ಮಂಗಳೂರು: ದಕ್ಷಿಣ ಕನ್ನಡ, ಕೊಡಗು, ಶಿವಮೊಗ್ಗ ಹಾಗೂ ಕಾಸರಗೋಡು ಸಂಯುಕ್ತ ಜಮಾಅತ್ಗಳ ಸಭೆ ಹಾಗೂ “ಮೊಹಲ್ಲಾ ವ್ಯವಸ್ಥೆಯ ಮೂಲಕ ಸಮುದಾಯದ ಸಬಲೀಕರಣ” ಯೋಜನೆ ಪಂಪ್ವೆಲ್ ತಖ್ವಾ ಮಸೀದಿಯಲ್ಲಿ ಸುಲ್ತಾನುಲ್ ಉಲಮಾ ಎ.ಪಿ ಉಸ್ತಾದರ ನೇತೃತ್ವದಲ್ಲಿ ನಡೆಯಿತು.
ಕಾರ್ಯಕ್ರಮವು ಕೇರಳ SSF ಅಧ್ಯಕ್ಷ ಸಯ್ಯಿದ್ ಮುನೀರುಲ್ ಅಹ್ದಲ್ ರವರ ದುಆದೊಂದಿಗೆ ಆರಂಭಗೊಂಡಿತು. ಝೈನಿ ಕಾಮಿಲ್ ಸಖಾಫಿ ಸ್ವಾಗತ ಭಾಷಣ ಮಾಡಿದರೆ, ಡಾ. ಅಬ್ದುಲ್ ಹಕೀಮ್ ಅಝ್ಹರಿ ಉಸ್ತಾದರು ಸಭೆಯನ್ನು ಉದ್ಘಾಟಿಸಿ, ಹಿಂದಿನ ಕಾಲದ ಮಸೀದಿ ಮತ್ತು ಮಹಲ್ಲಾಗಳ ನೇತೃತ್ವದ ಮಾದರಿ ಹಾಗೂ ಸಮಾಜಕ್ಕೆ ನೀಡಿರುವ ಸೇವೆಯನ್ನು ಸ್ಮರಿಸಿಕೊಂಡರು.
GEMS (Grass root Empowerment through Mahallu System) ಗುರಿಯನ್ನು ಪ್ರಸ್ತಾಪಿಸಿ ಅಬ್ದು ಸರ್ ಮಾತನಾಡಿ, “ಈ ಮೊಹಲ್ಲಾಗಳಲ್ಲಿ ಬಯಸುವ ಬದಲಾವಣೆಗಳು ಹೇಗಿರಬೇಕು?” ಎಂಬುದರ ಬಗ್ಗೆ ಮನಮುಟ್ಟುವ ರೀತಿಯಲ್ಲಿ ವಿಷಯ ಮಂಡಿಸಿದರು.
ಸಭೆಯನ್ನು ಉದ್ದೇಶಿಸಿ ಮಾತನಾಡಿದ ಖಾಝಿ ಸುಲ್ತಾನುಲ್ ಉಲಮಾ ಎ.ಪಿ ಉಸ್ತಾದರು,
“ಖಾಝಿ ಎಂದರೆ ಕೇವಲ ಚಂದ್ರದರ್ಶನ ಅಥವಾ ನಿಕಾಹ್ ನಿರ್ವಹಿಸುವ ವ್ಯಕ್ತಿಯಲ್ಲ. ಸಮಾಜದ ಪ್ರತಿಯೊಂದು ವಿಷಯದಲ್ಲೂ ಖಾಝಿಗೆ ಜವಾಬ್ದಾರಿ ಇದೆ. ಶೈಕ್ಷಣಿಕವಾಗಿ ಮತ್ತು ಸಾಮಾಜಿಕವಾಗಿ ಸಮಾಜವನ್ನು ಮುನ್ನಡೆಸುವಲ್ಲಿ ಖಾಝಿಗಳು ಪ್ರಮುಖ ಪಾತ್ರವಹಿಸಬೇಕು. ಅದಕ್ಕಾಗಿ ಖಾಝಿಗಳು ನಾಯಕತ್ವ ವಹಿಸುವ ಮೊಹಲ್ಲಾಗಳು ಮುಂದಾಗಬೇಕು,” ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಪಂಪ್ವೆಲ್ ತಖ್ವಾ ಮಸೀದಿಯ ಪದಾಧಿಕಾರಿಗಳು ಹಾಗೂ ವಿವಿಧ ಜಿಲ್ಲೆಗಳ ಸಂಯುಕ್ತ ಜಮಾಅತ್ಗಳ ಪ್ರತಿನಿಧಿಗಳು ಭಾಗವಹಿಸಿದ್ದರು.
















ಇನ್ನಷ್ಟು ಸುದ್ದಿಗಳು
ಹಿರಿಯ ಧಾರ್ಮಿಕ ವಿದ್ವಾಂಸರಾದ ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅಲ್ ಅಝ್ಹರಿ ವಫಾತ್
ಅಂಜುಮಾನ್ ಸಿರಾಜುಲ್ ಇಸ್ಲಾಂ ಮದ್ರಸ ಮುಕ್ಕ- SBS ನೂತನ ಸಮಿತಿ ಅಸ್ತಿತ್ವಕ್ಕೆ
ರೆಸಿಡೆನ್ಸಿ ನಿಯಮ ತಿದ್ದುಪಡಿ- ವಿದೇಶಿಯರಿಗೆ ಇನ್ನು ಮುಂದೆ ಸ್ಪಾನ್ಸರ್ ರಹಿತವಾಗಿ ವೀಸಾ ಲಭ್ಯ
ಖತಾರ್ ಗ್ಯಾಸ್ ಪ್ಲಾಂಟ್ ಸ್ಫೋಟ: ಭಾರತೀಯರು ಸೇರಿದಂತೆ 13 ಮಂದಿ ಮೃತ್ಯು
ಸಮಸ್ತ ಶತಮಾನೋತ್ಸವ: ಕರ್ನಾಟಕ ರಾಜ್ಯ ಸ್ವಾಗತ ಸಮಿತಿ ಅಸ್ತಿತ್ವಕ್ಕೆ- ರಾಜ್ಯಾದ್ಯಂತ ಭವ್ಯ ಕಾರ್ಯಕ್ರಮಗಳ ರೂಪುರೇಷೆ
ಬೆಳಕು ಮತ್ತು ವಿಜ್ಞಾನದ ಅದ್ಭುತ ಸಂಗಮ: ಡಾ. ಮುಹಮ್ಮದ್ ರಾಫಿ ಚೆನ್ನಾರ್
ಕುಂಬ್ರದ ಇಂಡಿಯನ್ ಇವೆಂಟ್ಸ್ ಸಂಸ್ಥೆಗೆ ಸಿರಾಜುದ್ದೀನ್ ಖಾಸಿಮಿ ಉಸ್ತಾದ್ ಭೇಟಿ
ಖತಾರ್ನಲ್ಲಿ ಉದ್ಯೋಗಾವಕಾಶ: ಅಕೌಂಟಿಂಗ್, ಐಟಿ, ಎಂಜಿನಿಯರಿಂಗ್ ಕ್ಷೇತ್ರಗಳಲ್ಲಿ ಭಾರಿ ಬೇಡಿಕೆ
‘ಮೆಟ್ರಾಶ್’ ವರ್ಕ್ ವೀಸಾಕ್ಕೆ ಅರ್ಜಿ ಸಲ್ಲಿಸಲು ಸುಲಭ ವಿಧಾನ- ಕತಾರ್ ಆಂತರಿಕ ಸಚಿವಾಲಯ
DKSC ಮಕ್ಕತುಲ್ ಮುಕರ್ರಮ ವಲಯ ಸಮಿತಿ: ನೂತನ ಅಧ್ಯಕ್ಷರಾಗಿ ಮುಹಮ್ಮದ್ ಶರೀಫ್ ಮರವೂರು ಆಯ್ಕೆ