ಪುತ್ತೂರು: ಇಸ್ಲಾಮಿಕ್ ಎಜುಕೇಶನಲ್ ಬೋರ್ಡ್ 2025 ರಲ್ಲಿ ನಡೆಸಿದ ಮದ್ರಸ ಪಬ್ಲಿಕ್ ಪರೀಕ್ಷೆಯ 10 ನೇ ತರಗತಿಯಲ್ಲಿ ಎಲ್ಲಾ ನಾಲ್ಕು ವಿಷಯಗಳಲ್ಲೂ ತಲಾ 100 ಅಂಕಗಳೊಂದಿಗೆ ಒಟ್ಟು 400 ರಲ್ಲಿ 400 ಅಂಕ ಪಡೆದು, ಕೆಮ್ಮಾರ ಅಲ್ ಮದ್ರಸತುಲ್ ಕುತುಬಿಯ್ಯ ಸೆಕೆಂಡರಿ ಮದ್ರಸ ವಿದ್ಯಾರ್ಥಿನಿ ಝೈಬುನ್ನಿಸಾ ರಾಷ್ಟ್ರ ಮಟ್ಟದಲ್ಲಿ ರ್ಯಾಂಕ್ ಪಡೆದು ಮದ್ರಸಕ್ಕೆ ಕೀರ್ತಿ ತಂದಿರುತ್ತಾಳೆ. ಈ ವಿದ್ಯಾರ್ಥಿನಿಯು, ಅಬ್ದುಲ್ ಲತೀಫ್ ಝುಹ್ರಿ ಹಾಗೂ ಹಬೀಬಾ ದಂಪತಿಗಳ ಪುತ್ರಿ ಆಗಿರುತ್ತಾಳೆ.
ಈ ವರ್ಷ ಪಬ್ಲಿಕ್ ಪರೀಕ್ಷೆ ಬರೆದ ಐದನೇ ತರಗತಿಯ ಹನ್ನೆರಡು, ಏಳನೇ ನೇ ತರಗತಿಯ ಹದಿನೈದು, ಹತ್ತನೇ ತರಗತಿಯ ನಾಲ್ಕು ವಿದ್ಯಾರ್ಥಿಗಳು ಅತ್ಯಧಿಕ ಅಂಕ ಪಡೆದು ಉತ್ತೀರ್ಣರಾಗಿರುತ್ತಾರೆ.
ಐದನೇ ತರಗತಿ ವಿದ್ಯಾರ್ಥಿ ಮುಹಮ್ಮದ್ ಹಾಶಿಮ್ 600 ರಲ್ಲಿ 550 ಹಾಗೂ ಏಳನೇ ತರಗತಿ ವಿದ್ಯಾರ್ಥಿನಿ ಫಾತಿಮತ್ ಅಫ್ರಾ 600 ರಲ್ಲಿ 582 ಅಂಕ ಪಡೆದು A+ ಗ್ರೇಡ್ ನೊಂದಿಗೆ, ತರಗತಿಗೆ ಪ್ರಥಮ ಸ್ಥಾನ ಪಡೆದಿರುತ್ತಾರೆ.
ರ್ಯಾಂಕ್ ಪಡೆದ ಝೈಬುನ್ನಿಸಾ’ಳಿಗೂ, A+ ಪಡೆದ ಫಾತಿಮತ್ ಅಫ್ರಾ’ಳಿಗೂ, ಅತ್ಯಧಿಕ ಅಂಕ ಪಡೆದು, ನಮ್ಮ ಮದ್ರಸಕ್ಕೆ ಕೀರ್ತಿ ತಂದ ಎಲ್ಲಾ ವಿದ್ಯಾರ್ಥಿಗಳಿಗೂ, ತರಗತಿ ಅಧ್ಯಾಪಕರಿಗೂ, ಪ್ರೋತ್ಸಾಹಿಸಿದ ರಕ್ಷಕರು, ಆಡಳಿತ ಸಮಿತಿಗೂ ಮದ್ರಸಾ ಮುಖ್ಯೋಪಾಧ್ಯಾಯರಾದ ಎನ್ ಎಂ ಶರೀಫ್ ಸಖಾಫಿ ನೆಕ್ಕಿಲ್ ರವರು ಹೃತ್ಪೂರ್ವಕ ಕೃತಜ್ಞತೆ, ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.
ಅಧ್ಯಾಪಕ ವೃಂದ ಹಾಗೂ ವಿದ್ಯಾರ್ಥಿಗಳು, ಅಲ್ ಮದ್ರಸತುಲ್ ಕುತುಬಿಯ್ಯ ಸೆಕೆಂಡರಿ ಮದ್ರಸ, MJM ಕೆಮ್ಮಾರ ಅಭಿನಂದನೆಗಳನ್ನು ಸಲ್ಲಿಸಿದೆ.
















ಇನ್ನಷ್ಟು ಸುದ್ದಿಗಳು
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ
ಮಾದರಿ ಮದುವೆ ಅಭಿಯಾನದ ಸಮಾರೋಪ ಪ್ರಚಾರ; ಎ.28, 29 ರಂದು ವಾಹನ ಸಂದೇಶ ಜಾಥಾ
ಮುಂಬೈಯನ್ನು ನಡುಗಿಸಿದ ಘಟನೆ: ಬಿರಿಯಾನಿ ಮತ್ತು ಕಲ್ಲಂಗಡಿ ತಿಂದ ಕುಟುಂಬ ಬೆಳಗಾಗುವಷ್ಟರಲ್ಲಿ ಅಂತ್ಯ