ಪುತ್ತೂರು: ಕರ್ನಾಟಕ ಸುನ್ನೀ ಯುವ ಜನ ಸಂಘ( ಎಸ್ ವೈ ಎಸ್) ದ.ಕ ಈಸ್ಟ್ ಜಿಲ್ಲಾ ಸಮಿತಿಯ ಅಧೀನದ ಝೋನ್ ಹಾಗೂ ಸರ್ಕಲ್ ಸಮಿತಿಗಳ ಸಾಂತ್ವನ ಹಾಗೂ ಇಸಾಬ ವಿಭಾಗದ ಉಫಾದ್ಯಕ್ಷರುಗಳು,ಕಾರ್ಯದರ್ಶಿಗಳಿಗೆ ಆಯೋಜಿಸಲಾಗಿದ್ದ ‘ಇಸ್ಲ’ ಎಂಬ ಹೆಸರಿನ ವಿಶೇಷ ತರಬೇತಿ ಶಿಬಿರ ಉಪ್ಪಿನಂಗಡಿ ಸುನ್ನೀ ಸೆಂಟರ್ನಲ್ಲಿ ಶನಿವಾರ ನಡೆಯಿತು.
ಈಸ್ಟ್ ಜಿಲ್ಲಾ ಅಧ್ಯಕ್ಷರಾದ ಅಶ್ರಫ್ ಸಖಾಫಿ ಮೂಡಡ್ಕ ರವರ ಸಭಾಧ್ಯಕ್ಷತೆಯಲ್ಲಿ ಜರುಗಿದ ಸಭೆಯನ್ನು ಜಿಲ್ಲಾ ಕೋಶಾಧಿಕಾರಿ ಶಾಫಿ ಸಖಾಫಿ ಕೊಕ್ಕಡ ಉದ್ಘಾಟಿಸಿದರು.
ಸಂಪನ್ಮೂಲ ವ್ಯಕ್ಯಿಯಾಗಿ ಆಗಮಿಸಿ ದ ಖ್ಯಾತ ತರಬೇತುದಾರ ಉಮರ್ ಸಖಾಫಿ ಎಡಪ್ಪಾಲರವರು ತರಗತಿ ಮಂಡಿಸಿದರು.
ಜಿಲ್ಲಾ ವ್ಯಾಪ್ತಿಯ ಆರು ಝೋನ್ ಸಮಿತಿಗಳ ಸಾಂತ್ವನ ಹಾಗೂ ಇಸಾಬ ವಿಭಾಗದ ಉಫಾದ್ಯಕ್ಷರುಗಳು,ಮೂವತ್ತೈದು ಸರ್ಕಲ್ಗಳ ಕಾರ್ಯದರ್ಶಿಗಳು ಶಿಬಿರದಲ್ಲಿ ಪಾಲ್ಗೊಂಡು ಕ್ಯಾಂಪ್ ಯಶಸ್ವಿಗೊಳಿಸುವಲ್ಲಿ ಸಹಕರಿಸಿದರು.

ಎಸ್ ವೈ ಎಸ್ ಕರ್ನಾಟಕ ರಾಜ್ಯ ಸದಸ್ಯರಾದ ಹಮೀದ್ ಕೊಯಿಲ.ರಾಜ್ಯ ಸದಸ್ಯರು,ಈಸ್ಟ್ ಜಿಲ್ಲಾ ಪ್ರಧಾನಕಾರ್ಯದರ್ಶಿಯೂ ಆದ ಸ್ವಾಲಿಹ್ ಮುರ,ಜಿಲ್ಲಾ ದಅವಾ ಉಪಾಧ್ಯಕ್ಷರಾದ ಸಿರಾಜುದ್ದೀನ್ ಸಖಾಫಿ ಕನ್ಯಾನ, ಜಿಲ್ಲಾ ಸಾಂತ್ವನ ಇಸಾಬ ಉಪಾಧ್ಯಕ್ಷರಾದ ಉಸ್ಮಾನ್ ಸೋಕಿಲ,ಜಿಲ್ಲಾ ಸಾಂತ್ವನ ವಿಭಾಗದ ನಾಯಕರಾದ ಹಂಝ ಕಲಾರ,ಜಮಾಲುದ್ದೀನ್ ಲತೀಫಿ ಲಾಡಿ,ಯೂಸುಫ್ ಸಖಾಫಿ ಬೆಳಂದೂರು ಉಪಸ್ಥಿತರಿದ್ದರು.ಈಸ್ಟ್ ಜಿಲ್ಲಾ ಸಾಂತ್ವನ ಇಸಾಬ ಕಾರ್ಯದರ್ಶಿ ಸಲೀಂ ಕನ್ಯಾಡಿ ಸ್ವಾಗತಿಸಿ,
ಧನ್ಯವಾದ ಅರ್ಪಿಸಿದರು.
















ಇನ್ನಷ್ಟು ಸುದ್ದಿಗಳು
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮಈ
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ