ಪುತ್ತೂರು: ಇಸ್ಲಾಮಿಕ್ ಎಜುಕೇಶನಲ್ ಬೋರ್ಡ್ 2025 ರಲ್ಲಿ ನಡೆಸಿದ ಮದ್ರಸ ಪಬ್ಲಿಕ್ ಪರೀಕ್ಷೆಯ 10 ನೇ ತರಗತಿಯಲ್ಲಿ ಎಲ್ಲಾ ನಾಲ್ಕು ವಿಷಯಗಳಲ್ಲೂ ತಲಾ 100 ಅಂಕಗಳೊಂದಿಗೆ ಒಟ್ಟು 400 ರಲ್ಲಿ 400 ಅಂಕ ಪಡೆದು, ಕೆಮ್ಮಾರ ಅಲ್ ಮದ್ರಸತುಲ್ ಕುತುಬಿಯ್ಯ ಸೆಕೆಂಡರಿ ಮದ್ರಸ ವಿದ್ಯಾರ್ಥಿನಿ ಝೈಬುನ್ನಿಸಾ ರಾಷ್ಟ್ರ ಮಟ್ಟದಲ್ಲಿ ರ್ಯಾಂಕ್ ಪಡೆದು ಮದ್ರಸಕ್ಕೆ ಕೀರ್ತಿ ತಂದಿರುತ್ತಾಳೆ. ಈ ವಿದ್ಯಾರ್ಥಿನಿಯು, ಅಬ್ದುಲ್ ಲತೀಫ್ ಝುಹ್ರಿ ಹಾಗೂ ಹಬೀಬಾ ದಂಪತಿಗಳ ಪುತ್ರಿ ಆಗಿರುತ್ತಾಳೆ.
ಈ ವರ್ಷ ಪಬ್ಲಿಕ್ ಪರೀಕ್ಷೆ ಬರೆದ ಐದನೇ ತರಗತಿಯ ಹನ್ನೆರಡು, ಏಳನೇ ನೇ ತರಗತಿಯ ಹದಿನೈದು, ಹತ್ತನೇ ತರಗತಿಯ ನಾಲ್ಕು ವಿದ್ಯಾರ್ಥಿಗಳು ಅತ್ಯಧಿಕ ಅಂಕ ಪಡೆದು ಉತ್ತೀರ್ಣರಾಗಿರುತ್ತಾರೆ.
ಐದನೇ ತರಗತಿ ವಿದ್ಯಾರ್ಥಿ ಮುಹಮ್ಮದ್ ಹಾಶಿಮ್ 600 ರಲ್ಲಿ 550 ಹಾಗೂ ಏಳನೇ ತರಗತಿ ವಿದ್ಯಾರ್ಥಿನಿ ಫಾತಿಮತ್ ಅಫ್ರಾ 600 ರಲ್ಲಿ 582 ಅಂಕ ಪಡೆದು A+ ಗ್ರೇಡ್ ನೊಂದಿಗೆ, ತರಗತಿಗೆ ಪ್ರಥಮ ಸ್ಥಾನ ಪಡೆದಿರುತ್ತಾರೆ.
ರ್ಯಾಂಕ್ ಪಡೆದ ಝೈಬುನ್ನಿಸಾ’ಳಿಗೂ, A+ ಪಡೆದ ಫಾತಿಮತ್ ಅಫ್ರಾ’ಳಿಗೂ, ಅತ್ಯಧಿಕ ಅಂಕ ಪಡೆದು, ನಮ್ಮ ಮದ್ರಸಕ್ಕೆ ಕೀರ್ತಿ ತಂದ ಎಲ್ಲಾ ವಿದ್ಯಾರ್ಥಿಗಳಿಗೂ, ತರಗತಿ ಅಧ್ಯಾಪಕರಿಗೂ, ಪ್ರೋತ್ಸಾಹಿಸಿದ ರಕ್ಷಕರು, ಆಡಳಿತ ಸಮಿತಿಗೂ ಮದ್ರಸಾ ಮುಖ್ಯೋಪಾಧ್ಯಾಯರಾದ ಎನ್ ಎಂ ಶರೀಫ್ ಸಖಾಫಿ ನೆಕ್ಕಿಲ್ ರವರು ಹೃತ್ಪೂರ್ವಕ ಕೃತಜ್ಞತೆ, ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.
ಅಧ್ಯಾಪಕ ವೃಂದ ಹಾಗೂ ವಿದ್ಯಾರ್ಥಿಗಳು, ಅಲ್ ಮದ್ರಸತುಲ್ ಕುತುಬಿಯ್ಯ ಸೆಕೆಂಡರಿ ಮದ್ರಸ, MJM ಕೆಮ್ಮಾರ ಅಭಿನಂದನೆಗಳನ್ನು ಸಲ್ಲಿಸಿದೆ.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ