ಮಂಗಳೂರು: ದಕ್ಷಿಣ ಕನ್ನಡ, ಕೊಡಗು, ಶಿವಮೊಗ್ಗ ಹಾಗೂ ಕಾಸರಗೋಡು ಸಂಯುಕ್ತ ಜಮಾಅತ್ಗಳ ಸಭೆ ಹಾಗೂ “ಮೊಹಲ್ಲಾ ವ್ಯವಸ್ಥೆಯ ಮೂಲಕ ಸಮುದಾಯದ ಸಬಲೀಕರಣ” ಯೋಜನೆ ಪಂಪ್ವೆಲ್ ತಖ್ವಾ ಮಸೀದಿಯಲ್ಲಿ ಸುಲ್ತಾನುಲ್ ಉಲಮಾ ಎ.ಪಿ ಉಸ್ತಾದರ ನೇತೃತ್ವದಲ್ಲಿ ನಡೆಯಿತು.
ಕಾರ್ಯಕ್ರಮವು ಕೇರಳ SSF ಅಧ್ಯಕ್ಷ ಸಯ್ಯಿದ್ ಮುನೀರುಲ್ ಅಹ್ದಲ್ ರವರ ದುಆದೊಂದಿಗೆ ಆರಂಭಗೊಂಡಿತು. ಝೈನಿ ಕಾಮಿಲ್ ಸಖಾಫಿ ಸ್ವಾಗತ ಭಾಷಣ ಮಾಡಿದರೆ, ಡಾ. ಅಬ್ದುಲ್ ಹಕೀಮ್ ಅಝ್ಹರಿ ಉಸ್ತಾದರು ಸಭೆಯನ್ನು ಉದ್ಘಾಟಿಸಿ, ಹಿಂದಿನ ಕಾಲದ ಮಸೀದಿ ಮತ್ತು ಮಹಲ್ಲಾಗಳ ನೇತೃತ್ವದ ಮಾದರಿ ಹಾಗೂ ಸಮಾಜಕ್ಕೆ ನೀಡಿರುವ ಸೇವೆಯನ್ನು ಸ್ಮರಿಸಿಕೊಂಡರು.
GEMS (Grass root Empowerment through Mahallu System) ಗುರಿಯನ್ನು ಪ್ರಸ್ತಾಪಿಸಿ ಅಬ್ದು ಸರ್ ಮಾತನಾಡಿ, “ಈ ಮೊಹಲ್ಲಾಗಳಲ್ಲಿ ಬಯಸುವ ಬದಲಾವಣೆಗಳು ಹೇಗಿರಬೇಕು?” ಎಂಬುದರ ಬಗ್ಗೆ ಮನಮುಟ್ಟುವ ರೀತಿಯಲ್ಲಿ ವಿಷಯ ಮಂಡಿಸಿದರು.
ಸಭೆಯನ್ನು ಉದ್ದೇಶಿಸಿ ಮಾತನಾಡಿದ ಖಾಝಿ ಸುಲ್ತಾನುಲ್ ಉಲಮಾ ಎ.ಪಿ ಉಸ್ತಾದರು,
“ಖಾಝಿ ಎಂದರೆ ಕೇವಲ ಚಂದ್ರದರ್ಶನ ಅಥವಾ ನಿಕಾಹ್ ನಿರ್ವಹಿಸುವ ವ್ಯಕ್ತಿಯಲ್ಲ. ಸಮಾಜದ ಪ್ರತಿಯೊಂದು ವಿಷಯದಲ್ಲೂ ಖಾಝಿಗೆ ಜವಾಬ್ದಾರಿ ಇದೆ. ಶೈಕ್ಷಣಿಕವಾಗಿ ಮತ್ತು ಸಾಮಾಜಿಕವಾಗಿ ಸಮಾಜವನ್ನು ಮುನ್ನಡೆಸುವಲ್ಲಿ ಖಾಝಿಗಳು ಪ್ರಮುಖ ಪಾತ್ರವಹಿಸಬೇಕು. ಅದಕ್ಕಾಗಿ ಖಾಝಿಗಳು ನಾಯಕತ್ವ ವಹಿಸುವ ಮೊಹಲ್ಲಾಗಳು ಮುಂದಾಗಬೇಕು,” ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಪಂಪ್ವೆಲ್ ತಖ್ವಾ ಮಸೀದಿಯ ಪದಾಧಿಕಾರಿಗಳು ಹಾಗೂ ವಿವಿಧ ಜಿಲ್ಲೆಗಳ ಸಂಯುಕ್ತ ಜಮಾಅತ್ಗಳ ಪ್ರತಿನಿಧಿಗಳು ಭಾಗವಹಿಸಿದ್ದರು.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ