ಕೋಝಿಕ್ಕೋಡ್ | ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿಯು ಭಾರತದ ಶಾಂತಿಯುತ ಜೀವನದ ವಿರುದ್ಧದ ಹೇಯ ಆಕ್ರಮಣವಾಗಿದೆ ಎಂದು ಇಂಡಿಯನ್ ಗ್ರ್ಯಾಂಡ್ ಮುಫ್ತಿ ಕಾಂತಪುರಂ ಎ.ಪಿ.ಅಬೂಬಕರ್ ಮುಸ್ಲಿಯಾರ್ ಹೇಳಿದ್ದಾರೆ. ಪ್ರಪಂಚದ ವಿವಿಧ ಭಾಗಗಳಿಂದ ಪ್ರವಾಸಿಗರು ಸೇರುವ ಸಮಯದಲ್ಲಿ ಈ ದಾಳಿಯನ್ನು ಆಯ್ಕೆ ಮಾಡಲಾಗಿದೆ. ಜನರೆಡೆಯಲ್ಲಿ ಭಯವನ್ನುಂಟು ಮಾಡಿ ಕಾಶ್ಮೀರಕ್ಕೆ ಜನರ ಹರಿವನ್ನು ನಿಲ್ಲಿಸುವುದು ಮತ್ತು ಶಾಂತಿಯುತ ವಾತಾವರಣವನ್ನು ಮುರಿದು ಕಾಶ್ಮೀರಿಗಳನ್ನು ತೊಂದರೆಗೀಡಾದ ಜೀವನಕ್ಕೆ ತಳ್ಳುವುದು ಈ ದಾಳಿಯ ಉದ್ದೇಶವಾಗಿದೆ.
ಭಯೋತ್ಪಾದನೆಯಿಂದ ಭಾರತವನ್ನು ಸೋಲಿಸಲು ಸಾಧ್ಯವಿಲ್ಲ. ಅಂತಹ ಹೀನ ಕೃತ್ಯಗಳ ಮುಂದೆ ದೇಶವು ತಲೆ ಬಾಗುವುದಿಲ್ಲ. ಅಪರಾಧಿಗಳನ್ನು ಬಂಧಿಸಿ ಶಿಕ್ಷೆಯನ್ನು ಖಾತ್ರಿಪಡಿಸುವುದರೊಂದಿಗೆ ಕಾಶ್ಮೀರಿಗಳ ಜೀವನವನ್ನು ಅವರ ಸಾಮಾನ್ಯ ಸ್ಥಿತಿಗೆ ಸುಲಭವಾಗಿ ಮರುಸ್ಥಾಪಿಸಲು ಪ್ರಯತ್ನಿಸಬೇಕು ಎಂದು ಕಾಂತಪುರಂ ಹೇಳಿದರು. ದಾಳಿಯಲ್ಲಿ ಮೃತಪಟ್ಟವರ ಕುಟುಂಬಗಳು ಮತ್ತು ಪ್ರೀತಿಪಾತ್ರರಿಗೆ ಗ್ರ್ಯಾಂಡ್ ಮುಫ್ತಿ ಸಂತಾಪ ವ್ಯಕ್ತಪಡಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ
ಮಾದರಿ ಮದುವೆ ಅಭಿಯಾನದ ಸಮಾರೋಪ ಪ್ರಚಾರ; ಎ.28, 29 ರಂದು ವಾಹನ ಸಂದೇಶ ಜಾಥಾ
ಮುಂಬೈಯನ್ನು ನಡುಗಿಸಿದ ಘಟನೆ: ಬಿರಿಯಾನಿ ಮತ್ತು ಕಲ್ಲಂಗಡಿ ತಿಂದ ಕುಟುಂಬ ಬೆಳಗಾಗುವಷ್ಟರಲ್ಲಿ ಅಂತ್ಯ
‘ಮಾದರಿ ಮದುವೆ ಅಭಿಯಾನ’ ಸಮಾರೋಪ ಸಮಾರಂಭ – ಎಸ್ವೈಎಸ್ ಬಂಟ್ವಾಳ ಝೋನ್ ಯಶಸ್ವಿಗೆ ಕರೆ
ಮಂಗಳೂರು ಪೊಲೀಸ್ ಕಮಿಷನರ್: ವರ್ಗಾವಣೆ ವಿಚಾರ ಕೈಬಿಡುವಂತೆ ಮನವಿ- ಡಿಜಿಪಿಗೆ ಇಕ್ಬಾಲ್ ಬಾಳಿಲ ಪತ್ರ
ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ತೆಗೆಸಿದ ಘಟನೆ: ಸಚಿವ ದಿನೇಶ್ ಗುಂಡೂರಾವ್ ತೀವ್ರ ಖಂಡನೆ
ಇಂಡಿಯನ್ ಗ್ರಾಂಡ್ ಮುಫ್ತಿ ಜಿಲ್ಲೆಗೆ- ಯಶಸ್ವಿಗಾಗಿ ಸಮಾಲೋಚನಾ ಸಭೆ