ಮಂಗಳೂರು :- ಇಂದು ಮುಂಜಾನೆ ತೀವ್ರ ಮಳೆ ಸಂದರ್ಭದಲ್ಲಿ ದೇರಳಕಟ್ಟೆ ಕಾನಕೆರೆಯಲ್ಲಿ ಮನೆಯ ಸಮೀಪದ ಆವರಣ ಗೋಡೆ ಕುಸಿದು ಮಗು ಅಸುನೀಗಿದ ಮನೆಗೆ ಸುನ್ನಿ ಸಂಘ ಕುಟುಂಬದ ನಾಯಕರು ಭೇಟಿ ನೀಡಿ ದುಆ ನೆರವೇರಿಸಿದರು.
ಉಳ್ಳಾಲ ತಾಲೂಕಿನ ಬೆಳ್ಮ ಗ್ರಾಮದ ಕಾನಕರೆಯಲ್ಲಿರುವ ನೌಶಾದ್ ಅವರ ಮನೆಗೆ ಹಿಂಬದಿಯ ಗುಡ್ಡೆ, ತಡೆಗೋಡೆ ಕುಸಿದು ಬಿದ್ದು ನೌಶಾದ್ ರ ಪುತ್ರಿ ಫಾತಿಮ ನಈಮ (10) ರವರು ನಿಧನರಾಗಿದ್ದರು.
ರಾಜ್ಯ ವಕ್ಫ್ ಕೌನ್ಸಿಲ್ ಉಪಾಧ್ಯಕ್ಷರಾದ ಮೌಲಾನ ಶಾಫಿ ಸ ಅದಿ, ರಾಜ್ಯ ನಾಯಕರಾದ ಎಮ್ ಎಸ್ ಎಂ ಝೈನೀ ಕಾಮಿಲ್ ಸಖಾಫಿ , ವಕ್ಫ್ ದ ಕ ಜಿಲ್ಲಾ ಅಧ್ಯಕ್ಷ ಬಿ ಎ ಅಬ್ದುಲ್ ನಾಸಿರ್ ಲಕ್ಕಿಸ್ಟಾರ್, ಉಡುಪಿ ಜಿಲ್ಲಾಧ್ಯಕ್ಷ ಸಿ ಹೆಚ್ ಅಬ್ದುಲ್ ಮುತ್ತಲಿಬ್ ವಂಡ್ಸೆ ,ಎಸ್ ವೈಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ ಎಂ ಸಿದ್ದೀಖ್ ಮೋಂಟುಗೋಳಿ, ಕೋಶಾಧಿಕಾರಿ ಮನ್ಸೂರ್ ಕೋಟುಗದ್ದೆ, ಕರ್ನಾಟಕ ಮುಸ್ಲಿಂ ಜಮಾಅತ್ ರಾಜ್ಯ ನಾಯಕರಾದ ಅಶ್ರಫ್ ಸಅದಿ ಮಲ್ಲೂರು, ಅಶ್ರಫ್ ಕಿನಾರ ಮಂಗಳೂರು, ಎಸ್ ವೈ ಎಸ್ ನಾಯಕರಾದ ಅಡ್ವಕೇಟ್ ಹಂಝತ್ ,ಅಬ್ದುರ್ರಹ್ಮಾನ್ ರಝ್ವಿ ಕಲ್ಕಟ್ಟ , ಇಸ್ಹಾಕ್ ಝುಹ್ರಿ, ಹಸೈನಾರ್ ಆನೆಮಹಲ್, ಇಸ್ಮಾಯಿಲ್ ಮಾಸ್ಟರ್ ಮಂಜನಾಡಿ, ಅಬ್ದುರ್ರಹ್ಮಾನ್ ಮೊಗರ್ಪಣೆ, ಸೈದುದ್ದೀನ್ , ರಝಾಖ್ ಭಾರತ್ ಉಪಸ್ಥಿತರಿದ್ದರು.

















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ