ನವದೆಹಲಿ: ಪಹಲ್ಗಾಮ್ ಉಗ್ರರ ದಾಳಿಗೆ ಪ್ರತೀಕಾರವಾಗಿ ಭಾರತ ನಡೆಸಿದ ಆಪರೇಷನ್ ಸಿಂಧೂರ್ ಪರಿಣಾಮದ ನಂತರ ದೇಶದ ಎಲ್ಲಾ ಕಡೆಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದ್ದು, ದೇಶದ ಪ್ರಮುಖ ವಿಮಾನ ನಿಲ್ದಾಣಗಳ ಮೇಲೂ ಪ್ರತಿದಾಳಿಯ ಕರಿನೆರಳು ಬಿದ್ದಿದೆ. ಭದ್ರತಾ ಕ್ರಮವಾಗಿ ಕೇಂದ್ರ ವಿಮಾನಯಾನ ಇಲಾಖೆಯ ಆದೇಶದಂತೆ 27 ವಿಮಾನ ನಿಲ್ದಾಣಗಳನ್ನು ತಾತ್ಕಾಲಿಕವಾಗಿ ಮುಚ್ಚಲಾಗಿದೆ.
ಭಾರತದಲ್ಲಿ ಹೈ ಅಲರ್ಟ್ ಘೋಷಿಸಿದ ಹಿನ್ನೆಲೆಯಲ್ಲಿ ಎಲ್ಲಾ ನಗರಗಳ ಮೇಲೆ ಪೊಲೀಸರು ಕಟ್ಟೆಚ್ಚರ ವಹಿಸುವಂತೆ ತಿಳಿಸಲಾಗಿದೆ. ಉಳಿದ ಎಲ್ಲಾ ವಿಮಾನ ನಿಲ್ದಾಣಗಳಲ್ಲಿ ನಿರ್ಗಮನ ಮತ್ತು ಆಗಮನದ ಪ್ರತಿಯೊಬ್ಬ ಪ್ರಜೆ ಮೇಲೂ ನಿಗಾ ವಹಿಸಲಾಗಿದ್ದು, ಸಂದರ್ಶಕರಿಗೆ ಟರ್ಮಿನಲ್ ಪ್ರವೇಶವನ್ನು ನಿಷೇಧಿಸಲಾಗಿದೆ. ಯಾವುದೇ ಸಂದರ್ಭದಲ್ಲೂ ಆಗುವ ದಾಳಿಗೆ ಮುಂಜಾಗ್ರತೆ ವಹಿಸಲಾಗುತ್ತಿದೆ.
ತೀರಾ ಸೂಕ್ಷ್ಮ ವಾಯುನೆಲೆಗಳ ಮೇಲೆ ನಿಗಾ ಇಟ್ಟಿರುವ ದೇಶದ ಭದ್ರತಾ ಇಲಾಖೆ ಈಗಾಗಲೇ 27 ವಾಯು ನೆಲೆಗಳನ್ನು ತಾತ್ಕಾಲಿಕವಾಗಿ ಮುಚ್ಚಲಾಗಿದೆ. ಶನಿವಾರ (ಮೇ 10) ಬೆಳಿಗ್ಗೆ 5.29 ರವರೆಗೆ ಈ ವಿಮಾನ ನಿಲ್ದಾಣಗಳು ಮುಚ್ಚಲ್ಪಡುತ್ತವೆ. ಇದಲ್ಲದೆ, ಭಾರತೀಯ ವಿಮಾನಯಾನ ಸಂಸ್ಥೆಗಳು ಗುರುವಾರ (ಮೇ 08) ಒಟ್ಟು 430 ವಿಮಾನಗಳನ್ನು ರದ್ದುಗೊಳಿಸಿವೆ. ಇದು ಭಾರತದ ಒಟ್ಟು ನಿಗದಿತ ವಿಮಾನಗಳ ಶೇಕಡಾ 3 ರಷ್ಟಿದೆ. ಪಾಕಿಸ್ತಾನದ ಒಂಬತ್ತು ಭಯೋತ್ಪಾದಕ ಶಿಬಿರಗಳ ಮೇಲೆ ದಾಳಿ ನಡೆದ ನಂತರ ಭಾರತ ಈ ನಿರ್ಧಾರ ತೆಗೆದುಕೊಂಡಿದೆ.
ತಾತ್ಕಾಲಿಕವಾಗಿ ಮುಚ್ಚಲ್ಪಟ್ಟ ವಿಮಾನ ನಿಲ್ದಾಣಗಳು
1. ಚಂಡೀಗಢ
2. ಶ್ರೀನಗರ
3. ಅಮೃತಸರ
4. ಲುಧಿಯಾನ
5. ಭುಂತರ್
6. ಕಿಶನ್ಗಢ
7. ಪಟಿಯಾಲ
8. ಶಿಮ್ಲಾ
9. ಗಗ್ಗಲ್
10. బటిండా
11. ಜೈಸರ್
12. ಜೋಧಪುರ
13. ಬಿಕಾನೇರ್
14. ಹಲ್ವಾರಾ
15. ಪಠಾಣ್ಕೋಟ್
16.ಲೇಹ್
17.ಜಮ್ಮು
18. ಮುಂದ್ರಾ
19. ಜಾಮ್ನಗರ
20. ರಾಜ್ಕೋಟ್
21. ಪೋರಬಂದರ್
22. ಕಾಂಡ್ಲಾ
23. ಕೇಶೋದ್
24.ಭುಜ್
25. ಧರ್ಮಶಾಲಾ
26. ಗ್ವಾಲಿಯರ್
27. ಹಿಂದನ್ (ಘಜಿಯಾಬಾದ್)
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ