ಕತಾರ್: ಇರಾನ್-ಇಸ್ರೇಲ್ ಸಂಘರ್ಷದ ಹಿನ್ನೆಲೆಯಲ್ಲಿ ಕತಾರ್ ತನ್ನ ವಾಯುಪ್ರದೇಶವನ್ನು ಮುಚ್ಚಿದೆ. ವಾಯುಪ್ರದೇಶವನ್ನು ತಾತ್ಕಾಲಿಕವಾಗಿ ಮುಚ್ಚಲಾಗಿದೆ. ಈ ಪ್ರದೇಶದ ಪ್ರಸ್ತುತ ಪರಿಸ್ಥಿತಿಯನ್ನು ಪರಿಗಣಿಸಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಕತಾರ್ ವಿದೇಶಾಂಗ ಸಚಿವಾಲಯ ತಿಳಿಸಿದೆ.
ಖತರ್ ರಾಜಧಾನಿ ದೋಹಾದ ಆಗಸದಲ್ಲಿ ಅಗ್ನಿ ಜ್ವಾಲೆಗಳು ಕಾಣಿಸಿಕೊಂಡಿವೆ. ಅದು ವಾಯು ರಕ್ಷಣಾ ವ್ಯವಸ್ಥೆಯೋ ಅಥವಾ ಕ್ಷಿಪಣಿಗಳೋ ಎಂಬುದು ತಕ್ಷಣಕ್ಕೆ ತಿಳಿದಿಲ್ಲ ಎಂದು Aljazeera ವರದಿ ಮಾಡಿದೆ.
ಕತಾರ್ ನಾಗರಿಕರು ಮತ್ತು ನಿವಾಸಿಗಳ ಸುರಕ್ಷತೆಯೇ ಆದ್ಯತೆಯಾಗಿದ್ದು, ಅದಕ್ಕಾಗಿಯೇ ವಾಯುಪ್ರದೇಶವನ್ನು ಮುಚ್ಚುವ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಸಚಿವಾಲಯ ಸ್ಪಷ್ಟಪಡಿಸಿದೆ. ಈ ಕ್ರಮವು ಭದ್ರತಾ ಮುನ್ನೆಚ್ಚರಿಕೆಯ ಭಾಗವಾಗಿದೆ ಮತ್ತು ಆತಂಕದ ಅಗತ್ಯವಿಲ್ಲ ಎಂದು ಕತಾರ್ ವಿದೇಶಾಂಗ ಸಚಿವಾಲಯ ವಿವರಿಸಿದೆ. ಮುಚ್ಚುವಿಕೆಯು ಎಷ್ಟು ಕಾಲ ಇರುತ್ತದೆ ಎಂಬುದು ಪ್ರಸ್ತುತ ಸ್ಪಷ್ಟವಾಗಿಲ್ಲ. ಈ ಕ್ರಮವು ಭಾರತದಿಂದ ಬರುವ ವಿಮಾನಗಳ ಮೇಲೂ ಪರಿಣಾಮ ಬೀರುತ್ತದೆ.
ತನ್ನ ಪರಮಾಣು ತಾಣಗಳ ಮೇಲಿನ ದಾಳಿಯ ನಂತರ ಅಮೆರಿಕದ ವಿರುದ್ದ ಪ್ರತೀಕಾರ ತೀರಿಸಿಕೊಳ್ಳುವುದಾಗಿ ಇರಾನ್ ಈ ಹಿಂದೆ ಪದೇ ಪದೇ ಬೆದರಿಕೆ ಹಾಕಿದ್ದರಿಂದ ಈ ಬೆಳವಣಿಗೆ ನಡೆದಿದೆ ಎಂದು ವಿಶ್ಲೇಷಿಸಲಾಗಿದೆ.
ಇದಕ್ಕೂ ಮೊದಲು, ಖತರ್ನಲ್ಲಿರುವ ಅಮೆರಿಕ ಮತ್ತು ಬ್ರಿಟನ್ ರಾಯಭಾರ ಕಚೇರಿಗಳು ಖತರ್ ನಲ್ಲಿರುವ ತಮ್ಮ ನಾಗರಿಕರು ಮುಂದಿನ ಸೂಚನೆ ಬರುವವರೆಗೆ ಸುರಕ್ಷಿತ ಸ್ಥಳಗಳಲ್ಲಿ ಆಶ್ರಯ ಪಡೆಯುವಂತೆ ಶಿಫಾರಸು ಮಾಡುವ ಹೇಳಿಕೆಗಳನ್ನು ಬಿಡುಗಡೆ ಮಾಡಿದ್ದವು.
ಖತರ್ ನ ಹಲವಾರು ಶಾಲೆಗಳನ್ನೂ ನಾಳೆಯವರೆಗೆ ಮುಚ್ಚಲು ಆದೇಶಿಸಲಾಗಿದೆ.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ