ಟೆಲ್ ಅವಿವ್: ಇರಾನ್ನ ಪರಮಾಣು ಸೌಲಭ್ಯಗಳ ಮೇಲೆ ಅಮೆರಿಕ ದಾಳಿ ನಡೆಸಿದ ನಂತರ ಇರಾನ್ ಇಸ್ರೇಲ್ ಮೇಲೆ ತನ್ನ ದಾಳಿಯನ್ನು ತೀವ್ರಗೊಳಿಸಿದೆ. ಇಸ್ರೇಲ್ ಮೇಲೆ 40 ಕ್ಷಿಪಣಿಗಳನ್ನು ಹಾರಿಸಲಾಗಿದ್ದು, ಟೆಲ್ ಅವಿವ್ ಮತ್ತು ಜೆರುಸಲೆಮ್ನಲ್ಲಿ ಸ್ಫೋಟಗಳು ಸಂಭವಿಸಿವೆ ಎಂದು ಇರಾನ್ ಮಿಲಿಟರಿ ವಕ್ತಾರರು ತಿಳಿಸಿದ್ದಾರೆ. ಇಸ್ರೇಲ್ನಲ್ಲಿ ಅತ್ಯಂತ ಶಕ್ತಿಶಾಲಿ ದಾಳಿ ನಡೆದಿದೆ ಎಂದು ಸೇನೆ ಹೇಳಿದೆ.
ಕ್ಷಿಪಣಿಗಳು ಇಸ್ರೇಲ್ನ 10 ಸ್ಥಳಗಳಲ್ಲಿ ಅಪ್ಪಳಿಸಿದೆ. ಹೈಫಾ, ಟೆಲ್ ಅವೀವ್ ಮತ್ತು ಜೆರುಸಲೆಮ್ನಲ್ಲಿ ಏಕಕಾಲದಲ್ಲಿ ದಾಳಿಗಳನ್ನು ನಡೆಸಲಾಗಿದೆ. ಹೈಫಾದಲ್ಲಿ ಮಾತ್ರ ಇರಾನ್ 40 ಕ್ಷಿಪಣಿಗಳನ್ನು ಉಡಾಯಿಸಿದೆ. ಬೆನ್ ಗುರಿಯನ್ ವಿಮಾನ ನಿಲ್ದಾಣ, ಜೈವಿಕ ತನಿಖಾ ಕೇಂದ್ರಗಳು ಮತ್ತು ಕಮಾಂಡ್ ಮತ್ತು ನಿಯಂತ್ರಣ ಕೇಂದ್ರಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಲಾಗಿದೆ ಎಂದು ಇರಾನ್ ಹೇಳಿದೆ.
ಕ್ಷಿಪಣಿಗಳು ನೇರವಾಗಿ ಟೆಲ್ ಅವೀವ್ನ ಕೆಲವು ಭಾಗಗಳಲ್ಲಿ ಬಿದ್ದಿವೆ. ದಾಳಿಯಲ್ಲಿ ಹಲವಾರು ಕಟ್ಟಡಗಳು ನೆಲಕ್ಕುರುಳಿದೆ ಮತ್ತು ಅನೇಕ ಜನರು ಗಾಯಗೊಂಡಿದ್ದಾರೆ ಎಂದು ಅಂತರರಾಷ್ಟ್ರೀಯ ಸುದ್ದಿ ಸಂಸ್ಥೆಗಳು ಮತ್ತು ಇಸ್ರೇಲಿ ಮಾಧ್ಯಮಗಳು ಬಿಡುಗಡೆ ಮಾಡಿದ ಚಿತ್ರಗಳೊಂದಿಗೆ ವಿವರಿಸಲಾಗಿದೆ. ಟೆಲ್ ಅವೀವ್ನ ದಕ್ಷಿಣದಲ್ಲಿರುವ ನೆಸ್ ಝಿಯೋನಾದಲ್ಲಿ ಕುಸಿದ ಕಟ್ಟಡದಲ್ಲಿ 20 ಜನರು ಸಿಲುಕಿಕೊಂಡಿದ್ದಾರೆ ಎಂದು ಇಸ್ರೇಲ್ ಸೇನಾ ರೇಡಿಯೋ ವರದಿ ಮಾಡಿದೆ.


ಹೈಫಾದಲ್ಲಿ ಮಾತ್ರ 40 ಕ್ಷಿಪಣಿಗಳನ್ನು ಉಡಾಯಿಸಲಾಗಿದೆ ಎಂದು ವರದಿಗಳಿವೆ. ಇಸ್ರೇಲ್ನಾದ್ಯಂತ ವಾಯುದಾಳಿಯ ಸೈರನ್ಗಳು ಮೊಳಗುತ್ತಿವೆ ಮತ್ತು ಹೈ-ಅಲರ್ಟ್ ಎಚ್ಚರಿಕೆಗಳನ್ನು ನೀಡಲಾಗಿದೆ ಎಂದು ಅಂತರರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.
ಇರಾನ್ನ ಪರಮಾಣು ಸೌಲಭ್ಯಗಳ ಮೇಲೆ ಅಮೆರಿಕ ದಾಳಿ ನಡೆಸಿದ ನಂತರ ಇಸ್ರೇಲ್ ತನ್ನ ಎಲ್ಲಾ ವಿಮಾನ ನಿಲ್ದಾಣಗಳನ್ನು ಮುಚ್ಚಿದೆ. ಮುನ್ನೆಚ್ಚರಿಕೆಯಾಗಿ ವಾಯುಪ್ರದೇಶವನ್ನು ಮುಚ್ಚಲಾಗಿದೆ ಎಂದು ಇಸ್ರೇಲ್ ವಿಮಾನ ನಿಲ್ದಾಣ ಪ್ರಾಧಿಕಾರ ಘೋಷಿಸಿತು.
ವಾಯುಪ್ರದೇಶ ಮುಚ್ಚಿರುವುದರಿಂದ ಈಜಿಪ್ಟ್ ಮತ್ತು ಜೋರ್ಡಾನ್ಗೆ ಭೂ ಮಾರ್ಗಗಳು ಮುಕ್ತವಾಗಿವೆ ಎಂದು ಬಂದರು ಪ್ರಾಧಿಕಾರ ಘೋಷಿಸಿತು.
ಕಳೆದ ರಾತ್ರಿ ಅಮೆರಿಕವು ಇರಾನ್ನ ಫೋರ್ದೋ ಸೇರಿದಂತೆ ಮೂರು ಪರಮಾಣು ಕೇಂದ್ರಗಳ ಮೇಲೆ ಬಾಂಬ್ ದಾಳಿ ಮಾಡಿತ್ತು. ಇದಕ್ಕೆ ಪ್ರತೀಕಾರವಾಗಿ ಇರಾನ್, ಇಸ್ರೇಲ್ ಮೇಲೆ ಬಾಂಬ್ಗಳ ಸುರಿಮಳೆಯನ್ನೇ ಸುರಿಸಿದೆ.
















ಇನ್ನಷ್ಟು ಸುದ್ದಿಗಳು
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ
ಇರಾಕ್ನ ನೂತನ ಪ್ರಧಾನ ಮಂತ್ರಿಯಾಗಿ ಉದ್ಯಮಿ ಅಲಿ ಅಲ್-ಝೈದಿ ಆಯ್ಕೆ- ದೇಶದ ರಾಜಕೀಯದಲ್ಲಿ ಹೊಸ ಯುಗ?
ಮಾದರಿ ಮದುವೆ ಅಭಿಯಾನದ ಸಮಾರೋಪ ಪ್ರಚಾರ; ಎ.28, 29 ರಂದು ವಾಹನ ಸಂದೇಶ ಜಾಥಾ
ಅಮೆರಿಕಕ್ಕೆ ಇರಾನ್ನಿಂದ ‘ಬಿಗ್ ಡೀಲ್’: ಹೋರ್ಮುಜ್ ಜಲಸಂಧಿ ತೆರೆಯಲು ಸಿದ್ಧ, ಆದರೆ ಒಂದು ಷರತ್ತು!
ಮುಂಬೈಯನ್ನು ನಡುಗಿಸಿದ ಘಟನೆ: ಬಿರಿಯಾನಿ ಮತ್ತು ಕಲ್ಲಂಗಡಿ ತಿಂದ ಕುಟುಂಬ ಬೆಳಗಾಗುವಷ್ಟರಲ್ಲಿ ಅಂತ್ಯ
‘ಮಾದರಿ ಮದುವೆ ಅಭಿಯಾನ’ ಸಮಾರೋಪ ಸಮಾರಂಭ – ಎಸ್ವೈಎಸ್ ಬಂಟ್ವಾಳ ಝೋನ್ ಯಶಸ್ವಿಗೆ ಕರೆ
ಟ್ರಂಪ್ ಔತಣಕೂಟದಲ್ಲಿ ಶೂಟೌಟ್: ನಾಸಾ ಫೆಲೋಶಿಪ್ ಪಡೆದ ಎಂಜಿನಿಯರ್ ಬಂಧನ
ಮಂಗಳೂರು ಪೊಲೀಸ್ ಕಮಿಷನರ್: ವರ್ಗಾವಣೆ ವಿಚಾರ ಕೈಬಿಡುವಂತೆ ಮನವಿ- ಡಿಜಿಪಿಗೆ ಇಕ್ಬಾಲ್ ಬಾಳಿಲ ಪತ್ರ