ಬೆಳ್ತಂಗಡಿ: ಜೂನ್ 15 SჄS ಬೆಳ್ತಂಗಡಿ ಝೋನ್ ಸಮಿತಿಯಿಂದ ಸ್ಮಾರ್ಟ್ ಲೀಡರ್ಸ್ ಕ್ಯಾಂಪ್ ಇಂದು ಸಂಜೆ 6 ಗಂಟೆಗೆ ಸರಿಯಾಗಿ FM ಗಾರ್ಡನ್ ಗುರುವಾಯನಕೆರೆಯಲ್ಲಿ ನಡೆಯಲಿದೆ.
SჄS ಬೆಳ್ತಂಗಡಿ ಝೋನ್ ಅಧ್ಯಕ್ಷರಾದ ಬಹು ಅಬ್ದುರ್ರಹ್ಮಾನ್ ಸಖಾಫಿ ಆಲಂದಿಲ ಉಸ್ತಾದರ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮವನ್ನು ಸುನ್ನೀ ಕೋ ಅರ್ಡಿನೇಶನ್ ಬೆಳ್ತಂಗಡಿ ತಾಲೂಕು ಸಮಿತಿ ಅಧ್ಯಕ್ಷರಾದ ಅಸ್ಸಯ್ಯಿದ್ ಅಬ್ದುರ್ರಹ್ಮಾನ್ ಸಾದತ್ ಬಾ ಅಲವಿ ತಂಞಳ್ ಉಲ್ತೂರು ಉದ್ಘಾಟಿಸುವರು.

ಆಧ್ಯಾತ್ಮಿಕ ನೇತ್ರತ್ವ ಹಾಗೂ ದುಆ ಮಜ್ಲಿಸ್ ಬಹು ಅಸ್ಸಯ್ಯಿದ್ ಜಲಾಲುದ್ದೀನ್ ತಂಞಳ್ ಅಲ್ ಹಾದಿ ಮಲ್ಜಹ್ ನೇತೃತ್ವ ವಹಿಸಲಿದ್ದಾರೆ. ಸಂಪನ್ಮೂಲ ವ್ಯಕ್ತಿಯಾಗಿ ಬಹು ತ್ವಾಹಿರ್ ಸಖಾಫಿ ಉಸ್ತಾದ್ ಮಂಜೇರೀ ಕೇರಳ ಇವರು “ಸ್ಮಾರ್ಟ್ ಲೀಡರ್ಸ್” ಎಂಬ ವಿಷಯದಲ್ಲಿ ತರಗತಿ ಮಂಡಿಸಲಿದ್ದಾರೆ.
ಸಂಘಟನೆಯ ಜವಾಬ್ದಾರಿ ಎಂಬ ವಿಷಯದಲ್ಲಿ
SჄS ಈಸ್ಟ್ ಜಿಲ್ಲಾ ಅಧ್ಯಕ್ಷರು ಬಹು ಅಶ್ರಫ್ ಸಖಾಫಿ ಮಾಡಾವು ವಿವರಿಸಿ ಕೊಡಲಿದ್ದಾರೆ.
ಈ ಕಾರ್ಯಕ್ರಮದಲ್ಲಿ ಯುನಿಟ್ ,ಸರ್ಕಲ್ ಪದಾಧಿಕಾರಿಗಳು ಹಾಗೂ ಝೋನ್ ಕಾರ್ಯಕಾರಿ ಸಮಿತಿ ಸದಸ್ಯರೆಲ್ಲರೂ ಸರಿ ಸುಮಾರು 300 ಕ್ಕೂ ಅಧಿಕ ನಾಯಕರು ಭಾಗವಹಿಸಲಿದ್ದಾರೆ.
ಎಂದು SჄS ಬೆಳ್ತಂಗಡಿ ಝೋನ್ ಪ್ರದಾನ ಕಾರ್ಯದರ್ಶಿ ಸಲೀಂ ಕನ್ಯಾಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಹಿರಿಯ ಧಾರ್ಮಿಕ ವಿದ್ವಾಂಸರಾದ ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅಲ್ ಅಝ್ಹರಿ ವಫಾತ್
ಅಂಜುಮಾನ್ ಸಿರಾಜುಲ್ ಇಸ್ಲಾಂ ಮದ್ರಸ ಮುಕ್ಕ- SBS ನೂತನ ಸಮಿತಿ ಅಸ್ತಿತ್ವಕ್ಕೆ
ರೆಸಿಡೆನ್ಸಿ ನಿಯಮ ತಿದ್ದುಪಡಿ- ವಿದೇಶಿಯರಿಗೆ ಇನ್ನು ಮುಂದೆ ಸ್ಪಾನ್ಸರ್ ರಹಿತವಾಗಿ ವೀಸಾ ಲಭ್ಯ
ಖತಾರ್ ಗ್ಯಾಸ್ ಪ್ಲಾಂಟ್ ಸ್ಫೋಟ: ಭಾರತೀಯರು ಸೇರಿದಂತೆ 13 ಮಂದಿ ಮೃತ್ಯು
ಸಮಸ್ತ ಶತಮಾನೋತ್ಸವ: ಕರ್ನಾಟಕ ರಾಜ್ಯ ಸ್ವಾಗತ ಸಮಿತಿ ಅಸ್ತಿತ್ವಕ್ಕೆ- ರಾಜ್ಯಾದ್ಯಂತ ಭವ್ಯ ಕಾರ್ಯಕ್ರಮಗಳ ರೂಪುರೇಷೆ
ಬೆಳಕು ಮತ್ತು ವಿಜ್ಞಾನದ ಅದ್ಭುತ ಸಂಗಮ: ಡಾ. ಮುಹಮ್ಮದ್ ರಾಫಿ ಚೆನ್ನಾರ್
ಕುಂಬ್ರದ ಇಂಡಿಯನ್ ಇವೆಂಟ್ಸ್ ಸಂಸ್ಥೆಗೆ ಸಿರಾಜುದ್ದೀನ್ ಖಾಸಿಮಿ ಉಸ್ತಾದ್ ಭೇಟಿ
ಖತಾರ್ನಲ್ಲಿ ಉದ್ಯೋಗಾವಕಾಶ: ಅಕೌಂಟಿಂಗ್, ಐಟಿ, ಎಂಜಿನಿಯರಿಂಗ್ ಕ್ಷೇತ್ರಗಳಲ್ಲಿ ಭಾರಿ ಬೇಡಿಕೆ
‘ಮೆಟ್ರಾಶ್’ ವರ್ಕ್ ವೀಸಾಕ್ಕೆ ಅರ್ಜಿ ಸಲ್ಲಿಸಲು ಸುಲಭ ವಿಧಾನ- ಕತಾರ್ ಆಂತರಿಕ ಸಚಿವಾಲಯ
DKSC ಮಕ್ಕತುಲ್ ಮುಕರ್ರಮ ವಲಯ ಸಮಿತಿ: ನೂತನ ಅಧ್ಯಕ್ಷರಾಗಿ ಮುಹಮ್ಮದ್ ಶರೀಫ್ ಮರವೂರು ಆಯ್ಕೆ