ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಕೊಳತ್ತಮಜಲು ಎಂಬಲ್ಲಿ ಇತ್ತೀಚೆಗೆ ಕೋಮು ದ್ವೇಷಕ್ಕೆ ಬಲಿಯಾದ ಅಮಾಯಕ ರಹೀಂ ಕುಟುಂಬಕ್ಕೆ ವೈಯಕ್ತಿಕವಾಗಿ 50 ಲಕ್ಷ ರೂ ಸಹಾಯಧನ ನೀಡುವುದಾಗಿ ಭರವಸೆ ನೀಡಿರುವ ರಾಜ್ಯ ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸಚಿವರಾದ ಝಮೀರ್ ಅಹ್ಮದ್ ಖಾನ್ ಅವರು ತಮ್ಮ ಮಾತನ್ನು ಪೂರೈಸಿದ್ದಾರೆ.
ಕೋಮು ದ್ವೇಷಕ್ಕೆ ಬಲಿಯಾದ ರಹೀಂ ಅವರ ಮನೆಗೆ ಭೇಟಿ ನೀಡಿದ್ದ ಕರ್ನಾಟಕ ವಕ್ಫ್ ಕೌನ್ಸಿಲ್ ಇದರ ಉಪಾಧ್ಯಕ್ಷರಾದ ಮೌಲಾನಾ ಶಾಫಿ ಸಅದಿ ಆವರು, ಕುಟುಂಬಕ್ಕೆ ಸಾಂತ್ವನ ನೀಡುವುದರೊಂದಿಗೆ. ವಕ್ಫ್ ಕೌನ್ಸಿಲ್ ಅಧ್ಯಕ್ಷರಾದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಮತ್ತು ವಕ್ಫ್ ಸಚಿವರಾದ ಝಮೀರ್ ಅಹ್ಮದ್ ಖಾನ್ ಅವರು ವೈಯಕ್ತಿಕವಾಗಿ 50 ಲಕ್ಷ ರೂ ಸಹಾಯಧನ ನೀಡಲಿದ್ದಾರೆಂದು ಸಚಿವರು ನೀಡಿರುವ ಭರವಸೆ ಬಗ್ಗೆ ಶಾಫಿ ಸಅದಿಯವರು ರಹೀಮ್ ಕುಟುಂಬಕ್ಕೆ ಮಾಹಿತಿ ನೀಡಿದ್ದರು.
ಇಂದು ಬೆಂಗಳೂರಿನಲ್ಲಿ ವಿಧಾನ ಸಭಾ ಸ್ಪೀಕರ್ ಯು.ಟಿ. ಖಾದರ್ ಅವರ ವಸತಿಯಲ್ಲಿ ಖಾಝಿಗಳಾದ ತ್ವಾಖಾ ಅಹ್ಮದ್ ಮುಸ್ಲಿಯಾರ್ ಮತ್ತು ಮಾಣಿ ಉಸ್ತಾದರನ್ನೊಳಗೊಂಡ ನಿಯೋಗಕ್ಕೆ ಸಚಿವ ಝಮೀರ್ ಖಾನ್ ಅವರು 50 ಲಕ್ಷ ರೂ. ಸಹಾಯಧನವನ್ನು ಹಸ್ತಾಂತರಿಸಿದರು. ಈ ಮೂಲಕ ಕೊಟ್ಟ ಮಾತನ್ನು ಉಳಿಸಿಕೊಂಡು ಝಮೀರ್ ಅಹಮದ್ ಖಾನ್ ಅವರು ಸೈ ಎನಿಸಿಕೊಂಡಿದ್ದಾರೆ.ದುಷ್ಕರ್ಮಿಗಳ ದಾಳಿಯಿಂದ ಗಂಭೀರ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ಶಾಫಿ ಅವರಿಗೂ 5 ಲಕ್ಷ ರೂ. ಸಹಾಯಧನ ನೀಡಿದ್ದಾರೆ.
ನಿಯೋಗದಲ್ಲಿ ವಕ್ಫ್ ಕೌನ್ಸಿಲ್ ಇದರ ಉಪಾಧ್ಯಕ್ಷರಾದ ಮೌಲಾನಾ ಶಾಫಿ ಸಅದಿ, ನಿವೃತ್ತ ಡಿಸಿಪಿ ಜಿ.ಎ.ಬಾವ, ದ.ಕ.ಜಿಲ್ಲಾ ವಖ್ಫ್ ಸಲಹಾ ಸಮಿತಿ ಅಧ್ಯಕ್ಷರಾದ ನಾಸಿರ್ ಲಕ್ಕಿ ಸ್ಟಾರ್ ಸಹಿತವಿರುವ ಧಾರ್ಮಿಕ ಹಾಗೂ ರಾಜಕೀಯ ಮುಖಂಡರಿದ್ದರು.

















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ