ಹೊಸಪೇಟೆ: ಧರ್ಮಗಳು ಪ್ರೀತಿಯನ್ನು ಬೋಧಿಸಿದೆ. ಮನುಷ್ಯ ತನ್ನ ಸ್ವಾರ್ಥಕ್ಕಾಗಿ ಧರ್ಮದ ಹೆಸರಿನಲ್ಲಿ ಬಿಕ್ಕಟ್ಟು ಸೃಷ್ಟಿಸಲು ಯತ್ನಿಸುತ್ತಿದ್ದಾನೆ. ಅಂತಹವರನ್ನು ದೂರ ಸರಿಸಿ ನಾವೆಲ್ಲ ಒಟ್ಟಾಗಿ ನಿಂತು ಸೌಹಾರ್ದ ಭಾರತ ಕಟ್ಟೋಣ ಎಂದು ಶ್ರೀ ಹಿರಿ ಶಾಂತವೀರ ಸ್ವಾಮಿಜಿ ಗವಿಮಠ ಹೂವಿನ ಹಡಗಲಿ ಇವರು ಹೇಳಿದರು.
ಎಸ್ಸೆಸ್ಸೆಫ್ ರಾಜ್ಯದ ಇಪ್ಪತ್ತು ಜಿಲ್ಲೆಗಳಲ್ಲಿ ಹಮ್ಮಿಕೊಂಡ ಸೌಹಾರ್ದ ನಡಿಗೆ ಹೂವಿನ ಹಡಗಲಿ ಪಟ್ಟಣಕ್ಕೆ ತಲುಪಿದಾಗ ಕಾರ್ಯಕ್ರಮ ಉದ್ಘಾಟಿಸುತ್ತಾ ಶ್ರೀಗಳು ಮಾತನಾಡಿದರು.
ಎಸ್ಸೆಸ್ಸೆಫ್ ರಾಜ್ಯಾಧ್ಯಕ್ಷ ಹಾಫಿಝ್ ಸುಫ್ಯಾನ್ ಸಖಾಫಿ ಅಲ್ ಹಿಕಮಿ ಮಾತನಾಡಿ ನಮಗೆ ಧರ್ಮಗಳು ಬೇಕು ಧರ್ಮಾಂಧತೆ ಬೇಡ. ಅದಕ್ಕಾಗಿ ನಾಡಿನ ಪ್ರಮುಖ ಸ್ವಾಮೀಜಿಗಳು, ಕ್ರೈಸ್ತ ಫಾದರ್ಗಳು ಹಾಗೂ ಮುಸ್ಲಿಂ ಧರ್ಮ ಗುರುಗಳು ಕೈಕೈ ಹಿಡಿದು ರಾಜ್ಯದ ಇಪ್ಪತ್ತು ಜಿಲ್ಲೆಗಳ ಪ್ರಮುಖ ಪಟ್ಟಣಗಳಲ್ಲಿ ನಡೆಯುವ ಸೌಹಾರ್ದ ನಡಿಗೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಮಲ್ಲನಕೆರೆ ಮಠ ಪೀಠಾಧಿಪತಿ ಚೆನ್ನಬಸವ ಸ್ವಾಮಿಗಳು, ನಾಗತಿಬಸಾಪುರ ಗಿರಿರಾಜ ಹಾಲಸ್ವಾಮಿ, ಶ್ರೀರಾಮ ದೇವಸ್ಥಾನದ ಧರ್ಮದರ್ಶಿ ಡಾ. ರಾಕೇಶಯ್ಯ, ಕಾರ್ಮೇಲ್ ಚರ್ಚ್ ಫಾ. ಡೆಂಜಲ್ ವೇಗಸ್,ಮಾಜಿ ಶಾಸಕ ನಂದಿಹಳ್ಳಿ ಹಾಲಪ್ಪ, ವಾರದ ಗೌಸ್ ಮೊಹಿದ್ದೀನ್, ಕೋಡಿಹಳ್ಳಿ ಮುದುಕಪ್ಪ, ಬಿಚ್ಚುಗತ್ತಿ ಖಾಜಾ, ಹಿರಿಯ ಪತ್ರಕರ್ತ ಅಯ್ಯನಗೌಡ್ರು ಹಾಗೂ ದಲಿತ ಸಂಘಟನೆ, ರೈತ ಸಂಘದ ಮುಖಂಡರು ಉಪಸ್ಥಿತರಿದ್ದರು.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ