ಪುತ್ತೂರು : ಪ್ರಜಾಪ್ರಭುತ್ವ ದೇಶದಲ್ಲಿ ಜನರಿಗೆ ತಮ್ಮ ಅಭಿಪ್ರಾಯಗಳನ್ನು ಮಂಡಿಸಲು ಮುಕ್ತ ಅವಕಾಶ ಇದ್ದು, ಸಾಮಾಜಿಕ ಜಾಲ ತಾಣ ವಾಟ್ಸಾಪ್ ನಲ್ಲಿ ಬಂದ ಸಂದೇಶವನ್ನು ಇನ್ನೊಂದು ವಾಟ್ಸಾಪ್ ಗ್ರೂಪ್ ಗೆ ರವಾನಿಸಿದ್ದಾರೆ ಎನ್ನುವ ಕಾರಣಕ್ಕಾಗಿ, ಕರ್ನಾಟಕ ಮುಸ್ಲಿಂ ಜಮಾಅತ್ ರಾಜ್ಯ ಕಾರ್ಯದರ್ಶಿ, ಸಾಮಾಜಿಕ ಕಾರ್ಯಕರ್ತ ಅಶ್ರಫ್ ಕಿನಾರ ರವರ ಮೇಲೆ ಮೊಕದ್ದಮೆ ಹಾಕಿದ್ದನ್ನು ಕರ್ನಾಟಕ ಮುಸ್ಲಿಂ ಜಮಾಅತ್ ದಕ್ಷಿಣ ಕನ್ನಡ ಈಸ್ಟ್ ಜಿಲ್ಲಾ ಸಮಿತಿ ತೀವ್ರವಾಗಿ ಖಂಡಿಸಿದೆ.
ಸಮುದಾಯಕ್ಕೆ ಅನ್ಯಾಯವಾದಾಗ ಸರಕಾರದ ನಡೆಯನ್ನು ವಿವಿಧ ರೀತಿಯಲ್ಲಿ ಟೀಕಿಸಿ , ವಿರೋಧ ವ್ಯಕ್ತಪಡಿಸುವುದು ಪ್ರಜಾಪ್ರಭುತ್ವದಲ್ಲಿ ಸಾಮಾನ್ಯವಾದ ಸಂಗತಿಯಾಗಿದೆ. ಇದಕ್ಕಾಗಿ ರವಾನಿಸಿದ ವಾಟ್ಸಾಪ್ ಸಂದೇಶವನ್ನು ನೆಪವಾಗಿ ಅಶ್ರಫ್ ಕಿನಾರ ಮೇಲೆ ಮೊಕದ್ದಮೆ ಹಾಕಿದ್ದು ಅತ್ಯಂತ ಖಂಡನೀಯ ಹಾಗೂ ಜನರ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕುವ ಪ್ರಯತ್ನವಾಗಿದೆ. ಆದ್ದರಿಂದ ರಾಜ್ಯ ಸರ್ಕಾರವು ಜನರ ಹಕ್ಕುಗಳನ್ನು ಕಾಪಾಡಬೇಕೇ ಹೊರತು, ಜನರನ್ನು ಧಮನಿಸುವ ಹಾಗೂ ಕಾನೂನಿನ ಮೂಲಕ ಹೆದರಿಸುವ ಪ್ರಕ್ರಿಯೆಯನ್ನು ಬಿಡಬೇಕು ಎಂದು ಕರ್ನಾಟಕ ಮುಸ್ಲಿಂ ಜಮಾಅತ್ ದಕ್ಷಿಣ ಕನ್ನಡ ಈಸ್ಟ್ ಜಿಲ್ಲಾ ಸಮಿತಿಯು ರಾಜ್ಯ ಸರ್ಕಾರಕ್ಕೆ ಅಗ್ರಹಿಸುತ್ತಿದೆ.
















ಇನ್ನಷ್ಟು ಸುದ್ದಿಗಳು
ಅಂಜುಮಾನ್ ಸಿರಾಜುಲ್ ಇಸ್ಲಾಂ ಮದ್ರಸ ಮುಕ್ಕ- SBS ನೂತನ ಸಮಿತಿ ಅಸ್ತಿತ್ವಕ್ಕೆ
ರೆಸಿಡೆನ್ಸಿ ನಿಯಮ ತಿದ್ದುಪಡಿ- ವಿದೇಶಿಯರಿಗೆ ಇನ್ನು ಮುಂದೆ ಸ್ಪಾನ್ಸರ್ ರಹಿತವಾಗಿ ವೀಸಾ ಲಭ್ಯ
ಖತಾರ್ ಗ್ಯಾಸ್ ಪ್ಲಾಂಟ್ ಸ್ಫೋಟ: ಭಾರತೀಯರು ಸೇರಿದಂತೆ 13 ಮಂದಿ ಮೃತ್ಯು
ಸಮಸ್ತ ಶತಮಾನೋತ್ಸವ: ಕರ್ನಾಟಕ ರಾಜ್ಯ ಸ್ವಾಗತ ಸಮಿತಿ ಅಸ್ತಿತ್ವಕ್ಕೆ- ರಾಜ್ಯಾದ್ಯಂತ ಭವ್ಯ ಕಾರ್ಯಕ್ರಮಗಳ ರೂಪುರೇಷೆ
ಬೆಳಕು ಮತ್ತು ವಿಜ್ಞಾನದ ಅದ್ಭುತ ಸಂಗಮ: ಡಾ. ಮುಹಮ್ಮದ್ ರಾಫಿ ಚೆನ್ನಾರ್
ಕುಂಬ್ರದ ಇಂಡಿಯನ್ ಇವೆಂಟ್ಸ್ ಸಂಸ್ಥೆಗೆ ಸಿರಾಜುದ್ದೀನ್ ಖಾಸಿಮಿ ಉಸ್ತಾದ್ ಭೇಟಿ
ಖತಾರ್ನಲ್ಲಿ ಉದ್ಯೋಗಾವಕಾಶ: ಅಕೌಂಟಿಂಗ್, ಐಟಿ, ಎಂಜಿನಿಯರಿಂಗ್ ಕ್ಷೇತ್ರಗಳಲ್ಲಿ ಭಾರಿ ಬೇಡಿಕೆ
‘ಮೆಟ್ರಾಶ್’ ವರ್ಕ್ ವೀಸಾಕ್ಕೆ ಅರ್ಜಿ ಸಲ್ಲಿಸಲು ಸುಲಭ ವಿಧಾನ- ಕತಾರ್ ಆಂತರಿಕ ಸಚಿವಾಲಯ
DKSC ಮಕ್ಕತುಲ್ ಮುಕರ್ರಮ ವಲಯ ಸಮಿತಿ: ನೂತನ ಅಧ್ಯಕ್ಷರಾಗಿ ಮುಹಮ್ಮದ್ ಶರೀಫ್ ಮರವೂರು ಆಯ್ಕೆ
ದೆಹಲಿಯಲ್ಲಿ ನವಜಾತ ಶಿಶುಗಳನ್ನು ಮಾರುವ ‘ಮಕ್ಕಳ’ ಮಾರುಕಟ್ಟೆ: ಬೃಹತ್ ಮಾಫಿಯಾ ಪತ್ತೆ