ಟೆಲ್ ಅವಿವ್: ಇರಾನ್ನ ಪರಮಾಣು ಸೌಲಭ್ಯಗಳ ಮೇಲೆ ಅಮೆರಿಕ ದಾಳಿ ನಡೆಸಿದ ನಂತರ ಇರಾನ್ ಇಸ್ರೇಲ್ ಮೇಲೆ ತನ್ನ ದಾಳಿಯನ್ನು ತೀವ್ರಗೊಳಿಸಿದೆ. ಇಸ್ರೇಲ್ ಮೇಲೆ 40 ಕ್ಷಿಪಣಿಗಳನ್ನು ಹಾರಿಸಲಾಗಿದ್ದು, ಟೆಲ್ ಅವಿವ್ ಮತ್ತು ಜೆರುಸಲೆಮ್ನಲ್ಲಿ ಸ್ಫೋಟಗಳು ಸಂಭವಿಸಿವೆ ಎಂದು ಇರಾನ್ ಮಿಲಿಟರಿ ವಕ್ತಾರರು ತಿಳಿಸಿದ್ದಾರೆ. ಇಸ್ರೇಲ್ನಲ್ಲಿ ಅತ್ಯಂತ ಶಕ್ತಿಶಾಲಿ ದಾಳಿ ನಡೆದಿದೆ ಎಂದು ಸೇನೆ ಹೇಳಿದೆ.
ಕ್ಷಿಪಣಿಗಳು ಇಸ್ರೇಲ್ನ 10 ಸ್ಥಳಗಳಲ್ಲಿ ಅಪ್ಪಳಿಸಿದೆ. ಹೈಫಾ, ಟೆಲ್ ಅವೀವ್ ಮತ್ತು ಜೆರುಸಲೆಮ್ನಲ್ಲಿ ಏಕಕಾಲದಲ್ಲಿ ದಾಳಿಗಳನ್ನು ನಡೆಸಲಾಗಿದೆ. ಹೈಫಾದಲ್ಲಿ ಮಾತ್ರ ಇರಾನ್ 40 ಕ್ಷಿಪಣಿಗಳನ್ನು ಉಡಾಯಿಸಿದೆ. ಬೆನ್ ಗುರಿಯನ್ ವಿಮಾನ ನಿಲ್ದಾಣ, ಜೈವಿಕ ತನಿಖಾ ಕೇಂದ್ರಗಳು ಮತ್ತು ಕಮಾಂಡ್ ಮತ್ತು ನಿಯಂತ್ರಣ ಕೇಂದ್ರಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಲಾಗಿದೆ ಎಂದು ಇರಾನ್ ಹೇಳಿದೆ.
ಕ್ಷಿಪಣಿಗಳು ನೇರವಾಗಿ ಟೆಲ್ ಅವೀವ್ನ ಕೆಲವು ಭಾಗಗಳಲ್ಲಿ ಬಿದ್ದಿವೆ. ದಾಳಿಯಲ್ಲಿ ಹಲವಾರು ಕಟ್ಟಡಗಳು ನೆಲಕ್ಕುರುಳಿದೆ ಮತ್ತು ಅನೇಕ ಜನರು ಗಾಯಗೊಂಡಿದ್ದಾರೆ ಎಂದು ಅಂತರರಾಷ್ಟ್ರೀಯ ಸುದ್ದಿ ಸಂಸ್ಥೆಗಳು ಮತ್ತು ಇಸ್ರೇಲಿ ಮಾಧ್ಯಮಗಳು ಬಿಡುಗಡೆ ಮಾಡಿದ ಚಿತ್ರಗಳೊಂದಿಗೆ ವಿವರಿಸಲಾಗಿದೆ. ಟೆಲ್ ಅವೀವ್ನ ದಕ್ಷಿಣದಲ್ಲಿರುವ ನೆಸ್ ಝಿಯೋನಾದಲ್ಲಿ ಕುಸಿದ ಕಟ್ಟಡದಲ್ಲಿ 20 ಜನರು ಸಿಲುಕಿಕೊಂಡಿದ್ದಾರೆ ಎಂದು ಇಸ್ರೇಲ್ ಸೇನಾ ರೇಡಿಯೋ ವರದಿ ಮಾಡಿದೆ.


ಹೈಫಾದಲ್ಲಿ ಮಾತ್ರ 40 ಕ್ಷಿಪಣಿಗಳನ್ನು ಉಡಾಯಿಸಲಾಗಿದೆ ಎಂದು ವರದಿಗಳಿವೆ. ಇಸ್ರೇಲ್ನಾದ್ಯಂತ ವಾಯುದಾಳಿಯ ಸೈರನ್ಗಳು ಮೊಳಗುತ್ತಿವೆ ಮತ್ತು ಹೈ-ಅಲರ್ಟ್ ಎಚ್ಚರಿಕೆಗಳನ್ನು ನೀಡಲಾಗಿದೆ ಎಂದು ಅಂತರರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.
ಇರಾನ್ನ ಪರಮಾಣು ಸೌಲಭ್ಯಗಳ ಮೇಲೆ ಅಮೆರಿಕ ದಾಳಿ ನಡೆಸಿದ ನಂತರ ಇಸ್ರೇಲ್ ತನ್ನ ಎಲ್ಲಾ ವಿಮಾನ ನಿಲ್ದಾಣಗಳನ್ನು ಮುಚ್ಚಿದೆ. ಮುನ್ನೆಚ್ಚರಿಕೆಯಾಗಿ ವಾಯುಪ್ರದೇಶವನ್ನು ಮುಚ್ಚಲಾಗಿದೆ ಎಂದು ಇಸ್ರೇಲ್ ವಿಮಾನ ನಿಲ್ದಾಣ ಪ್ರಾಧಿಕಾರ ಘೋಷಿಸಿತು.
ವಾಯುಪ್ರದೇಶ ಮುಚ್ಚಿರುವುದರಿಂದ ಈಜಿಪ್ಟ್ ಮತ್ತು ಜೋರ್ಡಾನ್ಗೆ ಭೂ ಮಾರ್ಗಗಳು ಮುಕ್ತವಾಗಿವೆ ಎಂದು ಬಂದರು ಪ್ರಾಧಿಕಾರ ಘೋಷಿಸಿತು.
ಕಳೆದ ರಾತ್ರಿ ಅಮೆರಿಕವು ಇರಾನ್ನ ಫೋರ್ದೋ ಸೇರಿದಂತೆ ಮೂರು ಪರಮಾಣು ಕೇಂದ್ರಗಳ ಮೇಲೆ ಬಾಂಬ್ ದಾಳಿ ಮಾಡಿತ್ತು. ಇದಕ್ಕೆ ಪ್ರತೀಕಾರವಾಗಿ ಇರಾನ್, ಇಸ್ರೇಲ್ ಮೇಲೆ ಬಾಂಬ್ಗಳ ಸುರಿಮಳೆಯನ್ನೇ ಸುರಿಸಿದೆ.
















ಇನ್ನಷ್ಟು ಸುದ್ದಿಗಳು
ಹಿರಿಯ ಧಾರ್ಮಿಕ ವಿದ್ವಾಂಸರಾದ ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅಲ್ ಅಝ್ಹರಿ ವಫಾತ್
ಅಂಜುಮಾನ್ ಸಿರಾಜುಲ್ ಇಸ್ಲಾಂ ಮದ್ರಸ ಮುಕ್ಕ- SBS ನೂತನ ಸಮಿತಿ ಅಸ್ತಿತ್ವಕ್ಕೆ
ರೆಸಿಡೆನ್ಸಿ ನಿಯಮ ತಿದ್ದುಪಡಿ- ವಿದೇಶಿಯರಿಗೆ ಇನ್ನು ಮುಂದೆ ಸ್ಪಾನ್ಸರ್ ರಹಿತವಾಗಿ ವೀಸಾ ಲಭ್ಯ
ಖತಾರ್ ಗ್ಯಾಸ್ ಪ್ಲಾಂಟ್ ಸ್ಫೋಟ: ಭಾರತೀಯರು ಸೇರಿದಂತೆ 13 ಮಂದಿ ಮೃತ್ಯು
ಸಮಸ್ತ ಶತಮಾನೋತ್ಸವ: ಕರ್ನಾಟಕ ರಾಜ್ಯ ಸ್ವಾಗತ ಸಮಿತಿ ಅಸ್ತಿತ್ವಕ್ಕೆ- ರಾಜ್ಯಾದ್ಯಂತ ಭವ್ಯ ಕಾರ್ಯಕ್ರಮಗಳ ರೂಪುರೇಷೆ
ಬೆಳಕು ಮತ್ತು ವಿಜ್ಞಾನದ ಅದ್ಭುತ ಸಂಗಮ: ಡಾ. ಮುಹಮ್ಮದ್ ರಾಫಿ ಚೆನ್ನಾರ್
ಕುಂಬ್ರದ ಇಂಡಿಯನ್ ಇವೆಂಟ್ಸ್ ಸಂಸ್ಥೆಗೆ ಸಿರಾಜುದ್ದೀನ್ ಖಾಸಿಮಿ ಉಸ್ತಾದ್ ಭೇಟಿ
ಖತಾರ್ನಲ್ಲಿ ಉದ್ಯೋಗಾವಕಾಶ: ಅಕೌಂಟಿಂಗ್, ಐಟಿ, ಎಂಜಿನಿಯರಿಂಗ್ ಕ್ಷೇತ್ರಗಳಲ್ಲಿ ಭಾರಿ ಬೇಡಿಕೆ
‘ಮೆಟ್ರಾಶ್’ ವರ್ಕ್ ವೀಸಾಕ್ಕೆ ಅರ್ಜಿ ಸಲ್ಲಿಸಲು ಸುಲಭ ವಿಧಾನ- ಕತಾರ್ ಆಂತರಿಕ ಸಚಿವಾಲಯ
ಮಕ್ಕಾ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಧೂಳಿನ ಬಿರುಗಾಳಿ ಮುಂದುವರಿಕೆ- ಹಲವು ಭಾಗಗಳಲ್ಲಿ ಮಳೆ