ಕೊಡಗು: ಮುಸ್ಲಿಂ ಸಮುದಾಯದ ಉನ್ನತಿಗೆ ಎಲ್ಲರೂ ಒಗ್ಗಟ್ಟಾಗಿ ಪ್ರಯತ್ನಿಸಬೇಕಿದೆ. ಈ ನಿಟ್ಟಿನಲ್ಲಿ ಸಮುದಾಯದ ಎಲ್ಲಾ ಸೇವನೆಗಳಿಗೆ ಕರ್ನಾಟಕ ಮುಸ್ಲಿಂ ಯೂನಿಟಿ ಸಂಸ್ಥೆ ಮುಂಚೂಣಿಯಲ್ಲಿದೆ ಎಂದು ಸಂಸ್ಥೆಯ ಗೌರವಾಧ್ಯಕ್ಷ ಜಿ ಏ ಬಾವಾರವರು ಹೇಳಿದರು.
ಅವರು ಕರ್ನಾಟಕ ಮುಸ್ಲಿಂ ಯೂನಿಟಿ (ರಿ) ಇದರ ಕೊಡಗು ಜಿಲ್ಲಾ ಘಟಕ ಉದ್ಘಾಟಿಸಿ ಮಾತನಾಡಿದರು.ಸಂಸ್ಥೆಯ ಮೂಲಕ ಹಲವು ಸೇವೆಗಳನ್ನು ನಾವು ಮಾಡಬೇಕು.
ರಾಜಕೀಯ ರಹಿತವಾಗಿ ಕಾನೂನಿನ ಚೌಕಟ್ಟಿನೊಳಗೆ ನಿಂತು ಸೇವೆ ಮುಂದುವರಿಸಿದರೆ ಅದು ಶಾಶ್ವತವಾಗಿ ಉಳಿದುಕೊಳ್ಳುತ್ತದೆ.
ಸರಕಾರದಿಂದ ಸಿಗುವ ಸವಲತ್ತುಗಳು, ಶಿಕ್ಷಣ ಮಾಹಿತಿ, ಬಡ ಮಕ್ಕಳ ಶಿಕ್ಷಣಕ್ಕೆ ಸಹಾಯ, ಸರಕಾರಿ ಉದ್ಯೋಗದ ಬಗ್ಗೆ ಅರಿವು ಮೂಡಿಸುವಿಕೆ, ಡ್ರಗ್ಸ್ ಮುಕ್ತ ಸಮಾಜದ ಬಗ್ಗೆ ಜಾಗೃತಿ ಮೂಡಿಸುವುದು ಹೀಗೆ ಹಲವಾರು ಯೋಜನೆಗಳೊಂದಿಗೆ ನಾವು ಮುನ್ನಡೆಯಬೇಕಿದೆ ಎಂದು ಸಲಹೆ ನೀಡಿದರು.
ಧಾರ್ಮಿಕ ಬೋಧನೆಯೊಂದಿಗೆ ಉತ್ತಮ ಸೇವೆಗೆ ಮುನ್ನಡೆದಾಗ ಅಲ್ಲಾಹನ ಸಹಾಯ ಸಿಗುತ್ತದೆ ಜೊತೆಗೆ ಜನರು ನಮ್ಮನ್ನು ಸ್ವೀಕರಿಸುತ್ತಾರೆ.
ನಾವು ಪ್ರಚೋದನೆಗೆ ಒಳಗಾಗಬಾರದು, ಪ್ರಚೋದಿಸುವವರು ಯಾವತ್ತೂ ಸಮಾಜದ ಒಳಿತನ್ನು ಬಯಸುವುದಿಲ್ಲ ಆದುದರಿಂದ ತಾಳ್ಮೆಯಿಂದ ಆಲೋಚಿಸಿ ಕಾರ್ಯಕ್ಕಿಳಿಯಬೇಕೆಂದು ಹೇಳಿದರು.
ನಾವೆಲ್ಲರೂ ಒಗ್ಗಟ್ಟಾಗಿ ಸಮುದಾಯ ಉನ್ನತಿಗೆ ಶ್ರಮಿಸೋಣ, ಪರಂಪರೆಯ ಸೌಹಾರ್ದತೆಯನ್ನು ಬೆಳೆಸೋಣ ಎಂದು ನಿವೃತ್ತ ಡಿಸಿಪಿ ಜಿ ಏ ಬಾವಾ ರವರು ಹೇಳಿದರು.

















ಇನ್ನಷ್ಟು ಸುದ್ದಿಗಳು
ಹಿರಿಯ ಧಾರ್ಮಿಕ ವಿದ್ವಾಂಸರಾದ ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅಲ್ ಅಝ್ಹರಿ ವಫಾತ್
ಅಂಜುಮಾನ್ ಸಿರಾಜುಲ್ ಇಸ್ಲಾಂ ಮದ್ರಸ ಮುಕ್ಕ- SBS ನೂತನ ಸಮಿತಿ ಅಸ್ತಿತ್ವಕ್ಕೆ
ರೆಸಿಡೆನ್ಸಿ ನಿಯಮ ತಿದ್ದುಪಡಿ- ವಿದೇಶಿಯರಿಗೆ ಇನ್ನು ಮುಂದೆ ಸ್ಪಾನ್ಸರ್ ರಹಿತವಾಗಿ ವೀಸಾ ಲಭ್ಯ
ಖತಾರ್ ಗ್ಯಾಸ್ ಪ್ಲಾಂಟ್ ಸ್ಫೋಟ: ಭಾರತೀಯರು ಸೇರಿದಂತೆ 13 ಮಂದಿ ಮೃತ್ಯು
ಸಮಸ್ತ ಶತಮಾನೋತ್ಸವ: ಕರ್ನಾಟಕ ರಾಜ್ಯ ಸ್ವಾಗತ ಸಮಿತಿ ಅಸ್ತಿತ್ವಕ್ಕೆ- ರಾಜ್ಯಾದ್ಯಂತ ಭವ್ಯ ಕಾರ್ಯಕ್ರಮಗಳ ರೂಪುರೇಷೆ
ಬೆಳಕು ಮತ್ತು ವಿಜ್ಞಾನದ ಅದ್ಭುತ ಸಂಗಮ: ಡಾ. ಮುಹಮ್ಮದ್ ರಾಫಿ ಚೆನ್ನಾರ್
ಕುಂಬ್ರದ ಇಂಡಿಯನ್ ಇವೆಂಟ್ಸ್ ಸಂಸ್ಥೆಗೆ ಸಿರಾಜುದ್ದೀನ್ ಖಾಸಿಮಿ ಉಸ್ತಾದ್ ಭೇಟಿ
ಖತಾರ್ನಲ್ಲಿ ಉದ್ಯೋಗಾವಕಾಶ: ಅಕೌಂಟಿಂಗ್, ಐಟಿ, ಎಂಜಿನಿಯರಿಂಗ್ ಕ್ಷೇತ್ರಗಳಲ್ಲಿ ಭಾರಿ ಬೇಡಿಕೆ
‘ಮೆಟ್ರಾಶ್’ ವರ್ಕ್ ವೀಸಾಕ್ಕೆ ಅರ್ಜಿ ಸಲ್ಲಿಸಲು ಸುಲಭ ವಿಧಾನ- ಕತಾರ್ ಆಂತರಿಕ ಸಚಿವಾಲಯ
DKSC ಮಕ್ಕತುಲ್ ಮುಕರ್ರಮ ವಲಯ ಸಮಿತಿ: ನೂತನ ಅಧ್ಯಕ್ಷರಾಗಿ ಮುಹಮ್ಮದ್ ಶರೀಫ್ ಮರವೂರು ಆಯ್ಕೆ