ್ಕ ಜುಲೈ 1 ರಿಂದ ಜಾರಿ
ಗಲ್ಫ್ ಸೇರಿದಂತೆ ವಿದೇಶದಿಂದ ಭಾರತಕ್ಕೆ ಆಗಮಿಸುವ ಪ್ರಯಾಣಿಕರಿಗೆ ‘ಏರ್ ಸುವಿಧಾ’ ಡಿಕ್ಲರೇಷನ್ ಕಡ್ಡಾಯ
ಪಾಸ್ಪೋರ್ಟ್ ಮತ್ತು ಪೌರತ್ವದ ವಿರೋಧಾಭಾಸ – ಜಗತ್ತಿಗೆ ಭಾರತೀಯ, ಸ್ವದೇಶದಲ್ಲೇ ಪ್ರಶ್ನಾರ್ಹ?
ಆಧಾರ್ ಮತ್ತು ಪಾಸ್ಪೋರ್ಟ್ ಪೌರತ್ವ ದಾಖಲೆಯಲ್ಲ: ಹಾಗಾದ್ರೆ ನಿಜವಾದ ದಾಖಲೆ ಯಾವುದು?
ಹಿರಿಯ ಧಾರ್ಮಿಕ ವಿದ್ವಾಂಸರಾದ ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅಲ್ ಅಝ್ಹರಿ ವಫಾತ್
ಅಂಜುಮಾನ್ ಸಿರಾಜುಲ್ ಇಸ್ಲಾಂ ಮದ್ರಸ ಮುಕ್ಕ- SBS ನೂತನ ಸಮಿತಿ ಅಸ್ತಿತ್ವಕ್ಕೆ
ರೆಸಿಡೆನ್ಸಿ ನಿಯಮ ತಿದ್ದುಪಡಿ- ವಿದೇಶಿಯರಿಗೆ ಇನ್ನು ಮುಂದೆ ಸ್ಪಾನ್ಸರ್ ರಹಿತವಾಗಿ ವೀಸಾ ಲಭ್ಯ