ಬೆಳ್ತಂಗಡಿ : ಜೂನ್ 7 ರಂದು ರಿಫಾಯಿಯ್ಯ ಜುಮಾ ಮಸ್ಜಿದ್ ಬೆದ್ರಬೆಟ್ಟು ವಿನಲ್ಲಿ ವಿಶೇಷ ಪ್ರಾರ್ಥನೆ ಹಾಗೂ ಸೌಹಾರ್ದ ಸಂದೇಶ ಭಾಷಣದೊಂದಿಗೆ ಬಕ್ರೀದ್ ಹಬ್ಬ ಆಚರಣೆ ಮಾಡಲಾಯಿತು.
ಸಂದೇಶ ಭಾಷಣ ಮಾಡಿದ ಖತೀಬ್ ಉಸ್ತಾದ್ ಅಬೂ ರಬೀಹ್ ಶರೀಫ್ ಸಖಾಫಿ ಉಜಿರ್ಬೆಟ್ಟು ಸರ್ವ ಧರ್ಮೀಯರಲ್ಲಿ ಸ್ನೇಹ ಸಹಬಾಳ್ವೆಯ ಜೀವನದ ನಡೆಸುವುದು ಕಾಲದ ಬೇಡಿಕೆ.ಪವಿತ್ರ ಇಸ್ಲಾಂ ಧರ್ಮ ಯಾವತ್ತೂ ಸೌಹಾರ್ದತೆ , ಸ್ನೇಹ , ಐಕ್ಯತೆಗೆ ಪ್ರಾಧಾನ್ಯತೆ ನೀಡಿದೆ.ಇತರ ಯಾವುದೇ ಧರ್ಮೀಯರ ಮನಸ್ಸು ನೋಯಿಸುವ ಯಾವುದೇ ರೀತಿಯ ತಪ್ಪು ಸಂದೇಶದಿಂದ ಯುವಕರು ದೂರವಿರಬೇಕು ಎಂದು ನುಡಿದರು.
ಬೆದ್ರಬೆಟ್ಟು ಮಸ್ಜಿದ್ ಆಡಳಿತ ಸಮಿತಿ ಅಧ್ಯಕ್ಷರು ಬಿ.ಸಲೀಂ , ಗೌರವಾಧ್ಯಕ್ಷರು ಹಸನಬ್ಬ , ಪ್ರಧಾನ ಕಾರ್ಯದರ್ಶಿ ಮುಸ್ತಫಾ ಮಾಸ್ಟರ್, ಕೋಶಾಧಿಕಾರಿ ಅಬ್ದುಲ್ ಮಜೀದ್, ಜೊತೆ ಕಾರ್ಯದರ್ಶಿ ಸಿರಾಜುದ್ದೀನ್ , ಸಮಿತಿ ಸದಸ್ಯರು , ಊರಿನ ಉಲಮಾ ಉಮರಾ ನಾಯಕರು, ಹಿರಿಯರು, ಯುವಕರು, ಕಿರಿಯರು ಭಾಗಿಯಾದರು.ಸುನ್ನೀ ಬಾಲ ಸಂಘ SBS ವಿದ್ಯಾರ್ಥಿಗಳು ಈದ್ ಶುಭಾಷಯ ಕಾರ್ಡನ್ನು ಚೋಕ್ ಲೇಟ್ ನೊಂದಿಗೆ ಎಲ್ಲರಿಗೂ ಹಂಚಿ ವಿಶೇಷ ರೀತಿಯ ಬಕ್ರೀದ್ ಹಬ್ಬ ಆಚರಣೆಯಲ್ಲಿ ಭಾಗಿಯಾದರು.
















ಇನ್ನಷ್ಟು ಸುದ್ದಿಗಳು
ಡಿ.12: ಮದಕದಲ್ಲಿ ಜಲಾಲಿಯ್ಯಾ ರಾತೀಬ್ 8ನೇ ವಾರ್ಷಿಕ ಮಜ್ಲಿಸ್
ಬಜಗೋಳಿಯಲ್ಲಿ ಸಂಭ್ರಮದ ಮೀಲಾದುನ್ನಬಿ ಕಾರ್ಯಕ್ರಮ
ಇರಾಕ್ ಕೆಸಿಎಫ್ ಪ್ರಧಾನ ಕಾರ್ಯದರ್ಶಿ ಹಸೈನಾರ್ ಕಿನ್ಯ ಅವರಿಗೆ ಊರ ಸುನ್ನೀ ಸಂಘ ಕುಟುಂಬದ ಗೌರವಾರ್ಪಣೆ
ಕಿನ್ಯಾ: ಮೀಂಪ್ರಿ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ
ಉಳ್ತೂರು ; ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ
ಬೊಳ್ಳಾಯಿ: SBS ವಿದ್ಯಾರ್ಥಿ ಒಕ್ಕೂಟದ ನೂತನ ಸಮಿತಿ ಅಸ್ತಿತ್ವಕ್ಕೆ
ಕಬಕ: ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಶಾಲೆಗೆ ಬಹುಮಾನ ವಿತರಣೆ
‘ಹಫ್ವಾ’ ಅಧ್ಯಕ್ಷರಾಗಿ ಸತತ 3ನೇ ಬಾರಿ ಮುಹಮ್ಮದ್ ಕುಂಞಿ ಜೋಗಿಬೆಟ್ಟು ಆಯ್ಕೆ
ಅಂಜುಮಾನ್ ಸಿರಾಜುಲ್ ಇಸ್ಲಾಂ ಮದ್ರಸ ಮುಕ್ಕ- SBS ನೂತನ ಸಮಿತಿ ಅಸ್ತಿತ್ವಕ್ಕೆ