ಮಂಗಳೂರು: ಮುಖ್ಯಮಂತ್ರಿ ಮತ್ತು ಸ್ಪೀಕರನ್ನು ಅವಹೇಳಿಸಲಾಗಿದೆ ಎಂದು ಆರೋಪಿಸಿ, ಸಮಾಜ ಸೇವಕ, ಸುನ್ನೀ ಸಂಘಟಕ, ದ. ಕ. ಜಿಲ್ಲಾ ವಖ್ಫ್ ಸಲಹಾ ಸಮಿತಿ ಉಪಾಧ್ಯಕ್ಷ ಅಶ್ರಫ್ ಕಿನಾರಾ ಅವರ ಮೇಲೆ ಕೇಸು ದಾಖಲಿಸಿರುವುದನ್ನು ಎಸ್ ವೈ ಎಸ್ ದಕ ಜಿಲ್ಲಾ ವೆಸ್ಟ್ ಸಮಿತಿ ತೀವ್ರವಾಗಿ ಖಂಡಿಸಿದೆ.
ಅಭಿಪ್ರಾಯ ಸ್ವಾತಂತ್ರ್ಯ ಪ್ರತಿಯೊಬ್ಬ ನಾಗರಿಕನ ಸಂವಿಧಾನಬದ್ಧ ಮೂಲಭೂತ ಹಕ್ಕು. ಆಡಳಿತಗಾರರ ತಪ್ಪುಗಳನ್ನು ಟೀಕಿಸಬೇಕಾದುದು ಜವಾಬ್ದಾರಿಯುತ ನಾಗರಿಕರ ಕರ್ತವ್ಯ. ಮುಸ್ಲಿಮರ ಪವಿತ್ರ ಹಬ್ಬವಾದ ಬಕ್ರೀದ್ ದಿನ ಬಲಿದಾನಕ್ಕೆ ಸಂಬಂಧಿಸಿದಂತೆ ಪೊಲೀಸರು ನಡೆದುಕೊಂಡ ರೀತಿ ಮತ್ತು ಸರಕಾರದ ಅನಾಸ್ಥೆಯನ್ನು ಪ್ರಶ್ನಿಸುವ ವಾಟ್ಸಪ್ ಸಂದೇಶವನ್ನು ಅವರು ಹಂಚಿಕೊಂಡಿದ್ದಾರೆ. ಅದರಲ್ಲಿ ಮುಖ್ಯಮಂತ್ರಿಗಳನ್ನೋ, ವಿಧಾನ ಸಭಾಧ್ಯಕ್ಷರನ್ನೋ ಉಲ್ಲೇಖಿಸಿಲ್ಲ. ಆದಾಗ್ಯೂ ಮುಖ್ಯಮಂತ್ರಿ ಮತ್ತು ಸ್ಪೀಕರ್ ಅವರನ್ನು ಅವಹೇಳಿಸಿದ ಆರೋಪ ಹೊರಿಸಲಾಗಿದೆ. ಇದರ ಹಿಂದೆ ಯಾವುದೋ ಷಡ್ಯಂತ್ರಗಳಿದ್ದು, ಈ ಬಗ್ಗೆ ಪೊಲೀಸ್ ಅಧಿಕಾರಿಗಳು ಕೂಲಂಕುಷ ತನಿಖೆ ನಡೆಸಿ ಸತ್ಯಾವಸ್ಥೆಯನ್ನು ಹೊರತರಬೇಕು ಎಂದು ಎಸ್ ವೈ ಎಸ್ ದಕ ಜಿಲ್ಲಾ ಸಮಿತಿ ಆಗ್ರಹಿಸಿದೆ.
ಉಲಮಾ ಕೋರ್ಡಿನೇಷನ್ ಅಧೀನದಲ್ಲಿ ನಡೆದ ವಕ್ಫ್ ತಿದ್ದುಪಡಿ ಮಸೂದೆ ವಿರುದ್ಧ ಪ್ರತಿಭಟನಾ ಸಮ್ಮೇಳನದ ಸಂಚಾಲಕ ಸೇರಿದಂತೆ ವಿವಿಧ ಸಮಾಜ ಸೇವಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಅಶ್ರಫ್ ಕಿನಾರ ಅವರು ಬಡವರು, ರೋಗಿಗಳು, ಅಪಘಾತಕ್ಕೀಡಾದವರು ಸೇರಿದಂತೆ ನೊಂದವರ ಪರವಾಗಿ ರಾತ್ರಿ ಹಗಲೆನ್ನದೆ ದುಡಿಯುವವರಾಗಿದ್ದಾರೆ.
ಅಂತಹವರ ಮೇಲೆ ಕ್ಷುಲ್ಲಕ ಆರೋಪ ಹೊರಿಸಿ ದುರ್ಬಲಗೊಳಿಸುವುದು ಸರಿಯಲ್ಲ. ಬಹಿರಂಗ ವೇದಿಕೆಗಳಲ್ಲಿ ಮತ ವಿಭಾಗಗಳನ್ನು ಪರಸ್ಪರ ಎತ್ತಿ ಕಟ್ಟುವಂತೆ ಉದ್ರೇಕಕಾರಿ ಭಾಷಣ ಮಾಡಿದವರನ್ನು ಬಂಧಿಸಲು ಆಸಕ್ತಿ ತೋರದ ಪೊಲೀಸರು, ವಾಟ್ಸಪ್ ಸಂದೇಶ ಒಂದರ ಹಿಂದೆ ಬಿದ್ದು ಕೇಸು ದಾಖಲಿಸಿರುವುದು ಹಾಸ್ಯಾಸ್ಪದ.
ತಕ್ಷಣ ಅವರ ಮೇಲಿನ ಕೇಸ್ ವಾಪಾಸ್ ಪಡೆಯ ಬೇಕೆಂದು ಎಸ್ ವೈ ಎಸ್ ದಕ ಜಿಲ್ಲಾ ವೆಸ್ಟ್ ಸಮಿತಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ