ಮಂಗಳೂರು,ಏ.11: ಕೇಂದ್ರ ಸರಕಾರ ಜಾರಿಗೆ ತಂದಿರುವ ವಿವಾದಿತ ವಕ್ಫ್ ತಿದ್ದುಪಡಿ ಮಸೂದೆಯನ್ನು ಹಿಂಪಡೆಯುವಂತೆ ಆಗ್ರಹಿಸಿ ಏ.18 ರಂದು ಮಂಗಳೂರಿನಲ್ಲಿ ಬೃಹತ್ ಪ್ರತಿಭಟನೆಯನ್ನು ಆಯೋಜಿಸಲಾಗಿದೆ.
ಕರ್ನಾಟಕ ಉಲಮಾ ಕೋಆರ್ಡಿನೇಷನ್ ವತಿಯಿಂದ ಖಾಝಿ ಶೈಖುನಾ ತ್ವಾಖಾ ಉಸ್ತಾದ್ ಮತ್ತು ಖಾಝಿ ಶೈಖುನಾ ಮಾಣಿ ಉಸ್ತಾದ್ ಇವರ ನೇತೃತ್ವದಲ್ಲಿ ಏ.18 ರಂದು ಶುಕ್ರವಾರ ಅಪರಾಹ್ನ 3 ಗಂಟೆಗೆ ಮಂಗಳೂರಿನ ಹೊರವಲಯದ ಅಡ್ಯಾರ್ ಕಣ್ಣೂರು ಶಾ ಗಾರ್ಡನ್ ನಲ್ಲಿ ಐತಿಹಾಸಿಕ ಹೋರಾಟ ನಡೆಯಲಿದೆ.
ಈ ಬಗ್ಗೆ ಜಾಗೃತಿ ಮೂಡಿಸುವಂತೆ ಎಲ್ಲಾ ಮೊಹಲ್ಲಾಗಳಿಗೆ ಸುತ್ತೋಲೆಯನ್ನು ಹೊರಡಿಸಲಾಗಿದ್ದು, ಶೀಘ್ರದಲ್ಲೇ ಕರ್ನಾಟಕ ಉಲಮಾ ಕೋಆರ್ಡಿನೇಷನ್ ಸಮಿತಿಯು ಪತ್ರಿಕಾಗೋಷ್ಠಿ ನಡೆಸಿ ಬೃಹತ್ ಪ್ರತಿಭಟನೆಯ ಬಗ್ಗೆ ಅಧಿಕೃತವಾಗಿ ಘೋಷಣೆ ಮಾಡಲಿದೆ.
2020ರ ಆರಂಭದಲ್ಲಿ ಕೇಂದ್ರ ಸರ್ಕಾರದ ಸಿಎಎ ಕಾಯ್ದೆ ಮತ್ತು ಎನ್ ಆರ್ ಸಿ ವಿರೋಧಿಸಿ ಮಂಗಳೂರು ಹೊರವಲಯದ ಅಡ್ಯಾರ್ ಕಣ್ಣೂರು ಮೈದಾನದಲ್ಲಿ ಬೃಹತ್ ಹೋರಾಟ ನಡೆದಿತ್ತು. ಅಂದಿನ ಪ್ರತಿಭಟನೆಯಲ್ಲಿ 1 ಲಕ್ಷಕ್ಕೂ ಅಧಿಕ ಜನರು ಸೇರಿದ್ದರು. ಈಗ ಅದೇ ಶಾ ಗಾರ್ಡನ್ ಮೈದಾನವು ಎನ್ ಆರ್ ಸಿ ಹೋರಾಟವನ್ನೂ ಮೀರಿಸುವ ದೊಡ್ಡ ಮಟ್ಟದ ಮತ್ತೊಂದು ಹೋರಾಟಕ್ಕೆ ಸಾಕ್ಷಿಯಾಗಲಿದೆ.
ಏಪ್ರಿಲ್ 18ರ ಪ್ರತಿಭಟನೆಯಲ್ಲಿ ಹಲವಾರು ಪ್ರಮುಖರು ಭಾಗವಹಿಸಲಿದ್ದಾರೆ. ಏಪ್ರಿಲ್ 12 ಶನಿವಾರದಂದು ಪತ್ರಿಕಾಗೋಷ್ಠಿ ನಡೆಸಲು ಕರ್ನಾಟಕ ಉಲಮಾ ಕೋಆರ್ಡಿನೇಷನ್ ತೀರ್ಮಾನಿಸಿದೆ.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ