ಉಳ್ಳಾಲ, ಜೂ.4 : ದೇರಳಕಟ್ಟೆಯ ನಾಟೆಕಲ್ಲಿನ ಕಣಚೂರು ಆಸ್ಪತ್ರೆ ಹಾಗೂ ವೈದ್ಯಕೀಯ ಕಾಲೇಜನ್ನು ಇಂದು ಬೆಳಗ್ಗೆ 11 ಗಂಟೆಗೆ ಬಾಂಬ್ ಇಟ್ಟು ಸ್ಪೋಟಿಸುವುದಾಗಿ ಅನಾಮಧೇಯ ಫೋನ್ ಕರೆ ಬಂದಿದ್ದು, ಈ ಬಗ್ಗೆ ಆಸ್ಪತ್ರೆ ಅಧಿಕಾರಿಗಳ ಮಾಹಿತಿಯಂತೆ ಪೊಲೀಸರು ಧಾವಿಸಿದ್ದಾರೆ. ಬಾಂಬ್ ನಿಷ್ಕ್ರಿಯ ದಳ ಮತ್ತು ಶ್ವಾನ ದಳವನ್ನ ಕರೆಸಿ ಆಸ್ಪತ್ರೆ ಹಾಗೂ ಮೆಡಿಕಲ್ ಕಾಲೇಜು ಕ್ಯಾಂಪಸನ್ನ ಸಂಪೂರ್ಣ ತಪಾಸಣೆ ನಡೆಸಿದ್ದಾರೆ. ಕೊನೆಗೆ, ಇದೊಂದು ಹುಸಿ ಬಾಂಬ್ ಕರೆ ಎಂದು ಪೊಲೀಸರು ತಿಳಿಸಿದ್ದಾರೆ.
ಇಂದು ಬೆಳಗ್ಗೆ 8.15ರ ಹೊತ್ತಿಗೆ ಆಸ್ಪತ್ರೆಯ ಹೆರಿಗೆ ವಿಭಾಗದ ಸ್ಥಿರ ದೂರವಾಣಿಗೆ ಕರೆಯೊಂದು ಬಂದಿದೆ. ಪಿಜಿ ವಿದ್ಯಾರ್ಥಿನಿಯೋರ್ವಳು ಕರೆಯನ್ನ ಸ್ವೀಕರಿಸಿದ್ದು ಇಂಗ್ಲೀಷಲ್ಲಿ ಮಾತನಾಡಿದ ವ್ಯಕ್ತಿಯೋರ್ವ ಬೆಳಗ್ಗೆ 11 ಗಂಟೆಗೆ ಆಸ್ಪತ್ರೆ ಹಾಗೂ ಮೆಡಿಕಲ್ ಕಾಲೇಜಲ್ಲಿ ಬಾಂಬ್ ಸ್ಪೋಟಿಸುವುದಾಗಿ ಹೇಳಿದ್ದು ಎಲ್ಲರನ್ನು ಕೂಡಲೇ ಆಸ್ಪತ್ರೆಯಿಂದ ಹೊರಗೆ ಕಳುಹಿಸುವಂತೆ ಬೆದರಿಕೆ ಹಾಕಿದ್ದಾನೆ.
ಆನಂತರವೂ ನಾಲೈದು ಬಾರಿ ಕರೆ ಬಂದಿದ್ದು, ಉಳ್ಳಾಲ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕರೆ ಬಂದ ನಂಬರ್ ಗಳನ್ನು ಪರಿಶೀಲಿಸಿ ಆರೋಪಿಗಳನ್ನು ಶೀಘ್ರದಲ್ಲಿ ಪತ್ತೆ ಹಚ್ಚುವುದಾಗಿ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ
ಮಾದರಿ ಮದುವೆ ಅಭಿಯಾನದ ಸಮಾರೋಪ ಪ್ರಚಾರ; ಎ.28, 29 ರಂದು ವಾಹನ ಸಂದೇಶ ಜಾಥಾ
ಮುಂಬೈಯನ್ನು ನಡುಗಿಸಿದ ಘಟನೆ: ಬಿರಿಯಾನಿ ಮತ್ತು ಕಲ್ಲಂಗಡಿ ತಿಂದ ಕುಟುಂಬ ಬೆಳಗಾಗುವಷ್ಟರಲ್ಲಿ ಅಂತ್ಯ
‘ಮಾದರಿ ಮದುವೆ ಅಭಿಯಾನ’ ಸಮಾರೋಪ ಸಮಾರಂಭ – ಎಸ್ವೈಎಸ್ ಬಂಟ್ವಾಳ ಝೋನ್ ಯಶಸ್ವಿಗೆ ಕರೆ