ಮಂಗಳೂರು: ಇಲ್ಲಿನ ಬಂದರ್ ಕಸೈಗಲ್ಲಿ ಮಸೀದಿಯಲ್ಲಿ ಸುಧೀರ್ಘ 45 ವರ್ಷಗಳ ಕಾಲ ಖತೀಬರಾಗಿ ಸೇವೆ ಸಲ್ಲಿಸಿರುವ ಹಾಜಿ.ಸಿ.ಸ್ವಾಲಿಹ್ ಮುಸ್ಲಿಯಾರ್ ಉಸ್ತಾದರನ್ನು ಅವರ ಸ್ವಗೃಹದಲ್ಲಿ ಕರ್ನಾಟಕ ಮುಸ್ಲಿಂ ಜಮಾಅತ್ , ಎಸ್ ವೈ ಎಸ್ ,ಎಸ್ ಎಸ್ ಎಫ್ ಮಂಗಳೂರು ಸಿಟಿ ಯುನಿಟ್ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.
ಜೀವನದ ಬಹುಪಾಲು ಭಾಗವನ್ನು ಒಂದೇ ಮಸೀದಿಯಲ್ಲಿ ದೀನೀ ಸೇವೆಗಾಗಿ ಮುಡಿಪಾಗಿಟ್ಟ ಸ್ವಾಲಿಹ್ ಉಸ್ತಾದ್ ರ ನಡೆಯು ಪ್ರಶಂಸನೀಯ ಮತ್ತು ಮಾದರೀ ಯೋಗ್ಯವಾದುದು ಎಂದು ಕಂಡತ್ ಪಳ್ಳಿ ಜುಮಾ ಮಸೀದಿ ಖತೀಬ್ ಪಿ.ಎ.ಮುಹಮ್ಮದ್ ರಫೀಕ್ ಮದನಿ ಕಾಮಿಲ್, ಫೌಝೀ ಲೈನ್ ಮಸೀದಿ ಖತೀಬ್ ಅಬುಲ್ ವಫಾ ಖಾಸಿಂ ಮುಸ್ಲಿಯಾರ್, ಎಸ್ ವೈ ಎಸ್ ಮಂಗಳೂರು ಝೋನ್ ಅಧ್ಯಕ್ಷ ಹಾಫಿಳ್ ಯಾಕುಬ್ ಸಅದಿ ನಾವೂರು ಹೇಳಿದರು.
ಈ ಸಂದರ್ಭದಲ್ಲಿ ,ಸಯ್ಯಿದ್ ಇಸ್ ಹಾಕ್ ತಂಙಳ್, ಮುಸ್ಲಿಂ ಜಮಾಅತ್ ರಾಜ್ಯ ಕಾರ್ಯದರ್ಶಿ ಅಶ್ರಫ್ ಕಿನಾರ ಮಂಗಳೂರು, ಮುಸ್ಲಿಂ ಜಮಾಅತ್ ಸಿಟಿ ಸಮಿತಿ ನಾಯಕರಾದ ರಷೀದ್ ಹಾಜಿ ಪಾಂಡೇಶ್ವರ, ಅಬ್ಬಾಸ್ ಹಾಜಿ ಬಿಜೈ, ಜೆಪ್ಪು ಅಬೂಬಕ್ಕರ್ ಹಾಜಿ, ಎಸ್ ವೈ ಎಸ್ ಜಿಲ್ಲಾ ಕಾರ್ಯದರ್ಶಿಗಳಾದ ನಝೀರ್ ಲುಲು, ಹಸನ್ ಪಾಂಡೇಶ್ವರ, ಸಿಟಿ ಪ್ರಧಾನ ಕಾರ್ಯದರ್ಶಿ ಸಿದ್ದೀಖ್ ಟೈಲರ್, ಝೋನ್ ನಾಯಕರಾದ ಕೆ ಸಿ ಎಣ್ಮೂರು, ಹಾರಿಸ್ ಮದನಿ, ಮಜೀದ್ ಸಅದಿ, ಮನ್ಸೂರ್ ಸಅದಿ, ಶರೀಫ್ ಝುಹ್ರಿ ಲೈನ್, ಸಪ್ವಾನ್ ಬಿಜೈ, ರಶೀದ್ IBM, ರಫೀಕ್ ನೂಜಿ ಉಪಸ್ಥಿತರಿದ್ದರು.
















ಇನ್ನಷ್ಟು ಸುದ್ದಿಗಳು
ಹಿರಿಯ ಧಾರ್ಮಿಕ ವಿದ್ವಾಂಸರಾದ ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅಲ್ ಅಝ್ಹರಿ ವಫಾತ್
ಅಂಜುಮಾನ್ ಸಿರಾಜುಲ್ ಇಸ್ಲಾಂ ಮದ್ರಸ ಮುಕ್ಕ- SBS ನೂತನ ಸಮಿತಿ ಅಸ್ತಿತ್ವಕ್ಕೆ
ರೆಸಿಡೆನ್ಸಿ ನಿಯಮ ತಿದ್ದುಪಡಿ- ವಿದೇಶಿಯರಿಗೆ ಇನ್ನು ಮುಂದೆ ಸ್ಪಾನ್ಸರ್ ರಹಿತವಾಗಿ ವೀಸಾ ಲಭ್ಯ
ಖತಾರ್ ಗ್ಯಾಸ್ ಪ್ಲಾಂಟ್ ಸ್ಫೋಟ: ಭಾರತೀಯರು ಸೇರಿದಂತೆ 13 ಮಂದಿ ಮೃತ್ಯು
ಸಮಸ್ತ ಶತಮಾನೋತ್ಸವ: ಕರ್ನಾಟಕ ರಾಜ್ಯ ಸ್ವಾಗತ ಸಮಿತಿ ಅಸ್ತಿತ್ವಕ್ಕೆ- ರಾಜ್ಯಾದ್ಯಂತ ಭವ್ಯ ಕಾರ್ಯಕ್ರಮಗಳ ರೂಪುರೇಷೆ
ಬೆಳಕು ಮತ್ತು ವಿಜ್ಞಾನದ ಅದ್ಭುತ ಸಂಗಮ: ಡಾ. ಮುಹಮ್ಮದ್ ರಾಫಿ ಚೆನ್ನಾರ್
ಕುಂಬ್ರದ ಇಂಡಿಯನ್ ಇವೆಂಟ್ಸ್ ಸಂಸ್ಥೆಗೆ ಸಿರಾಜುದ್ದೀನ್ ಖಾಸಿಮಿ ಉಸ್ತಾದ್ ಭೇಟಿ
ಖತಾರ್ನಲ್ಲಿ ಉದ್ಯೋಗಾವಕಾಶ: ಅಕೌಂಟಿಂಗ್, ಐಟಿ, ಎಂಜಿನಿಯರಿಂಗ್ ಕ್ಷೇತ್ರಗಳಲ್ಲಿ ಭಾರಿ ಬೇಡಿಕೆ
‘ಮೆಟ್ರಾಶ್’ ವರ್ಕ್ ವೀಸಾಕ್ಕೆ ಅರ್ಜಿ ಸಲ್ಲಿಸಲು ಸುಲಭ ವಿಧಾನ- ಕತಾರ್ ಆಂತರಿಕ ಸಚಿವಾಲಯ
DKSC ಮಕ್ಕತುಲ್ ಮುಕರ್ರಮ ವಲಯ ಸಮಿತಿ: ನೂತನ ಅಧ್ಯಕ್ಷರಾಗಿ ಮುಹಮ್ಮದ್ ಶರೀಫ್ ಮರವೂರು ಆಯ್ಕೆ