ಮಂಗಳೂರು,ಮೇ.3: ಇಲ್ಲಿನ ಹೊರವಲಯದ ಬಜ್ಪೆಯಲ್ಲಿ ರೌಡಿಶೀಟರ್ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದಲ್ಲಿ ಎಂಟು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ತಿಳಿಸಿದ್ದಾರೆ.

ಈ ಕುರಿತು ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಕರಣ ಸಂಬಂಧ ಅಬ್ದುಲ್ ಸಫ್ವಾನ್, ನಿಯಾಜ್, ಮೊಹಮ್ಮದ್ ಮುಝಮ್ಮಿಲ್, ಕಲಂದರ್ ಶಾಫಿ, ಆದಿಲ್ ಮೆಹರೂಪ್, ನಾಗರಾಜ್, ಮೊಹಮ್ಮದ್ ರಿಜ್ವಾನ್ ಮತ್ತು ರಂಜಿತ್ ಎಂಬುವರನ್ನು ಬಂಧಿಸಲಾಗಿದೆ ಎಂದರು.
ಆರು ಜನ ಸೇರಿ ಸುಹಾಸ್ ಶೆಟ್ಟಿಯನ್ನು ಕೊಲೆ ಮಾಡಿದ್ದಾರೆ. ಇದರಲ್ಲಿ ಆರೋಪಿ ಸಫ್ವಾನ್ ಮೇಲೆ 2023 ರಲ್ಲಿ ಮಾರಣಾಂತಿಕ ಹಲ್ಲೆಯಾಗಿತ್ತು. ಸುಹಾಸ್ ಶೆಟ್ಟಿ ಸ್ನೇಹಿತರಾದ ಪ್ರಶಾಂತ್, ಪುನೀತ್ ಮತ್ತು ಧನರಾಜ್ ಹಲ್ಲೆ ಮಾಡಿದ್ದರು. ಇದರಿಂದ ಸಫ್ವಾನ್ ಗೆ ಸುಹಾಸ್ ನಿಂದ ಕೊಲೆ ಆತಂಕ ಇತ್ತು. ಈ ಹಿನ್ನಲೆ ಸುಹಾಸ್ ಕೊಲೆ ಮಾಡಲು ತೀರ್ಮಾನ ಮಾಡಿದ್ದ ಎಂದು ಹೇಳಿದರು.
ಈ ಹಿನ್ನೆಲೆಯಲ್ಲಿ ಈ ಹಿಂದೆ ಕೊಲೆಯಾದ ಫಾಝಿಲ್ ಸಹೋದರ ಆದಿಲ್ ಅವರನ್ನು ಸಫ್ವಾನ್ ಸಂಪರ್ಕಿಸಿ ಕೊಲೆ ಮಾಡೋಕೆ ತೀರ್ಮಾನ ಮಾಡುತ್ತಾರೆ. ಸುಹಾಸ್ ಕೊಲೆಗೆ ಆದಿಲ್ ನಿಂದ ಸಫ್ವಾನ್ ತಂಡ ಐದು ಲಕ್ಷ ರೂಪಾಯಿ ಪಡೆಯುತ್ತದೆ. ಆ ಬಳಿಕ ನಿಯಾಜ್ ತನ್ನ ಇಬ್ಬರು ಸ್ನೇಹಿತರಾದ ನಾಗಾರಾಜ್ ಮತ್ತು ರಂಜಿತ್ ನ ಸಂಪರ್ಕ ಮಾಡುತ್ತಾರೆ. ಈ ಇಬ್ಬರು ಸಫ್ವಾನ್ ಮನೆಯಲ್ಲಿ ಎರಡು ದಿನಗಳಿಂದ ವಾಸ ಮಾಡಿ, ಮೇ 1 ರಂದು ಸುಹಾಸ್ ಚಲನವಲನಗಳನ್ನು ಗಮನಿಸಿ ಕೊಲೆ ಮಾಡಿದ್ದಾರೆ ಎಂದರು.
ಕೊಲೆಯಾದ ಸಂದರ್ಭದಲ್ಲಿ ಇಬ್ಬರು ಬುರ್ಖಾಧಾರಿ ಮಹಿಳೆಯರು ಆರೋಪಿಗಳಿಗೆ ಸಹಾಯ ಮಾಡುತ್ತಿದ್ದ ವಿಡಿಯೋ ವೈರಲ್ ಆಗಿದ್ದು, ಈ ಬಗ್ಗೆ ಈ ಇಬ್ಬರು ಮಹಿಳೆಯರನ್ನು ಕರೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ.
ಈ ಪ್ರಕರಣದಲ್ಲಿ ಹತ್ಯೆಯಾದ ಫಾಝಿಲ್ ಅವರ ಅಣ್ಣ ಆದಿಲ್ ಹಣ ನೀಡಿದ್ದಾದರೆ, ಅದು ಫಾಝಿಲ್ ಹತ್ಯೆಗೆ ಪ್ರತೀಕಾರವಲ್ಲವೇ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಕಮಿಷನರ್, ಇದನ್ನು ಪ್ರತೀಕಾರದ ಹತ್ಯೆ ಎಂದು ಹೇಳಲಾಗದು, ಇದೊಂದು ಮಿಶ್ರಿತ ಕೃತ್ಯವಾಗಿದೆ. ಸಫ್ವಾನ್ ಮತ್ತು ತಂಡವು ನಡೆಸಲು ತೀರ್ಮಾನಿಸಿದ ಹತ್ಯೆ ಸಂಚಿಗೆ, ಆದಿಲನ್ನು ಸಂಪರ್ಕಿಸಿ ಫಂಡ್ ಪಡೆದಿದ್ದಾರೆ ಎಂದರು.
ಒಟ್ಟಿನಲ್ಲಿ ಹೇಳುವುದಾದರೆ, ಆದಿಲ್ ನಿಂದ ಹಣ ಪಡೆದು, ಸಫ್ವಾನ್ ಮತ್ತು ತಂಡ ತಮ್ಮ ಹಳೆಯ ಸೇಡನ್ನು ತೀರಿಸಿದ್ದಾರೆ. ಇದು ನಿಜಕ್ಕೂ ಒಂದು ಗ್ಯಾಂಗ್ ವಾರ್ ಆಗಿದ್ದು, ಜಿಲ್ಲೆಯ ಶಾಂತಿ ಕದಡುವ ಕೃತ್ಯವಾಗಿದೆ. ಇಂತಹಾ ಕೃತ್ಯಗಳು ಮರುಕಳಿಸದಂತೆ ರೌಡಿ ನಿಗ್ರಹ ದಳ ಮತ್ತಷ್ಟು ಚುರುಕುಗೊಳ್ಳಬೇಕಾಗಿದೆ.
















ಇನ್ನಷ್ಟು ಸುದ್ದಿಗಳು
ಮಾದಕ ವಸ್ತು ‘ಖಾತ್’ ಮಾರಾಟ: ಭಾರತೀಯ ಪ್ರಜೆ ಸೌದಿಯಲ್ಲಿ ಬಂಧನ
ಅನಿವಾಸಿಗಳಿಗೆ ಶುಭ ಸುದ್ದಿ: ಕುವೈತ್ನಿಂದ ಭಾರತೀಯ ವಿಮಾನ ಸೇವೆಗಳು ಪುನರಾರಂಭ
ಟೋಲ್ ಪ್ಲಾಜಾ ಸಮೀಪದ ನಿವಾಸಿಗಳಿಗೆ ಗುಡ್ ನ್ಯೂಸ್: 20 ಕಿ.ಮೀ ವ್ಯಾಪ್ತಿಯವರಿಗೆ ಡಿಜಿಟಲ್ ಪಾಸ್ ಸೌಲಭ್ಯ!
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ಗೆ ಭರ್ಜರಿ ಗೆಲುವು- ಆಡಳಿತದ ಹಾದಿಗೆ ಸಿಕ್ಕ ಮುದ್ರೆ ಎಂದ ಸಿಎಂ ಡಿ.ಕೆ. ಶಿವಕುಮಾರ್
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ
‘ಗಲ್ಫ್ ಪ್ರದೇಶದ ಸಂಘರ್ಷಗಳನ್ನು ಭಾರತಕ್ಕೆ ನಿರ್ಲಕ್ಷಿಸಲು ಸಾಧ್ಯವಿಲ್ಲ’ – ಭಾರತೀಯ ರಾಯಭಾರಿ ಡಾ. ಸುಹೈಲ್ ಅಜಾಝ್ ಖಾನ್
ಕೆಸಿಎಫ್ ಅಂತಾರಾಷ್ಟ್ರೀಯ ಸಮಿತಿ: ‘E-GEN ಸ್ಕಾಲರ್ಶಿಪ್’ ಗೆ ಅಧಿಕೃತ ಚಾಲನೆ
SIR ಪ್ರಕ್ರಿಯೆ: ಮತದಾರರ ಹಕ್ಕು ರಕ್ಷಣೆಗೆ ಸಿಪಿಐ(ಎಂ) ಆಗ್ರಹ- ಮುಖ್ಯಮಂತ್ರಿಗಳಿಗೆ ಮನವಿ
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ