ಬಾಲ್ಯ ಕಾಲದಲ್ಲಿ ಬಡತನವನ್ನು ಅನುಭವಿಸುವ ಮಕ್ಕಳು ಉಳಿದ ಮಕ್ಕಳಿಗಿಂತ ಧೈರ್ಯವಂತ ಹಾಗೂ ಜೀವನದಲ್ಲಿ ಬಂದೆರಗುವ ಸವಾಲನ್ನು ಎದುರಿಸಲು ಶಕ್ತವಾಗಿರುತ್ತಾರೆ.
ಹಾಗಾಗಿ, ಬಡತನದ ಬಗ್ಗೆ ಮಕ್ಕಳಲ್ಲಿ ಹತಾಶೆ ಮೂಡಿಸುವ ಬದಲಾಗಿ ಮಕ್ಕಳಲ್ಲಿ ಆತ್ಮವಿಶ್ವಾಸವನ್ನು ತುಂಬುವ ಕೆಲಸವನ್ನು ಪೋಷಕರು ಮಾಡಬೇಕು ಎಂದು ಖ್ಯಾತ ತರಬೇತುದಾರ ಹಾಗೂ ಭಾಷಣಕಾರ ರಫೀಕ್ ಮಾಸ್ಟರ್ ಆತೂರು ಅವರು ಹೇಳಿದರು.


ಅವರು ತಾಜುಲ್ ಉಲಮಾ ರಿಲೀಫ್ ಎಂಡ್ ಚಾರಿಟೇಬಲ್ ಟ್ರಸ್ಟ್ (ರಿ) ದಕ ವತಿಯಿಂದ ಬಂಟ್ವಾಳ ಲಯನ್ಸ್ ಭವನದಲ್ಲಿ ನಡೆದ, ಶಾಲಾ ಮಕ್ಕಳಿಗೆ ಪುಸ್ತಕ ವಿತರಣೆ ಹಾಗೂ ಶೈಕ್ಷಣಿಕ ಮಾಹಿತಿ ಕಾರ್ಯಗಾರದಲ್ಲಿ ಮಾತನಾಡಿದರು.
ಕುಲಾಲ್ ಜುಮಾ ಮಸ್ಜಿದ್ ಖತೀಬರಾದ ಮಸೂದ್ ಸಅದಿ, ಪ್ರಾರ್ಥನೆ ಹಾಗೂ ಆಶೀರ್ವಚನ ನೀಡಿದರು.
ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಪಡೆದು ವಿದ್ಯಾರ್ಥಿಗಳನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು.
ವೇದಿಕೆಯಲ್ಲಿ ಮುನೀರ್ ಸಖಾಫಿ ಉಳ್ಳಾಲ, ಅಬ್ದುಲ್ ರಶೀದ್ ಮುಸ್ಲಿಯಾರ್, ಮ್ಯಾನೇಜರ್ ಅಲ್ ಮದೀನಾ ಮಂಜನಾಡಿ, ಶರೀಫ್ ಮದನಿ ಪಾಂಡವರಕಲ್ಲು, ಅಕ್ಷಯ ಚಾರಿಟೇಬಲ್ ಟ್ರಸ್ಟ್ ನ ಕರೀಮ್ ಕದ್ಕಾರ್, ತಾಜುಲ್ ಉಲಮಾ ರಿಲೀಫ್ ಅಧ್ಯಕ್ಷ ಮುಹಮ್ಮದ್ ಇಕ್ಬಾಲ್ ವಗ್ಗ, ಮುಹಮ್ಮದ್ ಕುಂಞಿ ಜೋಗಿಬೆಟ್ಟು, ಎಸ್ಡಿಎಂಸಿ ಸಮನ್ವಯ ಸಮಿತಿಯ ಮೊಯ್ದೀನ್ ಪೆರ್ನೆ, ಇಲ್ಯಾಸ್ ಕುಲಾಲ್ ಮತ್ತಿತರರು ಉಪಸ್ಥಿತರಿದ್ದರು.
ಟ್ರಸ್ಟ್ ಕಾರ್ಯದರ್ಶಿ ರಾಝಿಕ್ ಬಿಎಮ್ ಸ್ವಾಗತಿಸಿದರು.ಕರೀಮ್ ಕದ್ಕಾರ್ ಧನ್ಯವಾದ ಅರ್ಪಿಸಿದರು.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ