ಮಂಗಳೂರು,ಜೂ.10: ಸಂಘಟನಾ ರಂಗದಲ್ಲಿ ಕಾರ್ಯಾಚರಿಸುತ್ತಿರುವ ಸಂದರ್ಭದಲ್ಲಿ ಅದರ ನಾಯಕತ್ವ ಸ್ಥಾನ ಲಭಿಸಬೇಕೆಂಬ ಆಗ್ರಹ ಸಲ್ಲದು. ಅದು ತಾನಾಗಿಯೇ ಅದಕ್ಕೆ ಅರ್ಹರಾದವರ ಕೈಗೆ ಲಭಿಸುವಂತಾಗಬೇಕು. ಅಂತಹ ನಾಯಕರಿಗೆ ಅಲ್ಲಾಹನ ಕಡೆಯಿಂದ ಸಹಾಯ ಲಭಿಸಲಿದೆ ಎಂದು ಕರ್ನಾಟಕ ಸುನ್ನೀ ಜಂಇಯ್ಯತುಲ್ ಉಲಮಾ ಪ್ರ.ಕಾರ್ಯದರ್ಶಿ ಕೆ.ಪಿ.ಹುಸೈನ್ ಸಅದಿ ಕೆ.ಸಿ.ರೋಡ್ ಹೇಳಿದರು.
ಅವರು, ಇಂದು ಅಡ್ಯಾರ್ ಕಣ್ಣೂರಿನಲ್ಲಿರುವ ಮರ್ಕಝುಲ್ ಇಸ್ಲಾಮಿ ಸಭಾಂಗಣದಲ್ಲಿ ನಡೆದ ಕರ್ನಾಟಕ ಕಲ್ಚರಲ್ ಫೌಂಡೇಶನ್ ಕೆಸಿಎಫ್ ಇದರ ಪ್ರಪಂಚದಾದ್ಯಂತದ ಪ್ರತಿನಿಧಿಗಳನ್ನು ಒಂದುಗೂಡಿಸುವ ‘ಗ್ಲೋಬಲ್ ಮೀಟ್’ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು.
ಸಂಘಟನಾ ರಂಗದ ಕಾರ್ಯಾಚರಣೆ ಅಲ್ಲಾಹನ ತೃಪ್ತಿಗೋಸ್ಕರ ಆಗಿರಬೇಕು. ಯಾವುದೇ ಸ್ಥಾನಮಾನದ ಮೋಹದಿಂದ ಕೂಡಿರಬಾರದು ಎಂದು ಅವರು ಸಲಹೆ ನೀಡಿದರು.
ಕೆಸಿಎಫ್ ಅಂತಾರಾಷ್ಟ್ರೀಯ ಸಮಿತಿಯ ಕೋಶಾಧಿಕಾರಿ ರೈಸ್ಕೊ ಅಬೂಬಕರ್ ಹಾಜಿ ಅವರ ಘನ ಅಧ್ಯಕ್ಷತೆಯಲ್ಲಿ IC ಸಂಘಟನಾ ಇಲಾಖೆಯ ನಾಯಕರಾದ ಸಯ್ಯಿದ್ ಆಬಿದ್ ತಂಙಳ್ ಅವರ ದುಆದೊಂದಿಗೆ ಆರಂಭಿಸಿದ ಸಭೆಯನ್ನು ಖಾಝಿ ಮಾಣಿ ಉಸ್ತಾದರ ಅನುಪಸ್ಥಿತಿಯಲ್ಲಿ ಜಿ.ಎಂ.ಕಾಮಿಲ್ ಸಖಾಫಿ ಉಸ್ತಾದರು ಉದ್ಘಾಟಿಸಿದರು. ಕಾವಳಕಟ್ಟೆ ಹಝ್ರತ್ ಮಹ್ಲರತುಲ್ ಬದ್ರಿಯ್ಯಾ ಗೆ ನೇತೃತ್ವ ನೀಡಿದರು. ಡಾ.ಎಮ್ಮೆಸ್ಸೆಂ ಝೈನಿ ಕಾಮಿಲ್ ಸಖಾಫಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಕೆಸಿಎಫ್ ಸೌದಿ ಅರೇಬಿಯಾದ ನಾಯಕರಾದ ಎನ್ ಎಸ್ ಅಬ್ದುಲ್ಲಾಹ್ ಹಾಜಿ, ನಝೀರ್ ಹಾಜಿ ಕಾಶಿಪಟ್ನ ಮುಂತಾದ ನಾಯಕರು ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ, ಕೆಸಿಎಫ್ ಸೌದಿ ಅರೇಬಿಯಾದ ಇತ್ತೀಚೆಗೆ ನಿಧನ ಹೊಂದಿದ MRF ಸದಸ್ಯರೊಬ್ಬರ ಕುಟುಂಬಕ್ಕೆ ಆರ್ಥಿಕ ಸಹಾಯಧನದ ಚೆಕ್ ನ್ನು ಹಸ್ತಾಂತರಿಸಲಾಯಿತು. ಗಲ್ಫ್ ರಾಷ್ಟ್ರಗಳು ಸೇರಿದಂತೆ ಹತ್ತು ವಿದೇಶ ರಾಷ್ಟ್ರಗಳಲ್ಲಿ ಇಂದು ಕೆಸಿಎಫ್ ಕಾರ್ಯಾಚರಿಸುತ್ತಿದ್ದು, ವಿವಿಧ ರಾಷ್ಟ್ರಗಳ ಪ್ರತಿನಿಧಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ, ಸಾಂದರ್ಭಿಕವಾಗಿ ಮಾತನಾಡಿದರು.
IC ಪ್ರ.ಕಾರ್ಯದರ್ಶಿ ಇಕ್ಬಾಲ್ ಬರಕ ಸ್ವಾಗತಿಸಿ, ಮುಹಮ್ಮದ್ ಕಲ್ಲರ್ಬೆ ಧನ್ಯವಾದ ಸಲ್ಲಿಸಿದರು. IC ಆಡಳಿತ ಮತ್ತು ಸಂಪರ್ಕ ಇಲಾಖೆ ನಾಯಕರಾದ ಹುಸೈನ್ ಮುಸ್ಲಿಯಾರ್ ಎಮ್ಮೆಮಾಡು ಕಾರ್ಯಕ್ರಮವನ್ನು ನಿರೂಪಿಸಿದರು.


















ಇನ್ನಷ್ಟು ಸುದ್ದಿಗಳು
ಹಿರಿಯ ಧಾರ್ಮಿಕ ವಿದ್ವಾಂಸರಾದ ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅಲ್ ಅಝ್ಹರಿ ವಫಾತ್
ಅಂಜುಮಾನ್ ಸಿರಾಜುಲ್ ಇಸ್ಲಾಂ ಮದ್ರಸ ಮುಕ್ಕ- SBS ನೂತನ ಸಮಿತಿ ಅಸ್ತಿತ್ವಕ್ಕೆ
ರೆಸಿಡೆನ್ಸಿ ನಿಯಮ ತಿದ್ದುಪಡಿ- ವಿದೇಶಿಯರಿಗೆ ಇನ್ನು ಮುಂದೆ ಸ್ಪಾನ್ಸರ್ ರಹಿತವಾಗಿ ವೀಸಾ ಲಭ್ಯ
ಖತಾರ್ ಗ್ಯಾಸ್ ಪ್ಲಾಂಟ್ ಸ್ಫೋಟ: ಭಾರತೀಯರು ಸೇರಿದಂತೆ 13 ಮಂದಿ ಮೃತ್ಯು
ಸಮಸ್ತ ಶತಮಾನೋತ್ಸವ: ಕರ್ನಾಟಕ ರಾಜ್ಯ ಸ್ವಾಗತ ಸಮಿತಿ ಅಸ್ತಿತ್ವಕ್ಕೆ- ರಾಜ್ಯಾದ್ಯಂತ ಭವ್ಯ ಕಾರ್ಯಕ್ರಮಗಳ ರೂಪುರೇಷೆ
ಬೆಳಕು ಮತ್ತು ವಿಜ್ಞಾನದ ಅದ್ಭುತ ಸಂಗಮ: ಡಾ. ಮುಹಮ್ಮದ್ ರಾಫಿ ಚೆನ್ನಾರ್
ಕುಂಬ್ರದ ಇಂಡಿಯನ್ ಇವೆಂಟ್ಸ್ ಸಂಸ್ಥೆಗೆ ಸಿರಾಜುದ್ದೀನ್ ಖಾಸಿಮಿ ಉಸ್ತಾದ್ ಭೇಟಿ
ಖತಾರ್ನಲ್ಲಿ ಉದ್ಯೋಗಾವಕಾಶ: ಅಕೌಂಟಿಂಗ್, ಐಟಿ, ಎಂಜಿನಿಯರಿಂಗ್ ಕ್ಷೇತ್ರಗಳಲ್ಲಿ ಭಾರಿ ಬೇಡಿಕೆ
‘ಮೆಟ್ರಾಶ್’ ವರ್ಕ್ ವೀಸಾಕ್ಕೆ ಅರ್ಜಿ ಸಲ್ಲಿಸಲು ಸುಲಭ ವಿಧಾನ- ಕತಾರ್ ಆಂತರಿಕ ಸಚಿವಾಲಯ
DKSC ಮಕ್ಕತುಲ್ ಮುಕರ್ರಮ ವಲಯ ಸಮಿತಿ: ನೂತನ ಅಧ್ಯಕ್ಷರಾಗಿ ಮುಹಮ್ಮದ್ ಶರೀಫ್ ಮರವೂರು ಆಯ್ಕೆ