ಮಂಗಳೂರು: ಕೇಂದ್ರ ಸರ್ಕಾರದ ಅಸಂವಿಧಾನಿಕ ವಕ್ಫ್ ತಿದ್ದುಪಡಿ ಮಸೂದೆಯ ವಿರುದ್ಧ ಸಂವಿಧಾನಿಕವಾಗಿ ಸಮುದಾಯವನ್ನು ಒಗ್ಗೂಡಿಸಿ ಹೋರಾಡಲು ಕರ್ನಾಟಕ ಉಲಮಾ ಕೋ ಆರ್ಡಿನೇಶನ್ ವತಿಯಿಂದ ಏಪ್ರಿಲ್ 18, ಶುಕ್ರವಾರ ಮಂಗಳೂರಿನ ಅಡ್ಯಾರ್ ಕಣ್ಣೂರಿನಲ್ಲಿ ಹಮ್ಮಿಕೊಂಡ ಬೃಹತ್ ಪ್ರತಿಭಟನಾ ಸಭೆಯನ್ನು ಯಶಸ್ವಿಗೊಳಿಸುವಂತೆ ಕರ್ನಾಟಕ ಮುಸ್ಲಿಂ ಜಮಾಅತ್ ದ.ಕ ವೆಸ್ಟ್ ಜಿಲ್ಲಾ ಸಮಿತಿ ಕರೆ ನೀಡಿದೆ.
ಜಿಲ್ಲಾಧ್ಯಕ್ಷ ಅಲೀ ಕುಂಞಿ ಹಾಜಿ ಪಾರೆ ಅಧ್ಯಕ್ಷತೆ ವಹಿಸಿದ ಕಣ್ಣೂರು ಸುನ್ನೀ ಸಂಟರಿನಲ್ಲಿ ನಡೆದ ಜಿಲ್ಲಾ ಕಾರ್ಯಕಾರಿ ಸಭೆಯಲ್ಲಿ ಈ ನಿರ್ಣಯವನ್ನು ಕೈಗೊಳ್ಳಲಾಗಿದೆ.
ಮುಸಲ್ಮಾನರ ಕೋಟ್ಯಾಂತರ ವಕ್ಫ್ ಆಸ್ತಿಗಳ ಮೇಲೆ ಕಣ್ಣಿಟ್ಟಿರುವ ಕೇಂದ್ರ ಸರಕಾರ ಮುಸಲ್ಮಾನರನ್ನು ಕಬಳಿಸುವ ಹುನ್ನಾರವನ್ನು ಹೊಂದಿದೆ. ನೂತನ ವಕ್ಫ್ ತಿದ್ದುಪಡಿ ಕಾಯ್ದೆಯನ್ನು ಪ್ರತಿಯೊಬ್ಬ ಭಾರತೀಯನು ತಿರಸ್ಕರಿಸಬೇಕಾಗಿದೆ , ಈ ಕುರಿತು ಕರ್ನಾಟಕ ಉಲಮಾ ಕೋ ಆರ್ಡಿನೇಶನ್ ಕರೆ ನೀಡಿರುವ ಬೃಹತ್ ಪ್ರತಿಭಟನೆಯನ್ನು ದ.ಕ ಜಿಲ್ಲಾ ವ್ಯಾಪ್ತಿಯ ಪ್ರತಿಯೊಂದು ಯುನಿಟ್ಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು, ಸದಸ್ಯರು ನಾಗರಿಕರು ಭಾಗವಹಿಸಿ ಯಶಸ್ವಿಗೊಳಿಸುವಂತೆ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಹೀಮ್ ಸಅದಿ ಖತರ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
















ಇನ್ನಷ್ಟು ಸುದ್ದಿಗಳು
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್
ಮದ್ರಸಾ ಅಧ್ಯಾಪಕರ ಮೇಲಿನ ಹಲ್ಲೆ ಅತ್ಯಂತ ಖಂಡನೀಯ- ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ SJM ಕಿನ್ನಿಗೋಳಿ ರೇಂಜ್ ಆಗ್ರಹ