ಹೊಸಪೇಟೆ: ಧರ್ಮಗಳು ಪ್ರೀತಿಯನ್ನು ಬೋಧಿಸಿದೆ. ಮನುಷ್ಯ ತನ್ನ ಸ್ವಾರ್ಥಕ್ಕಾಗಿ ಧರ್ಮದ ಹೆಸರಿನಲ್ಲಿ ಬಿಕ್ಕಟ್ಟು ಸೃಷ್ಟಿಸಲು ಯತ್ನಿಸುತ್ತಿದ್ದಾನೆ. ಅಂತಹವರನ್ನು ದೂರ ಸರಿಸಿ ನಾವೆಲ್ಲ ಒಟ್ಟಾಗಿ ನಿಂತು ಸೌಹಾರ್ದ ಭಾರತ ಕಟ್ಟೋಣ ಎಂದು ಶ್ರೀ ಹಿರಿ ಶಾಂತವೀರ ಸ್ವಾಮಿಜಿ ಗವಿಮಠ ಹೂವಿನ ಹಡಗಲಿ ಇವರು ಹೇಳಿದರು.
ಎಸ್ಸೆಸ್ಸೆಫ್ ರಾಜ್ಯದ ಇಪ್ಪತ್ತು ಜಿಲ್ಲೆಗಳಲ್ಲಿ ಹಮ್ಮಿಕೊಂಡ ಸೌಹಾರ್ದ ನಡಿಗೆ ಹೂವಿನ ಹಡಗಲಿ ಪಟ್ಟಣಕ್ಕೆ ತಲುಪಿದಾಗ ಕಾರ್ಯಕ್ರಮ ಉದ್ಘಾಟಿಸುತ್ತಾ ಶ್ರೀಗಳು ಮಾತನಾಡಿದರು.
ಎಸ್ಸೆಸ್ಸೆಫ್ ರಾಜ್ಯಾಧ್ಯಕ್ಷ ಹಾಫಿಝ್ ಸುಫ್ಯಾನ್ ಸಖಾಫಿ ಅಲ್ ಹಿಕಮಿ ಮಾತನಾಡಿ ನಮಗೆ ಧರ್ಮಗಳು ಬೇಕು ಧರ್ಮಾಂಧತೆ ಬೇಡ. ಅದಕ್ಕಾಗಿ ನಾಡಿನ ಪ್ರಮುಖ ಸ್ವಾಮೀಜಿಗಳು, ಕ್ರೈಸ್ತ ಫಾದರ್ಗಳು ಹಾಗೂ ಮುಸ್ಲಿಂ ಧರ್ಮ ಗುರುಗಳು ಕೈಕೈ ಹಿಡಿದು ರಾಜ್ಯದ ಇಪ್ಪತ್ತು ಜಿಲ್ಲೆಗಳ ಪ್ರಮುಖ ಪಟ್ಟಣಗಳಲ್ಲಿ ನಡೆಯುವ ಸೌಹಾರ್ದ ನಡಿಗೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಮಲ್ಲನಕೆರೆ ಮಠ ಪೀಠಾಧಿಪತಿ ಚೆನ್ನಬಸವ ಸ್ವಾಮಿಗಳು, ನಾಗತಿಬಸಾಪುರ ಗಿರಿರಾಜ ಹಾಲಸ್ವಾಮಿ, ಶ್ರೀರಾಮ ದೇವಸ್ಥಾನದ ಧರ್ಮದರ್ಶಿ ಡಾ. ರಾಕೇಶಯ್ಯ, ಕಾರ್ಮೇಲ್ ಚರ್ಚ್ ಫಾ. ಡೆಂಜಲ್ ವೇಗಸ್,ಮಾಜಿ ಶಾಸಕ ನಂದಿಹಳ್ಳಿ ಹಾಲಪ್ಪ, ವಾರದ ಗೌಸ್ ಮೊಹಿದ್ದೀನ್, ಕೋಡಿಹಳ್ಳಿ ಮುದುಕಪ್ಪ, ಬಿಚ್ಚುಗತ್ತಿ ಖಾಜಾ, ಹಿರಿಯ ಪತ್ರಕರ್ತ ಅಯ್ಯನಗೌಡ್ರು ಹಾಗೂ ದಲಿತ ಸಂಘಟನೆ, ರೈತ ಸಂಘದ ಮುಖಂಡರು ಉಪಸ್ಥಿತರಿದ್ದರು.
















ಇನ್ನಷ್ಟು ಸುದ್ದಿಗಳು
ಹಿರಿಯ ಧಾರ್ಮಿಕ ವಿದ್ವಾಂಸರಾದ ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅಲ್ ಅಝ್ಹರಿ ವಫಾತ್
ಅಂಜುಮಾನ್ ಸಿರಾಜುಲ್ ಇಸ್ಲಾಂ ಮದ್ರಸ ಮುಕ್ಕ- SBS ನೂತನ ಸಮಿತಿ ಅಸ್ತಿತ್ವಕ್ಕೆ
ರೆಸಿಡೆನ್ಸಿ ನಿಯಮ ತಿದ್ದುಪಡಿ- ವಿದೇಶಿಯರಿಗೆ ಇನ್ನು ಮುಂದೆ ಸ್ಪಾನ್ಸರ್ ರಹಿತವಾಗಿ ವೀಸಾ ಲಭ್ಯ
ಖತಾರ್ ಗ್ಯಾಸ್ ಪ್ಲಾಂಟ್ ಸ್ಫೋಟ: ಭಾರತೀಯರು ಸೇರಿದಂತೆ 13 ಮಂದಿ ಮೃತ್ಯು
ಸಮಸ್ತ ಶತಮಾನೋತ್ಸವ: ಕರ್ನಾಟಕ ರಾಜ್ಯ ಸ್ವಾಗತ ಸಮಿತಿ ಅಸ್ತಿತ್ವಕ್ಕೆ- ರಾಜ್ಯಾದ್ಯಂತ ಭವ್ಯ ಕಾರ್ಯಕ್ರಮಗಳ ರೂಪುರೇಷೆ
ಬೆಳಕು ಮತ್ತು ವಿಜ್ಞಾನದ ಅದ್ಭುತ ಸಂಗಮ: ಡಾ. ಮುಹಮ್ಮದ್ ರಾಫಿ ಚೆನ್ನಾರ್
ಕುಂಬ್ರದ ಇಂಡಿಯನ್ ಇವೆಂಟ್ಸ್ ಸಂಸ್ಥೆಗೆ ಸಿರಾಜುದ್ದೀನ್ ಖಾಸಿಮಿ ಉಸ್ತಾದ್ ಭೇಟಿ
ಖತಾರ್ನಲ್ಲಿ ಉದ್ಯೋಗಾವಕಾಶ: ಅಕೌಂಟಿಂಗ್, ಐಟಿ, ಎಂಜಿನಿಯರಿಂಗ್ ಕ್ಷೇತ್ರಗಳಲ್ಲಿ ಭಾರಿ ಬೇಡಿಕೆ
‘ಮೆಟ್ರಾಶ್’ ವರ್ಕ್ ವೀಸಾಕ್ಕೆ ಅರ್ಜಿ ಸಲ್ಲಿಸಲು ಸುಲಭ ವಿಧಾನ- ಕತಾರ್ ಆಂತರಿಕ ಸಚಿವಾಲಯ
DKSC ಮಕ್ಕತುಲ್ ಮುಕರ್ರಮ ವಲಯ ಸಮಿತಿ: ನೂತನ ಅಧ್ಯಕ್ಷರಾಗಿ ಮುಹಮ್ಮದ್ ಶರೀಫ್ ಮರವೂರು ಆಯ್ಕೆ