ಮಂಗಳೂರು: ಕೋಮು ವೈಷಮ್ಯಗಳು ಹೆಚ್ಚುತ್ತಿರುವ ಕರಾವಳಿ ಕರ್ನಾಟಕದಲ್ಲಿ ಸರ್ವಧರ್ಮೀಯರ ನಡುವೆ ಕೋಮು ಸೌಹಾರ್ದವನ್ನು ಪ್ರೋತ್ಸಾಹಿಸುವ ಸಲುವಾಗಿ ಕರ್ನಾಟಕ ರಾಜ್ಯ ಸುನ್ನಿ ಯುವಜನ ಸಂಘವು ಹಮ್ಮಿಕೊಂಡಿರುವ ‘ಕರಾವಳಿ ನೆಲದಲ್ಲಿ ಸೌಹಾರ್ದ ಸಂಚಾರ’ ಕಾರ್ಯಕ್ರಮದ ಸ್ವಾಗತ ಸಮಿತಿ ಕಚೇರಿಯನ್ನು ನಗರದ ಬಾವುಟಗುಡ್ಡೆ ಈದ್ಗಾ ಮಸೀದಿ ಸಮೀಪದ ಸೈನಿಕ ಭವನ ಕಟ್ಟಡದಲ್ಲಿ ಉದ್ಘಾಟಿಸಲಾಯಿತು.


ಎಸ್ ವೈ ಎಸ್ ರಾಜ್ಯ ಉಪಾಧ್ಯಕ್ಷರುಗಳಾದ ಸಯ್ಯಿದ್ ಇಲ್ಯಾಸ್ ತಂಙಳ್ ಮಡಿಕೇರಿ, ಸಯ್ಯಿದ್ ಹಾಮೀಂ ತಂಙಳ್ ಬಾಳೆಹೊನ್ನೂರು, ಸಯ್ಯಿದ್ ಶಾಫೀ ನಈಮಿ ತಂಙಳ್ ಸಕಲೇಶಪುರ ಉದ್ಘಾಟಿಸಿದರು. ಜುಲೈ 14,15, 16 ರಂದು ಕುಂದಾಪುರದಿಂದ ಸುಳ್ಯದ ತನಕ ಸಾಗಲಿರುವ ಸೌಹಾರ್ದ ಸಂಚಾರದಲ್ಲಿ ಬಹುಧರ್ಮೀಯ ಬಂಧುಗಳು ಭಾಗವಹಿಸಲಿದ್ದು, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ 17 ಪ್ರಮುಖ ಪಟ್ಟಣಗಳಲ್ಲಿ ಸೌಹಾರ್ದದ ಸಂದೇಶ ಸಾರಲಿದೆ.
ರಾಜ್ಯಾಧ್ಯಕ್ಷ ಬಶೀರ್ ಸಅದಿ ಬೆಂಗಳೂರು ಅಧ್ಯಕ್ಷತೆ ವಹಿಸಿದರು. ರಾಜ್ಯ ನಾಯಕರಾದ ಹಸೈನಾರ್ ಆನೆಮಹಲ್, ಮುಹಮ್ಮದ್ ಅಲೀ ಸಖಾಫಿ ಅಶ್ಅರಿಯ್ಯ, ಅಬ್ದುಲ್ ರಹ್ಮಾನ್ ರಝ್ವಿ, ಖಲೀಲ್ ಮಾಲಿಕಿ, ನ್ಯಾಯವಾದಿ ಇಲ್ಯಾಸ್ ನಾವುಂದ,ಇಬ್ರಾಹಿಂ ಮೂಡಿಗೆರೆ, ಅಶ್ರಫ್ ಎಮ್ಮೆಮಾಡು, ಮುಸ್ತಫಾ ಕೋಡಪದವು, ಜಿಲ್ಲಾ ನಾಯಕರಾದ ಮಹ್ಬೂಬ್ ಸಖಾಫಿ, ಅಶ್ರಫ್ ಸಖಾಫಿ ಮೂಡಡ್ಕ, ಇಸ್ಮಾಯಿಲ್ ಮಾಸ್ಟರ್ ಮರಿಕ್ಕಳ, ಸಾಲಿಹ್ ಮುರ, ಶಾಫಿ ಸಖಾಫಿ ಕೊಕ್ಕಡ, ಯಾಕೂಬ್ ಸಅದಿ ನಾವೂರು, ನವಾಝ್ ಸಖಾಫಿ ಅಡ್ಯಾರ್, ಹಸನ್ ಪಾಂಡೇಶ್ವರ, ನಝೀರ್ ವಳವೂರು, ಝೀನತ್ ಭಕ್ಷ್ ಯತೀಂ ಖಾನಾ ಕಾರ್ಯದರ್ಶಿ ರಶೀದ್ ಹಾಜಿ ಪಾಂಡೇಶ್ವರ, ಸಮಾಜ ಸೇವಕರಾದ ಅಶ್ರಫ್ ಕಿನಾರ, ಫಾರೂಕ್ ಜೆಪ್ಪು, ಬಶೀರ್ ಬಜ್ಪೆ ಮತ್ತಿತರರು ಉಪಸ್ಥಿತರಿದ್ದರು.
ಎಸ್ ವೈ ಎಸ್ ರಾಜ್ಯ ಕಾರ್ಯದರ್ಶಿ ಕೆ ಎಂ ಅಬೂಬಕರ್ ಸಿದ್ದೀಕ್ ಸ್ವಾಗತಿಸಿ, ಕೋಶಾಧಿಕಾರಿ ಮನ್ಸೂರ್ ಕೋಟೆಗದ್ದೆ ಧನ್ಯವಾದ ಸಲ್ಲಿಸಿದರು.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ