ಉಡುಪಿ ಜಿಲ್ಲೆಯ ಬ್ರಹ್ಮಾವರ ಕುಂಜಾಲಿನಲ್ಲಿ ಕಡಿದ ರೀತಿಯಲ್ಲಿರುವ ದನದ ತಲೆಯನ್ನು ಎಸೆದು ಹೋಗಿರುವುದು ಕಂಡು ಬಂದಿದ್ದು ಇದು ಕೋಮು ಸೌಹಾರ್ದವನ್ನು ಹಾಳುಮಾಡಲು ಎಸಗಿದ ದುಷ್ಕೃತ್ಯವಾಗಿರಬೇಕು ಪೊಲೀಸರು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಸಮಗ್ರ ತನಿಖೆ ನಡೆಸಿ ಕಾನೂನು ಕ್ರಮ ಕೈಗೊಳ್ಳಬೇಕು ಅಶಾಂತಿ ಸೃಷ್ಟಿಸಲು ಕೋಮು ಸಂಘರ್ಷಕ್ಕೆ ಕಾರಣವಾಗುವ ಇಂತಹ ಹೇಯ ಕೃತ್ಯವನ್ನು ಯಾರೋ ದುಸ್ಕ್ರಮಿಗಳು ಮಾಡಿರಬಹುದು..
ಸಂಭಂದಪಟ್ಟ ಅಧಿಕಾರಿಗಳು ಅವರನ್ನು ಪತ್ತೆ ಹಚ್ಚಿ ತಕ್ಕ ಶಿಕ್ಷೆಯನ್ನು ನೀಡಬೇಕು ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ನೋಡಿಕೊಳ್ಳಬೇಕು ಎಂದು ಉಡುಪಿ ಜಿಲ್ಲಾ ಸುನ್ನೀ ಸಂಘಟನೆಗಳ ಒಕ್ಕೂಟವಾದ ಸುನ್ನೀ ಕೋ-ಓರ್ಡಿನೇಶನ್ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.







