janadhvani

Kannada Online News Paper

ವಕ್ಫ್ ಪ್ರತಿಭಟನೆ: ಮುಸ್ಲಿಮ್ ಸೆಂಟ್ರಲ್ ಕಮಿಟಿ ಸಮಾವೇಶ ಮುಂದೂಡಿಕೆ

ಏಪ್ರಿಲ್ 29 ರ ಕೂಳೂರು ಡೆಲ್ಟಾ ಮೈದಾನದ ವಕ್ಫ್ ತಿದ್ದುಪಡಿ ಮಸೂದೆಯ ವಿರುದ್ಧದ ಪ್ರತಿಭಟನಾ ಸಮಾವೇಶವನ್ನು ವಿವಿಧ ಕಾರಣಗಳಿಗಾಗಿ ಮುಂದೂಡಲಾಗಿದೆ

ಮಂಗಳೂರು: ಕೇಂದ್ರ ಸರಕಾರದ ವಕ್ಫ್ ತಿದ್ದುಪಡಿ ಮಸೂದೆಯ ವಿರುದ್ಧ ಮುಸ್ಲಿಮ್ ಸೆಂಟ್ರಲ್ ಕಮಿಟಿ ನಿಗದಿಪಡಿಸಿದ್ದ ಏಪ್ರಿಲ್ 29ರಂದು ಕೂಳೂರಿನ ಡೆಲ್ಟಾ ಮೈದಾನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮವನ್ನು ಮುಂದೂಡಲಾಗಿದೆ.

ಇತ್ತೀಚೆಗೆ ತಾರೀಕು 19 ರಂದು ಶನಿವಾರ ಮುಸ್ಲಿಮ್ ಸೆಂಟ್ರಲ್ ಕಮಿಟಿಯ ಕಾರ್ಯಕಾರಿ ಸಮಿತಿ ಸದಸ್ಯರು ವಿವಿಧ ಸಂಘಟನೆಗಳ ಮುಖಂಡರು ಮತ್ತು ಹಿರಿಯ ಸಲಹೆಗಾರರು ನಡೆಸಿದ ಸಭೆಯಲ್ಲಿ, ಈಗಾಗಲೇ ನಿಗದಿ ಪಡಿಸಿದ ಏಪ್ರಿಲ್ 29 ರ ಕೂಳೂರು ಡೆಲ್ಟಾ ಮೈದಾನದ ವಕ್ಫ್ ತಿದ್ದುಪಡಿ ಮಸೂದೆಯ ವಿರುದ್ಧದ ಪ್ರತಿಭಟನಾ ಸಮಾವೇಶವನ್ನು ವಿವಿಧ ಕಾರಣಗಳಿಗಾಗಿ ಮುಂದೂಡಲಾಗಿದ್ದು, ಕಾರ್ಯಕ್ರಮವನ್ನು ಮೇ 16 ನೇ ಶುಕ್ರವಾರ ನಡೆಸುವ ಬಗ್ಗೆ ಪುನರ್ ತೀರ್ಮಾನ ಕೈಗೊಳ್ಳಲಾಗಿದ್ದು ದ.ಕ ಮತ್ತು ಉಡುಪಿ ಜಿಲ್ಲಾ ದಿ ಮುಸ್ಲಿಂ ಸೆಂಟ್ರಲ್ ಕಮಿಟಿಯ ಅಧ್ಯಕ್ಷರಾದ ಹಾಜಿ. ಕೆ.ಎಸ್.ಮೊಹಮ್ಮದ್ ಮಸೂದ್ ರವರ ನಿವಾಸದಲ್ಲಿ ಸಭೆ ನಡೆಸಿ ತಿರ್ಮಾನಿಸಲಾಗಿದೆ ಎಂದು ಉಪಾಧ್ಯಕ್ಷರಾದ ಕೆ . ಅಶ್ರಫ್ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.