ಬೆಂಗಳೂರು: ಸುಧೀರ್ ಕುಮಾರ್ ರೆಡ್ಡಿ ಅವರನ್ನು ಮಂಗಳೂರು ನಗರದ ನೂತನ ಪೊಲೀಸ್ ಕಮಿಷನರ್ ಆಗಿ ನೇಮಕ ಮಾಡಿ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಮಂಗಳೂರು ನಗರ ಪೊಲೀಸ್ ಕಮಿಷನರ್ ಆಗಿದ್ದ ಅನುಪಮ್ ಅಗರ್ವಾಲ್ ಅವರನ್ನು ಸಿಐಡಿಯ ಆರ್ಥಿಕ ಅಪರಾಧ ವಿಭಾಗಕ್ಕೆ ವರ್ಗಾವಣೆ ಮಾಡಲಾಗಿದೆ.
ಮಂಗಳೂರು ನಗರ ಪೊಲೀಸ್ ಕಮಿಷನರ್ ಮಾತ್ರವಲ್ಲದೇ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರನ್ನೂ ಕೂಡ ವರ್ಗಾವಣೆ ಮಾಡಲಾಗಿದೆ. ಯತೀಶ್ ಅವರ ಸ್ಥಾನಕ್ಕೆ ಅರುಣ್ ಕೆ ಅವರನ್ನು ನೇಮಕಗೊಳಿಸಿ ಆದೇಶ ಹೊರಡಿಸಿದೆ. ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದ ಡಾ. ಯತೀಶ್ ಅವರನ್ನು ವರ್ಗಾವಣೆ ಮಾಡಲಾಗಿದ್ದರೂ, ಸ್ಥಾನ ನಿಗದಿಪಡಿಸಿಲಾಗಿಲ್ಲ.
ದಕ್ಷಿಣ ಕನ್ನಡಕ್ಕೆ ನೂತನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ವರ್ಗಾವಣೆ ಆಗಿರುವ ಡಾ. ಅರುಣ್ ಕೆ ಅವರು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಸೇವೆಯಲ್ಲಿದ್ದರು.ಅವರ ಸ್ಥಾನಕ್ಕೆ 2017ರ ಬ್ಯಾಚಿನ ಐಪಿಎಸ್ ಅಧಿಕಾರಿ ಹರಿರಾಮ್ ಶಂಕರ್ ಅವರನ್ನು ನಿಯೋಜಿಸಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸರಣಿ ಕೊಲೆ, ದ್ವೇಷ ಭಾಷಣ, ಹತ್ಯೆ ಯತ್ನ ಪ್ರಕರಣಗಳು ಹೆಚ್ಚುತ್ತಿದ್ದು, ಹದಗೆಟ್ಟಿರುವ ಕಾನೂನು ಸುವ್ಯವಸ್ಥೆಯನ್ನು ಮರುಸ್ಥಾಪಿಸುವ ನಿಟ್ಟಿನಲ್ಲಿ ಹೊಸ ನೇಮಕ ನಡೆದಿದೆ ಎನ್ನಲಾಗಿದೆ.
















ಇನ್ನಷ್ಟು ಸುದ್ದಿಗಳು
ಅಂಜುಮಾನ್ ಸಿರಾಜುಲ್ ಇಸ್ಲಾಂ ಮದ್ರಸ ಮುಕ್ಕ- SBS ನೂತನ ಸಮಿತಿ ಅಸ್ತಿತ್ವಕ್ಕೆ
ರೆಸಿಡೆನ್ಸಿ ನಿಯಮ ತಿದ್ದುಪಡಿ- ವಿದೇಶಿಯರಿಗೆ ಇನ್ನು ಮುಂದೆ ಸ್ಪಾನ್ಸರ್ ರಹಿತವಾಗಿ ವೀಸಾ ಲಭ್ಯ
ಖತಾರ್ ಗ್ಯಾಸ್ ಪ್ಲಾಂಟ್ ಸ್ಫೋಟ: ಭಾರತೀಯರು ಸೇರಿದಂತೆ 13 ಮಂದಿ ಮೃತ್ಯು
ಸಮಸ್ತ ಶತಮಾನೋತ್ಸವ: ಕರ್ನಾಟಕ ರಾಜ್ಯ ಸ್ವಾಗತ ಸಮಿತಿ ಅಸ್ತಿತ್ವಕ್ಕೆ- ರಾಜ್ಯಾದ್ಯಂತ ಭವ್ಯ ಕಾರ್ಯಕ್ರಮಗಳ ರೂಪುರೇಷೆ
ಬೆಳಕು ಮತ್ತು ವಿಜ್ಞಾನದ ಅದ್ಭುತ ಸಂಗಮ: ಡಾ. ಮುಹಮ್ಮದ್ ರಾಫಿ ಚೆನ್ನಾರ್
ಕುಂಬ್ರದ ಇಂಡಿಯನ್ ಇವೆಂಟ್ಸ್ ಸಂಸ್ಥೆಗೆ ಸಿರಾಜುದ್ದೀನ್ ಖಾಸಿಮಿ ಉಸ್ತಾದ್ ಭೇಟಿ
ಖತಾರ್ನಲ್ಲಿ ಉದ್ಯೋಗಾವಕಾಶ: ಅಕೌಂಟಿಂಗ್, ಐಟಿ, ಎಂಜಿನಿಯರಿಂಗ್ ಕ್ಷೇತ್ರಗಳಲ್ಲಿ ಭಾರಿ ಬೇಡಿಕೆ
‘ಮೆಟ್ರಾಶ್’ ವರ್ಕ್ ವೀಸಾಕ್ಕೆ ಅರ್ಜಿ ಸಲ್ಲಿಸಲು ಸುಲಭ ವಿಧಾನ- ಕತಾರ್ ಆಂತರಿಕ ಸಚಿವಾಲಯ
DKSC ಮಕ್ಕತುಲ್ ಮುಕರ್ರಮ ವಲಯ ಸಮಿತಿ: ನೂತನ ಅಧ್ಯಕ್ಷರಾಗಿ ಮುಹಮ್ಮದ್ ಶರೀಫ್ ಮರವೂರು ಆಯ್ಕೆ
ದೆಹಲಿಯಲ್ಲಿ ನವಜಾತ ಶಿಶುಗಳನ್ನು ಮಾರುವ ‘ಮಕ್ಕಳ’ ಮಾರುಕಟ್ಟೆ: ಬೃಹತ್ ಮಾಫಿಯಾ ಪತ್ತೆ