ಮಂಗಳೂರು – ಬದ್ರಿಯಾ ಜುಮಾ ಮಸೀದಿ ಬೊಳ್ಳಾಯಿ ಇದರ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಹಿದಾಯತುಲ್ ಇಸ್ಲಾಂ ಸೆಕೆಂಡರಿ ಮದ್ರಸ ಇದರ ವಿದ್ಯಾರ್ಥಿಗಳ ಅಧಿಕೃತ ಒಕ್ಕೂಟ ಸುನ್ನೀ ಬಾಲ ಸಂಘ (SBS) ಇದರ ನೂತನ ಸಮಿತಿಗೆ ಚುನಾವಣೆ ಪ್ರಕ್ರಿಯೆಯು “ಉತ್ತಮ ಸಮಾಜದ ಉದಾತ್ತ ಪ್ರಜೆಗಳಾಗೋಣ” ಎಂಬ ಸಂದೇಶದೊಂದಿಗೆ ನಡೆಯಿತು.
ಚುನಾವಣೆಗೆ ಮುನ್ನುಡಿಯಾಗಿ ಮದ್ರಸ ಪ್ರಾಂಶುಪಾಲರಾದ ಅಕ್ಬರ್ ಹಿಮಮಿ ಸಖಾಫಿ ಕುಪ್ಪೆಟ್ಟಿ ಇವರ ನೇತೃತ್ವದಲ್ಲಿ ಗ್ರ್ಯಾಂಡ್ ಅಸೆಂಬ್ಲಿ ನಡೆಸಿ ತದ ನಂತರ ಚುನಾವಣಾ ಅಧಿಕಾರಿ ಹಾಫಿಲ್ ಇಸ್ಮಾಯಿಲ್ ಹನೀಫಿ ಕಂಚಿಲ ಇವರ ನೇತೃತ್ವದಲ್ಲಿ ಸ್ಟಾಫ್ ಕೌನ್ಸಿಲ್ ನ ಸಂಪೂರ್ಣ ಸಹಕಾರದೊಂದಿಗೆ ಮದ್ರಸ ಉಸ್ತುವಾರಿಗಳ ಮೇಲ್ನೋಟದಲ್ಲಿ ಬದ್ರಿಯಾ ಜುಮಾ ಮಸೀದಿ ಬೊಳ್ಳಾಯಿ ಆಡಳಿತ ಸಮಿತಿಯ ಮಾರ್ಗದರ್ಶನದಲ್ಲಿ ಬಹಳ ಯಶಸ್ವಿಗಾಗಿ ಚುನಾವಣೆ ನಡೆಯಿತು.
ಮಾದ್ಯಮ,ಮೀಡಿಯಾ, ಮಿಲಿಟರಿ ಝಡ್ ,ಹೆಲ್ಪ್ ಡೆಸ್ಕ್ ,ವಿಶೇಷ ಮೆರುಗು ನೀಡಿತ್ತು .ಸದ್ರಿ ಚುನಾವಣೆಯು ವಿದ್ಯಾರ್ಥಿಗಳಿಗೆ ಮುಂದಿನ ದಿನಗಳಲ್ಲಿ ಸಂವಿಧಾನದ ಹಕ್ಕು ಚಲಾವಣೆಗೆ ಸ್ಫೂರ್ತಿಯಾಗಲಿದೆ ಮತ್ತು ವಿದ್ಯಾರ್ಥಿಗಳ ಉತ್ತಮ ಭವಿಷ್ಯಕ್ಕೆ ನಾಂದೀಯಾಗುವ ಮೂಲಕ ಉತ್ತಮ ಸಮಾಜದ ಉದಾತ್ತ ಪ್ರಜೆಗಳು ಆಗಲಿದ್ದಾರೆ ಎಂದು ಸ್ಥಳೀಯ ಖತೀಬರೂ,SJM ದಕ್ಷಿಣ ಕನ್ನಡ ಜಿಲ್ಲಾ ಪ್ರಧಾನ ಕಾರ್ಯದರ್ಶಿಯೂ ಆದ K.H.U ಶಾಫಿ ಮದನಿ ಅಲ್ ಅಝ್ಹರಿ ಚುನಾವಣೆಯ ಮುನ್ನ ನಡೆದ ಮುನ್ನುಡಿ ಭಾಷಣದಲ್ಲಿ ತಿಳಿಸಿದರು.18 ಅಭ್ಯರ್ಥಿಗಳು 4 ಕ್ಯಾಬಿನೆಟ್ ,149 ಮತದಾರರು ಮತ ಚಲಾಯಿಸುವ ಮೂಲಕ 596 ಮತ ಚಲಾವಣೆಯಾಗಿದ್ದು ಬುಧವಾರ ಸಂಜೆ ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ ಎಂದು ಚುನಾವಣಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
















ಇನ್ನಷ್ಟು ಸುದ್ದಿಗಳು
ಹಿರಿಯ ಧಾರ್ಮಿಕ ವಿದ್ವಾಂಸರಾದ ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅಲ್ ಅಝ್ಹರಿ ವಫಾತ್
ಅಂಜುಮಾನ್ ಸಿರಾಜುಲ್ ಇಸ್ಲಾಂ ಮದ್ರಸ ಮುಕ್ಕ- SBS ನೂತನ ಸಮಿತಿ ಅಸ್ತಿತ್ವಕ್ಕೆ
ರೆಸಿಡೆನ್ಸಿ ನಿಯಮ ತಿದ್ದುಪಡಿ- ವಿದೇಶಿಯರಿಗೆ ಇನ್ನು ಮುಂದೆ ಸ್ಪಾನ್ಸರ್ ರಹಿತವಾಗಿ ವೀಸಾ ಲಭ್ಯ
ಖತಾರ್ ಗ್ಯಾಸ್ ಪ್ಲಾಂಟ್ ಸ್ಫೋಟ: ಭಾರತೀಯರು ಸೇರಿದಂತೆ 13 ಮಂದಿ ಮೃತ್ಯು
ಸಮಸ್ತ ಶತಮಾನೋತ್ಸವ: ಕರ್ನಾಟಕ ರಾಜ್ಯ ಸ್ವಾಗತ ಸಮಿತಿ ಅಸ್ತಿತ್ವಕ್ಕೆ- ರಾಜ್ಯಾದ್ಯಂತ ಭವ್ಯ ಕಾರ್ಯಕ್ರಮಗಳ ರೂಪುರೇಷೆ
ಬೆಳಕು ಮತ್ತು ವಿಜ್ಞಾನದ ಅದ್ಭುತ ಸಂಗಮ: ಡಾ. ಮುಹಮ್ಮದ್ ರಾಫಿ ಚೆನ್ನಾರ್
ಕುಂಬ್ರದ ಇಂಡಿಯನ್ ಇವೆಂಟ್ಸ್ ಸಂಸ್ಥೆಗೆ ಸಿರಾಜುದ್ದೀನ್ ಖಾಸಿಮಿ ಉಸ್ತಾದ್ ಭೇಟಿ
ಖತಾರ್ನಲ್ಲಿ ಉದ್ಯೋಗಾವಕಾಶ: ಅಕೌಂಟಿಂಗ್, ಐಟಿ, ಎಂಜಿನಿಯರಿಂಗ್ ಕ್ಷೇತ್ರಗಳಲ್ಲಿ ಭಾರಿ ಬೇಡಿಕೆ
‘ಮೆಟ್ರಾಶ್’ ವರ್ಕ್ ವೀಸಾಕ್ಕೆ ಅರ್ಜಿ ಸಲ್ಲಿಸಲು ಸುಲಭ ವಿಧಾನ- ಕತಾರ್ ಆಂತರಿಕ ಸಚಿವಾಲಯ
DKSC ಮಕ್ಕತುಲ್ ಮುಕರ್ರಮ ವಲಯ ಸಮಿತಿ: ನೂತನ ಅಧ್ಯಕ್ಷರಾಗಿ ಮುಹಮ್ಮದ್ ಶರೀಫ್ ಮರವೂರು ಆಯ್ಕೆ