ಮಂಗಳೂರು: ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದಿರುವ ಭಯೋತ್ಪಾದಕ ದಾಳಿಯನ್ನು ಕರ್ನಾಟಕ ರಾಜ್ಯ ಸುನ್ನೀ ಯುವಜನ ಸಂಘ ತೀವ್ರವಾಗಿ ಖಂಡಿಸಿದೆ.
ಕಾಶ್ಮೀರದಲ್ಲಿ ಮಿನಿ ಸ್ವಿಜರ್ಲೆಂಡ್ ಎಂದೇ ಗುರುತಿಸಿಕೊಂಡಿರುವ ಪ್ರವಾಸಿ ತಾಣ ಪಹಲ್ಗಾಮ್ನಲ್ಲಿ ದೇಶ ವಿದೇಶಗಳಿಂದ ವಿವಿಧ ಜಾತಿ ಮತಗಳ ಜನರು ಬಂದು ಪ್ರಕೃತಿ ಸೌಂದರ್ಯವನ್ನು ಸವಿದು ಖುಷಿ ಖುಷಿಯಾಗಿ ಹೋಗುತ್ತಾರೆ. ಅಂತಹ ಯಾತ್ರಿಕರನ್ನು ಕೊಲ್ಲುವ, ರಾಜ್ಯದ ಶಾಂತಿಯನ್ನು ಕೆಡಹುವ ಮತ್ತು ಜನರನ್ನು ಜಾತಿ ಧರ್ಮದ ಹೆಸರಿನಲ್ಲಿ ಕಚ್ಚಾಡಿಸುವ ಹೀನ ಮನಸ್ಥಿತಿ ಈ ದಾಳಿಯ ಹಿಂದೆ ಇದೆ.
ದಾಳಿಕೋರರನ್ನು ಉಗ್ರ ಶಿಕ್ಷೆಗೆ ಗುರಿ ಪಡಿಸಬೇಕು. ದಾಳಿಯ ಹಿನ್ನೆಲೆಯಲ್ಲಿ ಭಾರತೀಯರು ಪರಸ್ಪರ ಮತ ಧರ್ಮಗಳ ಹೆಸರಿನಲ್ಲಿ ಜಗಳ ಕಾಯುವ ಮೂಲಕ ಭಯೋತ್ಪಾದಕರ ಉದ್ದೇಶವನ್ನು ಯಶಸ್ಸುಗೊಳಿಸಬಾರದು. ದಾಳಿಗೊಳಗಾದವರನ್ನು ರಕ್ಷಿಸಲು ಜೀವ ಪಣಕ್ಕಿಟ್ಟು ಹೋರಾಡುತ್ತಿರುವ ಕಾಶ್ಮೀರಿ ಮುಸ್ಲಿಮರು ಸೇರಿದಂತೆ ಎಲ್ಲರೂ ಒಂದಾಗಿ ಭಯೋತ್ಪಾದಕರನ್ನು ಸೋಲಿಸಬೇಕು ಎಂದು ಕೆ ಎಂ ಅಬೂಬಕರ್ ಸಿದ್ದೀಕ್ (ಎಸ್ ವೈ ಎಸ್ ರಾಜ್ಯ ಸಂಘಟನಾ ಕಾರ್ಯದರ್ಶಿ) ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ
ಮಾದರಿ ಮದುವೆ ಅಭಿಯಾನದ ಸಮಾರೋಪ ಪ್ರಚಾರ; ಎ.28, 29 ರಂದು ವಾಹನ ಸಂದೇಶ ಜಾಥಾ
ಮುಂಬೈಯನ್ನು ನಡುಗಿಸಿದ ಘಟನೆ: ಬಿರಿಯಾನಿ ಮತ್ತು ಕಲ್ಲಂಗಡಿ ತಿಂದ ಕುಟುಂಬ ಬೆಳಗಾಗುವಷ್ಟರಲ್ಲಿ ಅಂತ್ಯ
‘ಮಾದರಿ ಮದುವೆ ಅಭಿಯಾನ’ ಸಮಾರೋಪ ಸಮಾರಂಭ – ಎಸ್ವೈಎಸ್ ಬಂಟ್ವಾಳ ಝೋನ್ ಯಶಸ್ವಿಗೆ ಕರೆ