ರಿಯಾದ್: ರಾಜ್ಯದಲ್ಲಿ ಇತ್ತೀಚಿನ ವರ್ಷಗಳಲ್ಲಿ ಭುಗಿಲೆದ್ದಿರುವ ಕೋಮುವಾದಿ ವಿಷಜಂತುಗಳ ಅಟ್ಟಹಾಸದಿಂದ ಜನ ಸಾಮಾನ್ಯರ ನಿತ್ಯ ಜೀವನ ಹದಗೆಟ್ಟಿರುವ ಸಂದರ್ಭದಲ್ಲೇ, ಅತ್ತ ಅರಬ್ ನಾಡಿನಲ್ಲಿ ಕನ್ನಡಿಗ ಮುಸ್ಲಿಂ ಸಂಘಟನೆಯಾದ ಕರ್ನಾಟಕ ಕಲ್ಚರಲ್ ಫೌಂಡೇಶನ್ ಕೆಸಿಎಫ್ ಕೋಮು ಸೌಹಾರ್ದತೆಗೆ ಪ್ರೇರಣೆ ನೀಡುವ ಕಾರ್ಯಗಳಲ್ಲಿ ತೊಡಗಿಕೊಂಡು ಕಾರ್ಯಾಚರಿಸುತ್ತಿರುವುದು ಶ್ಲಾಘನೀಯವಾಗಿದೆ.
ಅದಕ್ಕೊಂದು ಉದಾಹರಣೆ ಎಂಬಂತೆ, ಸೌದಿ ಅರೇಬಿಯಾ ರಿಯಾದ್ ನಲ್ಲಿ ಕಳೆದ ಏಳು ತಿಂಗಳಿಂದ ಹೌಸ್ ಡ್ರೈವರ್ ವೃತ್ತಿಯಲ್ಲಿದ್ದ ರಾಜು ಕಲಬುರ್ಗಿ ಅವರಿಂದ ಇತ್ತೀಚಿನ ಕೆಲವು ದಿನಗಳಿಂದ ಯಾವುದೇ ವಿವರಗಳು ಮನೆಯವರಿಗೆ ಲಭಿಸದ ಕಾರಣ ಸಹಾಯ ಕೋರಿ ಕೆಸಿಎಫ್ ಗೆ ವಿಷಯ ತಿಳಿಸಿದ್ದರು. ಕೆಸಿಎಫ್ ರಾಷ್ಟ್ರೀಯ ಸಮಿತಿಯ ಸಾಂತ್ವನ ಇಲಾಖೆಯ ನೇತಾರರಾದ ಬಾಷ ಗಂಗಾವಳಿಯ ಮುಖಾಂತರ ರಾಜು ಕಲಬುರ್ಗಿ ರವರ ಕಫೀಲ್ ನನ್ನು ಸಂಪರ್ಕಿಸಿ ಮಾಹಿತಿ ಪಡೆದಾಗ ಅವರು ಮರಣ ಹೊಂದಿದ ವಿಷಯ ತಿಳಿದಿದೆ. ಬಳಿಕ ಕಫೀಲ್ ಭಾರತೀಯ ರಾಯಭಾರಿ ಕಛೇರಿಗೆ ಮಾಹಿತಿ ನೀಡಿದ್ದಾರೆ.
ನಂತರದ ದಿನಗಳಲ್ಲಿ ಕಫೀಲ್ ನ ಕಡೆಯಿಂದ ಯಾವುದೇ ರೀತಿಯ ಸ್ಪಂದನೆ ಲಭಿಸದ ಕಾರಣ ಕೆಸಿಎಫ್ ನ ನೇತಾರರು INDIAN EMBASSY ಯ ಸಹಕಾರದೊಂದಿಗೆ ಮಾನವೀಯತೆಯ ನೆಲೆಯಲ್ಲಿ ನಿರಂತರವಾಗಿ ಸ್ಪಂದಿಸಿ, ಬೇಕಾದ ದಾಖಲೆಗಳ ಕಡತಗಳನ್ನು ವಿಲೇವಾರಿ ಮಾಡಿ ಮೃತ ದೇಹವನ್ನು ಊರಿಗೆ ತಲುಪಿಸುವ ವ್ಯವಸ್ಥೆಯನ್ನು ಮಾಡಿದ್ದಾರೆ. ಮೃತ ದೇಹವು ಈಗಾಗಲೇ ಸಂಬಂಧಿಕರ ಕೈ ಸೇರಿರುತ್ತದೆ.
ಈ ಒಂದು ಕಾರ್ಯಚರಣೆಯಲ್ಲಿ ಕೆಸಿಎಫ್ ನೊಂದಿಗೆ ಸಹಕರಿಸಿದ ಭಾರತೀಯ ರಾಯಭಾರಿ ಕಚೇರಿಯ ಮಖ್ಯಸ್ಥರು ಹಾಗು ಕೆಸಿಎಫ್ ನೇತಾರರು ಹಾಗು ಸಾಂತ್ವನ ಇಲಾಖೆಯ ನಾಯಕರಿಗೆ ಕೆಸಿಎಫ್ ಸೌದಿ ರಾಷ್ಟ್ರೀಯ ಸಮಿತಿಯ ಸಾಂತ್ವನ ಇಲಾಖೆಯು ಅಭಿನಂದನೆಗಳನ್ನು ಸಲ್ಲಿಸಿದೆ.
















ಇನ್ನಷ್ಟು ಸುದ್ದಿಗಳು
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
ಅಂತಾರಾಷ್ಟ್ರೀಯ ಸರ್ವೀಸ್ಗಳಲ್ಲಿ ದರ ಕಡಿತ – ಏರ್ ಇಂಡಿಯಾ ಎಕ್ಸ್ಪ್ರೆಸ್ ಘೋಷಣೆ