ಮೈಸೂರು: ಮೈಸೂರಿನ ಹೊರವಲಯದಲ್ಲಿ ರೌಡಿಶೀಟರ್ ಕಾರ್ತಿಕ್ ಹತ್ಯೆ ನಡೆದಿದೆ. ವರುಣ ಗ್ರಾಮದ ಸನಿಹದಲ್ಲಿರುವ ಹೋಟೆಲ್ ಬಳಿ ಹತ್ಯೆ ನಡೆದಿದ್ದು, ಕೊಲೆಯಾದ ಮೈಸೂರು ನಗರದ ಕ್ಯಾತಮಾರನಹಳ್ಳಿ ನಿವಾಸಿ ಕಾರ್ತಿಕ್ ರೌಡಿಶೀಟರ್ ಆಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ವೈಯುಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು, ಭಾನುವಾರ ತಡರಾತ್ರಿ ಹತ್ಯೆ ನಡೆದಿದೆ.
ಐದು ಜನರ ತಂಡದಿಂದ ದುಷ್ಕೃತ್ಯ ಎಸಗಲಾಗಿದ್ದು, ಹತ್ಯೆಯ ದೃಶ್ಯ ಹೋಟೆಲ್ ಆವರಣದ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಈ ಸಂಬಂಧ ವರುಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೊಲೆಗೀಡಾದ ಕ್ಯಾತಮಾರನಹಳ್ಳಿ ನಿವಾಸಿ ಕಾರ್ತಿಕ್ ಹಾಗೂ ಗಾಯಿತ್ರಿಪುರಂ ನಿವಾಸಿ ಪ್ರವೀಣ್ ನಡುವೆ ಈ ಹಿಂದೆ ಗಲಾಟೆಯಾಗಿತ್ತು. ನಾಲ್ಕೈದು ತಿಂಗಳ ಹಿಂದೆ ಹಣಕಾಸಿನ ವಿಚಾರಕ್ಕೆ ನಡೆದಿದ್ದ ಗಲಾಟೆಯಲ್ಲಿ, ಪ್ರವೀಣ್ ಎಂಬಾತನನ್ನು ಕೊಲೆ ಮಾಡುವುದಾಗಿ ಕಾರ್ತಿಕ್ ಧಮ್ಕಿ ಹಾಕಿದ್ದ. ಹೀಗಾಗಿ ಕಾರ್ತಿಕ್ ಕೊಲೆ ಮಾಡ್ತಾನೆ ಎನ್ನುವ ಭಯದಲ್ಲೇ ಹುಡುಗರ ಗ್ಯಾಂಗ್ ಕಟ್ಟಿಕೊಂಡು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.
ಕೆಲವು ದಿನಗಳ ಹಿಂದೆ ಚಿಕ್ಕಹಳ್ಳಿಯಲ್ಲಿ ನಡೆದ ಕೊಲೆ ಯತ್ನ ಕೇಸ್ನಲ್ಲಿ ಜೈಲು ಸೇರಿದ್ದ ಕಾರ್ತಿಕ್, ಬಳಿಕ ಬೇಲ್ ಮೇಲೆ ಹೊರಬಂದಿದ್ದ. ಹೀಗಾಗಿ ಈ ಸಂದರ್ಭ ನೋಡಿ, ಸ್ಕೆಚ್ ಹಾಕಿ ಕಾರ್ತಿಕ್ ಕೊಲೆ ಮಾಡಲಾಗಿದೆ.
ನನ್ನ ಮಗನಿಗೆ ರಾತ್ರಿ 10.45ಕ್ಕೆ ಫೋನ್ ಮಾಡಿದ್ದೆ, ಊಟ ಮಾಡಿಕೊಂಡು ಹೋಗಲು ಹೇಳಿದ್ದೆ. ಅದಕ್ಕೆ ಅವನು ಬರ್ತೀನಮ್ಮ ಚಪಾತಿ ಮಾಡಿಡು ಅಂತ ಹೇಳಿದ್ದ. ಕಾರ್ತಿಕ್ ರಾತ್ರಿ 11.30ಕ್ಕೆ ಬಂದು ಊಟ ಮಾಡಿಕೊಂಡು ಹೋಗಿದ. ನಂತರ ರಾತ್ರಿ 1.30ಕ್ಕೆ ಆತನ ಜೊತೆಗಿದ್ದ ಹುಡುಗಿಯಿಂದ ಪೋನ್ ಬಂದಿದೆ. ಆದರೆ ನಾನು ಕರೆ ಸ್ವೀಕರಿಸಲಿಲ್ಲ. ನಂತರ ಬೆಳಿಗ್ಗೆ ಆತನ ಸ್ನೇಹಿತರು ಮನೆ ಮುಂದೆ ಬಂದು ಕೂಗಾಡಿದಾಗ ವಿಷಯ ಗೊತ್ತಾಯಿತು ಎಂದು ಮೃತ ಕಾರ್ತಿಕ್ ತಾಯಿ ಶಾಂತಕುಮಾರಿ ಹೇಳಿಕೆ ನೀಡಿದ್ದಾರೆ.
ನಮ್ಮ ಏರಿಯಾದ ಲಕ್ಷ್ಮಿ ಎಂಬುವಳ ಮೂಲಕ ಈ ಕೊಲೆ ಆಗಿರಬಹುದು. ಲಕ್ಷ್ಮಿಯನ್ನು ಪ್ರವೀಣ್ ಟ್ರ್ಯಾಪ್ ಮಾಡಿದ್ದಾನೆ. ಆಕೆಯ ಮೂಲಕ ನನ್ನ ಮಗ ಇರುವ ಜಾಗವನ್ನು ಗೊತ್ತು ಮಾಡಿಕೊಂಡಿದ್ದಾನೆ.
ಲಕ್ಷ್ಮಿ ಮೂಲಕ ಪೋನ್ ಮಾಡಿಸಿ ಕರೆಸಿಕೊಂಡು ಕೊಲೆ ಮಾಡಿರಬಹುದು. ಇದು ಲಕ್ಷ್ಮಿ ಮುಖೇನವೇ ಆಗಿರುವ ಕೊಲೆ. ಆಕೆಯನ್ನು ಹಿಡಿದು ವಿಚಾರಿಸಿದರೆ ಎಲ್ಲವೂ ಗೊತ್ತಾಗುತ್ತದೆ. ನನ್ನನ್ನು ಎಲ್ಲರೂ ಬಂದು ಅಮ್ಮ ಅಂತ ಕರೆಯುತ್ತಾರೆ, ಯಾರ ಮೇಲೆ ನಾನು ಅನುಮಾನ ಪಡಲಿ ಹೇಳಿ ಎಂದು ಕಾರ್ತಿಕ್ ತಾಯಿ ಶಾಂತಕುಮಾರಿ ಹೇಳಿದ್ದಾರೆ.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ