ಮಂಗಳೂರು: ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದಿರುವ ಭಯೋತ್ಪಾದಕ ದಾಳಿಯನ್ನು ಕರ್ನಾಟಕ ರಾಜ್ಯ ಸುನ್ನೀ ಯುವಜನ ಸಂಘ ತೀವ್ರವಾಗಿ ಖಂಡಿಸಿದೆ.
ಕಾಶ್ಮೀರದಲ್ಲಿ ಮಿನಿ ಸ್ವಿಜರ್ಲೆಂಡ್ ಎಂದೇ ಗುರುತಿಸಿಕೊಂಡಿರುವ ಪ್ರವಾಸಿ ತಾಣ ಪಹಲ್ಗಾಮ್ನಲ್ಲಿ ದೇಶ ವಿದೇಶಗಳಿಂದ ವಿವಿಧ ಜಾತಿ ಮತಗಳ ಜನರು ಬಂದು ಪ್ರಕೃತಿ ಸೌಂದರ್ಯವನ್ನು ಸವಿದು ಖುಷಿ ಖುಷಿಯಾಗಿ ಹೋಗುತ್ತಾರೆ. ಅಂತಹ ಯಾತ್ರಿಕರನ್ನು ಕೊಲ್ಲುವ, ರಾಜ್ಯದ ಶಾಂತಿಯನ್ನು ಕೆಡಹುವ ಮತ್ತು ಜನರನ್ನು ಜಾತಿ ಧರ್ಮದ ಹೆಸರಿನಲ್ಲಿ ಕಚ್ಚಾಡಿಸುವ ಹೀನ ಮನಸ್ಥಿತಿ ಈ ದಾಳಿಯ ಹಿಂದೆ ಇದೆ.
ದಾಳಿಕೋರರನ್ನು ಉಗ್ರ ಶಿಕ್ಷೆಗೆ ಗುರಿ ಪಡಿಸಬೇಕು. ದಾಳಿಯ ಹಿನ್ನೆಲೆಯಲ್ಲಿ ಭಾರತೀಯರು ಪರಸ್ಪರ ಮತ ಧರ್ಮಗಳ ಹೆಸರಿನಲ್ಲಿ ಜಗಳ ಕಾಯುವ ಮೂಲಕ ಭಯೋತ್ಪಾದಕರ ಉದ್ದೇಶವನ್ನು ಯಶಸ್ಸುಗೊಳಿಸಬಾರದು. ದಾಳಿಗೊಳಗಾದವರನ್ನು ರಕ್ಷಿಸಲು ಜೀವ ಪಣಕ್ಕಿಟ್ಟು ಹೋರಾಡುತ್ತಿರುವ ಕಾಶ್ಮೀರಿ ಮುಸ್ಲಿಮರು ಸೇರಿದಂತೆ ಎಲ್ಲರೂ ಒಂದಾಗಿ ಭಯೋತ್ಪಾದಕರನ್ನು ಸೋಲಿಸಬೇಕು ಎಂದು ಕೆ ಎಂ ಅಬೂಬಕರ್ ಸಿದ್ದೀಕ್ (ಎಸ್ ವೈ ಎಸ್ ರಾಜ್ಯ ಸಂಘಟನಾ ಕಾರ್ಯದರ್ಶಿ) ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್